– ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್
– ಡಿ.ಕೆ. ಸುರೇಶ್ ಠೇವಣಿ ಕಳೆದುಕೊಳ್ಳುತ್ತಾರೆ
ಪ್ರತಿನಿಧಿ ವರದಿ ಮೈಸೂರು
ಹಾಸನದಲ್ಲಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದಲ್ಲಿ ಬಿಜೆಪಿ 28ಕ್ಕೆ 28 ಕ್ಷೇತ್ರ ಗೆಲ್ಲುತ್ತೇವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದ್ದು, ಡಿ.ಕೆ ಸುರೇಶ್ ಠೇವಣಿ ಕಳೆದುಕೊಳ್ಳುತ್ತಾರೆ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಭವಿಷ್ಯ ನುಡಿದರು.
ಮೈಸೂರಿನಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿ, ನಿನ್ನೆ ಹಾಸನಕ್ಕೆ ಹೋಗಿದ್ದೆ, ಅಲ್ಲಿ ಯಾವುದೇ ಸಮಸ್ಯೆ ಕಾಣಲಿಲ್ಲ. ಎಲ್ಲರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್ ನವರಿಗಿಂತಲೂ ಬಿಜೆಪಿ ಕಾರ್ಯಕರ್ತರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಪ್ರೀತಮ್ ಗೌಡ ಅವರ ಬೆಂಬಲಿಗರು ಕೆಲಸ ಮಾಡುತ್ತಿದ್ದಾರೆ. ಅವಶ್ಯಕತೆ ಬಿದ್ದರೆ ಅವರು ಹಾಸನಕ್ಕೆ ಹೋಗುತ್ತಾರೆ ಎಂದರು.
ನಾನು ಉತ್ತರ ಪ್ರದೇಶದವನು. ಅಲ್ಲಿಯೂ ಚುನಾವಣೆ ನಡೆಯುತ್ತಿದೆ. ಆದರೆ ನಾನು ಕರ್ನಾಟಕ ಉಸ್ತುವಾರಿ ಆಗಿದ್ದೇನೆ. ಅದೇ ರೀತಿ ಪ್ರೀತಮ್ ಮೈಸೂರು ಚಾಮರಾಜನಗರ ಉಸ್ತುವಾರಿ ಆಗಿದ್ದಾರೆ. ಯಾವಗಲೂ ಅಲ್ಲಿಗೆ ಹೋಗಲು ಸಾಧ್ಯವಿಲ್ಲ. ಪ್ರಜ್ವಲ್ ರೇವಣ್ಣ ನಿನ್ನೆ ಎರಡು ಗಂಟೆ ಜೊತೆಗಿದ್ದರು. ಅವರು ಪ್ರೀತಮ್ ಬಗ್ಗೆ ಕಾರ್ಯಕರ್ತರ ಬಗ್ಗೆ ಏನನ್ನೂ ಹೇಳಲಿಲ್ಲ. ಪ್ರೀತಮ್-ಪ್ರಜ್ವಲ್ ಮೀಟಿಂಗ್ ಬಗ್ಗೆ ಮಾಹಿತಿ ಇಲ್ಲ, ಯಾವ ಸಭೆಯೂ ಇಲ್ಲ. ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ, ಪ್ರೀತಂಗೌಡ ನಡುವೆ ಉತ್ತಮ ಸಂಬಂಧವಿದೆ. ಇಬ್ಬರ ಭೇಟಿಗೆ ನನ್ನ ಮಧ್ಯಸ್ಥಿಕೆ ಅಗತ್ಯ ಏನಿದೆ ? ಎಂದು ಪ್ರಶ್ನಿಸಿದ ಅವರು, ಜನ ಏನಾದರೂ ಮಾತನಾಡಿಕೊಳ್ಳಲಿ. ಇಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸುಮಾರು 2 ಗಂಟೆ ಪ್ರಜ್ವಲ್ ರೇವಣ್ಣ ಜತೆ ಮಾತನಾಡಿದೆ. ನನ್ನೊಂದಿಗೆ ಯಾವುದೇ ದೂರು ಹೇಳಲಿಲ್ಲ. ನನ್ನ ಉಪಸ್ಥಿತಿಯಲ್ಲೇ ಸುದ್ದಿಗೋಷ್ಠಿ ಕೂಡ ಮಾಡಿದರು. ಇಬ್ಬರ ನಡುವೆ ಗೊಂದಲ ಇದೆ ಅಂತ ನನಗೆ ಅನ್ನಿಸುತ್ತಿಲ್ಲ. ಯಾಕೆ ಏನೋ ಆಗಿದೆ ಅನ್ನುವ ರೀತಿ ಭಾವಿಸುತ್ತೀರಿ? ಎಂದು ಪ್ರಶ್ನಿಸಿದರು.
melgade cote use madkoli
ಹಾಸನದಲ್ಲಿ ಪ್ರೀತಂಗೌಡ ಸೋತಿದ್ದರೂ ಪವರ್ಫುಲ್ ಲೀಡರ್. ಅವರಿಗೆ ಹಾಸನ ಒಗ್ಗೂಡಿಸಲು ಒಂದು ದಿನ ಸಾಕು. ಈಗಾಗಲೇ ಆ ಕೆಲಸವನ್ನು ಮಾಡುತ್ತಿದ್ದಾರೆ. ಜನರು ಏನಾದರೂ ಮಾತನಾಡಲಿ, ಹಾಸನದಲ್ಲಿ ಯಾವುದೇ ಸಮಸ್ಯೆ ಇಲ್ಲ.
– ರಾಧಾ ಮೋಹನ್ ದಾಸ್, ಬಿಜೆಪಿ ರಾಜ್ಯ ಉಸ್ತುವಾರಿ.