PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಧ್ವಜಾರೋಹಣ ಮಾಡಿ ಮತದಾನ ಹಬ್ಬ ಆಚರಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ಧ್ವಜಾರೋಹಣ ಮಾಡಿ ಮತದಾನ ಹಬ್ಬ ಆಚರಣೆ
ಮೈಸೂರು ಗ್ರಾಮಾಂತರ

ಧ್ವಜಾರೋಹಣ ಮಾಡಿ ಮತದಾನ ಹಬ್ಬ ಆಚರಣೆ

ಪ್ರತಿನಿಧಿ
Last updated: April 22, 2024 5:34 pm
ಪ್ರತಿನಿಧಿ
Published April 22, 2024
Share
SHARE

ಪ್ರತಿನಿಧಿ ವರದಿ ಹುಣಸೂರು
ಮತದಾರರಿಗೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದಡಿ ತಾಲೂಕಿನ ಎಲ್ಲ ೨೭೪ ಮತಗಟ್ಟೆಯಲ್ಲೂ ಏಕಕಾಲಕ್ಕೆ ಚುನಾವಣಾ ಆಯೋಗ ರೂಪಿಸಿದ ಧ್ವಜಾರೋಹಣ ನೆರವೇರಿಸುವ ಮೂಲಕ ರಾಷ್ಟ್ರೀಯ ಹಬ್ಬದಂತೆ ಆಚರಿಸಲಾಯಿತು.

ಪಟ್ಟಣ ವ್ಯಾಪ್ತಿಯಲ್ಲಿ ೫ ಮತಗಟ್ಟೆಗಳನ್ನು ಒಂದೇ ಕೇಂದ್ರದಲ್ಲಿ ಹೊಂದಿರುವ ನಗರದ ಕರೀಗೌಡರ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಬೆಳಗ್ಗೆ ