PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಚಾಂಪಿಯನ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕೊಡಗು > ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಚಾಂಪಿಯನ್
ಕೊಡಗು

ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಚಾಂಪಿಯನ್

ಪ್ರತಿನಿಧಿ
Last updated: May 22, 2024 7:09 pm
ಪ್ರತಿನಿಧಿ
Published May 22, 2024
Share
SHARE

ಮೂರ್ನಾಡು ಪ್ರಥಮ ದರ್ಜೆ ಕಾಲೇಜು ರನ್ನರ್ ಅಪ್ : ರಾಜ್ಯ ಮಟ್ಟದ ಅಂತರ ಪದವಿ ಕಾಲೇಜು ಟೂರ್ನಿ

ಸಣ್ಣುವಂಡ ಕಿಶೋರ್ ನಾಚಪ್ಪ ಗೋಣಿಕೊಪ್ಪ

ಪೊನ್ನಂಪೇಟೆ ಟರ್ಫ್ ಮೈದಾನದಲ್ಲಿ ವಿರಾಜಪೇಟೆ ಸೆಂಟ್ ಆನ್ಸ್ ಕಾಲೇಜು ವತಿಯಿಂದ ಆಯೋಜಿಸಿರುವ ರಾಜ್ಯ ಮಟ್ಟದ ಅಂತರ ಪದವಿ ಕಾಲೇಜು ಟೂರ್ನಿಯಲ್ಲಿ ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು (ಎ) ತಂಡ ಚಾಂಪಿಯನ್ ಸ್ಥಾನ ಅಲಂಕರಿಸಿದ್ದು, ಮೂರ್ನಾಡು ಪ್ರಥಮ ದರ್ಜೆ ಕಾಲೇಜು (ಎ) ತಂಡಕ್ಕೆ ರನ್ನರ್ ಅಪ್ ಸ್ಥಾನ ಸಿಕ್ಕಿದೆ.

ಬುಧವಾರ ನಡೆದ ಫೈನಲ್ ಹಣಾಹಣಿಯಲ್ಲಿ ರೋಚಕ ಆಟ ಪ್ರದರ್ಶನಗೊಂಡಿತು. ಟೈಬ್ರೇಕರ್‌ನಲ್ಲಿ ಎಫ್‌ಎಂಸಿ ತಂಡವು 6-5 ಗೋಲುಗಳಿಂದ ಗೆದ್ದು ಪ್ರಶಸ್ತಿಗೆ ಮುತ್ತಿಕಿತು. ಪಂದ್ಯದ ನಿಗದಿತ ಸಮಯದಲ್ಲಿ ಸಮಬಲದ ಹೋರಾಟದಿಂದಾಗಿ ಉಭಯ ತಂಡಗಳು 3-3 ಗೋಲುಗಳೊಂದಿಗೆ ಟೈ ಮಾಡಿಕೊಂಡಿತು. ಪೆನಾಲ್ಟಿ ಶೂಟೌಟ್ ಮೂಲಕ ಎಫ್‌ಎಂಸಿ ಗೆದ್ದು ಬೀಗಿತು. ಎಫ್‌ಎಂಸಿ ಪರವಾಗಿ ಪ್ರಜ್ವಲ್, ಕವನ್, ನಾಣಯ್ಯ ತಲಾ ಒಂದೊಂದು ಗೋಲು ಸಿಡಿಸಿದರು. ಮೂರ್ನಾಡು ಪರ ಸುಬ್ರಮಣಿ 2 ಗೋಲು, ಎಂ.ಬಿ. ದೇವಯ್ಯ 1 ಗೋಲು ಹೊಡೆದರು.

- ಜಾಹೀರಾತು -

ಮೊದಲ ಸೆಮಿ ಫೈನಲ್‌ನಲ್ಲಿ ಮೂರ್ನಾಡು ಪ್ರಥಮ ದರ್ಜೆ ಕಾಲೇಜು ತಂಡವು ವಿರಾಜಪೇಟೆ ಕಾವೇರಿ ಕಾಲೇಜು (ಎ) ತಂಡವನ್ನು 2-1 ಗೋಲುಗಳಿಂದ ಸೋಲಿಸಿತು. ಮೂರ್ನಾಡು ಪರ ಸುಬ್ರಮಣಿ, ಎಂ.ಬಿ.ದೇವಯ್ಯ ತಲಾ ಒಂದೊಂದು ಗೋಲುಗಳ ನೆರವಿನಿಂದ ಗೆದ್ದು ಬೀಗಿತು. ಕಾವೇರಿ ಕಾಲೇಜು ಗೋಲು ಗಳಿಸಲಾಗದೆ ಫೈನಲ್ ಪ್ರವೇಶ ಕೈಚೆಲ್ಲಿಕೊಂಡಿತು.

