PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹೆಚ್.ಡಿ. ಕೋಟೆ: ಕಳಪೆ ಕಾಮಗಾರಿ ಖಂಡಿಸಿ KRIDL ಅಧಿಕಾರಿಗಳಿಗೆ ದಿಗ್ಬಂಧನ; ಗ್ರಾಮಸ್ಥರ ಆಕ್ರೋಶ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಹೆಚ್.ಡಿ. ಕೋಟೆ: ಕಳಪೆ ಕಾಮಗಾರಿ ಖಂಡಿಸಿ KRIDL ಅಧಿಕಾರಿಗಳಿಗೆ ದಿಗ್ಬಂಧನ; ಗ್ರಾಮಸ್ಥರ ಆಕ್ರೋಶ
ಮುಖಪುಟಮೈಸೂರು ಗ್ರಾಮಾಂತರ

ಹೆಚ್.ಡಿ. ಕೋಟೆ: ಕಳಪೆ ಕಾಮಗಾರಿ ಖಂಡಿಸಿ KRIDL ಅಧಿಕಾರಿಗಳಿಗೆ ದಿಗ್ಬಂಧನ; ಗ್ರಾಮಸ್ಥರ ಆಕ್ರೋಶ

Prathinidhi News
Last updated: January 22, 2026 11:32 am
Prathinidhi News
Published January 22, 2026
Share
SHARE

ಹೆಚ್ ಡಿ ಕೋಟೆ, ಜನವರಿ 22, 2026 :ಹೆಚ್.ಡಿ. ಕೋಟೆ ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ವತಿಯಿಂದ ಕೈಗೆತ್ತಿಕೊಳ್ಳಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಅತ್ಯಂತ ಕಳಪೆಯಾಗಿವೆ ಎಂದು ಆರೋಪಿಸಿ ಗ್ರಾಮಸ್ಥರು KRIDL ಅಧಿಕಾರಿಗಳನ್ನು ತಡೆದು ದಿಗ್ಬಂಧನ ವಿಧಿಸಿದ ಘಟನೆ ನಡೆದಿದೆ.

ಅಲ್ಪಸಂಖ್ಯಾತರ ಇಲಾಖೆಯ ಒಟ್ಟು 5 ಕೋಟಿ ರೂಪಾಯಿ ಅನುದಾನದಡಿ ಮುಸ್ಲಿಂ ಬ್ಲಾಕ್‌ನಲ್ಲಿ 1.85 ಕೋಟಿ, ಚಿನ್ನಪ್ಪನಪಾಳ್ಯದಲ್ಲಿ 1.50 ಕೋಟಿ ಹಾಗೂ ನಾಗನಹಳ್ಳಿಯಲ್ಲಿ 1.65 ಕೋಟಿ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳನ್ನು ನಡೆಸಲಾಗಿತ್ತು. ಆದರೆ, ಈ ಕಾಮಗಾರಿಗಳು ಅಂದಾಜು ಪಟ್ಟಿಯಂತೆ ನಡೆಯದೆ ಕೇವಲ ಹಣ ಲೂಟಿ ಮಾಡಲಾಗಿದೆ ಎಂದು ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ.

ಕಾಮಗಾರಿ ಪರಿಶೀಲನೆಗಾಗಿ ಗ್ರಾಮಕ್ಕೆ ಆಗಮಿಸಿದ್ದ ಅಧಿಕಾರಿಗಳನ್ನು ಸುತ್ತುವರಿದ ಗ್ರಾಮಸ್ಥರು, ಕೂಡಲೇ ಕಾಮಗಾರಿಯ ಅಂದಾಜು ಪಟ್ಟಿ (Estimate Copy) ನೀಡುವಂತೆ ಬಿಗಿಪಟ್ಟು ಹಿಡಿದರು. ಅಂದಾಜು ಪಟ್ಟಿ ನೀಡುವವರೆಗೂ ಗ್ರಾಮದಿಂದ ಹೊರಹೋಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರಿಂದ ಅಧಿಕಾರಿಗಳು ಸಂಜೆಯವರೆಗೂ ಗ್ರಾಮದಲ್ಲೇ ಉಳಿಯಬೇಕಾಯಿತು.

- ಜಾಹೀರಾತು -

ವಿಷಯ ತಿಳಿದು ಸ್ಥಳಕ್ಕೆ ಇಲಾಖೆಯ ಉನ್ನತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂತಿಮವಾಗಿ ಅಂದಾಜು ಪಟ್ಟಿಯನ್ನು ಒದಗಿಸಿ, ಕಾಮಗಾರಿಯ ಗುಣಮಟ್ಟದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಅಧಿಕಾರಿಗಳನ್ನು ಬಿಡುಗಡೆ ಮಾಡಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟರಾಜಕೀಯ

ಕಾವೇರಿ ನಿವಾಸದಲ್ಲಿ ಸಿಎಂ- ಡಿಸಿಎಂ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ; ಪವರ್‌ ಶೇರಿಂಗ್‌ ಫೈಟ್‌ ಗೆ ಬಿತ್ತಾ ತೆರೆ.?

November 29, 2025
ಬೆಂಗಳೂರುಮುಖಪುಟ

ರಸ್ತೆ ಅಪಘಾತದಲ್ಲಿ IAS ಅಧಿಕಾರಿ ಮಹಾಂತೇಶ ಬೀಳಗಿ ಸಾ*ವು..!

November 26, 2025
ಮುಖಪುಟಮೈಸೂರು ನಗರ

ಹೊಸ ವರ್ಷದ ಸಂಭ್ರಮ ; . ಯೋಗ ನರಸಿಂಹಸ್ವಾಮಿ ದೇಗುಲದಲ್ಲಿ ಜನಜಂಗುಳಿ.. 2 ಲಕ್ಷ ಲಡ್ಡು ವಿತರಣೆ..

January 1, 2026
ಚಾಮರಾಜನಗರಮುಖಪುಟಮೈಸೂರು ಗ್ರಾಮಾಂತರ

ತಗ್ಗಲೂರಿನಲ್ಲಿ ಬೋನಿಗೆ ಬಿತ್ತು ಉಪಟಳ ನೀಡುತ್ತಿದ್ದ ಚಿರತೆ : ರೈತರಿಗೆ ನಿಟ್ಟುಸಿರು

November 24, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?