ಎರಡನೇ ಸೆಮಿ ಫೈನಲ್‌ನಲ್ಲಿ ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ತಂಡವು ವಿರಾಜಪೇಟೆ ಕಾವೇರಿ ಕಾಲೇಜು (ಬಿ) ತಂಡದ ವಿರುದ್ದ 3-0 ಗೋಲುಗಳಿಂದ ಗೆದ್ದು ಬೀಗಿತು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಆಟಗಾರ ಪ್ರಜ್ವಲ್ 3 ಹ್ಯಾಟ್ರಿಕ್ ಗೋಲು ಬಾರಿಸಿ ಮಿಂಚು ಹರಿಸಿದರು.

ಕುಪ್ಪಂಡ ದಿಲನ್ ಬೋಪಣ್ಣ, ಕೋಡಿಮಣಿಯಂಡ ಅಪ್ಪಣ್ಣ, ಅಪ್ಪುಮಣಿಯಂಡ ಅಯ್ಯಪ್ಪ, ಕಾಳಿಮಾಡ ಕಿರಣ್ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.

ಸುಗುಣ ಸರಣಿ ಶ್ರೇಷ್ಠ: ಎಫ್‌ಎಂಸಿ ಆಟಗಾರ ಸುಗುಣ ಸರಣಿ ಶ್ರೇಷ್ಠ ಪ್ರಶಸ್ತಿ ಗಿಟ್ಟಿಸಿಕೊಂಡರು. ಎಫ್‌ಎಂಸಿ ಆಟಗಾರ ಯಶ್ವಂತ್ ಉತ್ತಮ ಗೋಲ್ ಕೀಪರ್, ಮೂರ್ನಾಡು ಆಟಗಾರ ಸುಬ್ರಮಣಿ ಪಂದ್ಯ ಶ್ರೇಷ್ಠ, ವಿರಾಜಪೇಟೆ ಕಾವೇರಿ ಕಾಲೇಜು ಆಟಗಾರ ಪೊನ್ನಣ್ಣ ಶಿಸ್ತುಬದ್ಧ ಆಟಗಾರ ಸ್ಥಾನ ಪಡೆದುಕೊಂಡರು.

ಆಯ್ಕೆಯಲ್ಲಿ ಭ್ರಷ್ಠಾಚಾರವಿಲ್ಲ: ರಾಜ್ಯ ಮಟ್ಟಕ್ಕೆ ಕ್ರೀಡಾಪುಟಗಳಿಗೆ ಅವಕಾಶ ನೀಡುವ ವಿಚಾರದಲ್ಲಿ ಭ್ರಷ್ಟಚಾರ ಇದೆ ಎಂಬ ಆರೋಪ ಸರಿಯಲ್ಲ ಎಂದು ಅಂತಾರಾಷ್ಟ್ರೀಯ ರೆಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಅಭಿಪ್ರಾಯ ಪಟ್ಟರು. ಸ್ಥಳೀಯ ಮಟ್ಟದಲ್ಲಿ ಉತ್ತಮ ಆಟ ಪ್ರದರ್ಶನದ ಮೂಲಕ ಗಮನ ಸೆಳೆಯುವ ಪ್ರಯತ್ನ ಮುಂದುವರಿಸಬೇಕಿದೆ. ವಿದ್ಯಾರ್ಥೀ ಜೀವನದಲ್ಲಿ ದೊರೆಯುವ ಅವಕಾಶಗಳನ್ನು ಕೈಚೆಲ್ಲಬಾರದು. ಇದರಿಂದ ಅವಕಾಶ ತೆರೆದುಕೊಳ್ಳುತ್ತದೆ. ದೃಡತೆ ಮುಖ್ಯವಾಗಿದೆ. ಕಾಲೇಜು ಮತ್ತು ರಾಷ್ಟ್ರಮಟ್ಟದ ಕ್ರೀಡಾ ಕ್ಷೇತ್ರಗಳಲ್ಲಿ ತೊಡಗಿಕೊಳ್ಳಲು ಕಾಲೇಜು ಹಂತದ ಪ್ರದರ್ಶನ ಮುಖ್ಯವಾಗಲಿದೆ ಎಂದರು.

ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಫಾದರ್ ಮದುಲೈ ಮುತ್ತು ಮಾತನಾಡಿ, ರಾಷ್ಟ್ರಗಳ ನಡುವಿನ ಬಾಂಧವ್ಯಕ್ಕೆ ಕ್ರೀಡೆ ಸಹಕಾರಿಯಾಗುತ್ತಿದೆ. ಕ್ರೀಡೆಯಿಂದ ಒಗ್ಗಟ್ಟು ಮೂಡಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.

ವಿರಾಜಪೇಟೆ ಕಾವೇರಿ ಕಾಲೇಜು (ಎ) ಮತ್ತು (ಬಿ) ತಂಡ, ಸೆಂಟ್ ಆನ್ಸ್, ಮಡಿಕೇರಿ ಎಫ್‌ಎಂಸಿ, ಕಾವೇರಿ ಪಾಲಿಟೆಕ್ನಿಕ್, ಗೋಣಿಕೊಪ್ಪ ಕಾವೇರಿ ಕಾಲೇಜು, ಮೂರ್ನಾಡು ಪ್ರಥಮ ದರ್ಜೆ, ಸೆಂಟ್ ಜೋಸೆಫ್, ರೇವಾ, ಸಪೈಂಟ್, ಗೋಣಿಕೊಪ್ಪ ಲಯನ್ಸ್ ಸೇರಿದಂತೆ 16 ತಂಡಗಳು ಟೂರ್ನಿಯಲ್ಲಿ ಭಾಗವಹಿಸಿದ್ದವು.

ಮೂಕಚಂಡ ಬೊಳ್ಳಮ್ಮ ಪಂದ್ಯದ ವೀಕ್ಷಕ ವಿವರಣೆ ನೀಡಿದರು. ದೃಶ್ಯ ಸ್ವಾಗತಿಸಿದರು. ದೇಚಮ್ಮ ವಂದಿಸಿದರು. ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಬಿಬಿಎ ವಿಭಾಗದ ಮುಖ್ಯಸ್ಥೆ ಬಿ. ಡಿ. ಹೇಮಾ, ದೈಹಿಕ ಶಿಕ್ಷಣ ಶಿಕ್ಷಕ ರಾಜುರೈ, ವಿದ್ಯಾರ್ಥಿ ನಾಯಕ ತನೀಶ್ ಇದ್ದರು.

ಫೋಟೋ 22 ಎಂಡಿಕೆ 03 ; ಚಾಂಪಿಯನ್ ಫೀ. ಮಾ. ಕೆ. ಎಂ. ಕಾರ್ಯಪ್ಪ ಕಾಲೇಜು ತಂಡ
04 ; ರನ್ನರ್ ಅಪ್ ಮೂರ್ನಾಡು ಪ್ರಥಮ ದರ್ಜೆ ಕಾಲೇಜು ರನ್ನರ್ ಅಪ್
05 ; ಅಂತಾರಾಷ್ಟ್ರೀಯ ರೆಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಮಾತನಾಡಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕೊಡಗು

ಉತ್ತುಂಗಕ್ಕೆ ಕೊಡವ ಸಾಹಿತ್ಯ ಅಕಾಡೆಮಿ

March 17, 2024
ಕೊಡಗು

ಪಾಲಕರಿಗೂ ಶಿಕ್ಷಣ ಸಂಸ್ಥೆಗಳ ಪರಿಚಯ ಮುಖ್ಯ

June 13, 2024
ಕೊಡಗು

ಮಡಿಕೇರಿಯಲ್ಲಿ ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ಬೇಸಿಗೆ ಶಿಬಿರ ಆರಂಭ :

April 2, 2024
ಕೊಡಗು

ಗಾಳಿಬೀಡು ವಲಯ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ

April 2, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?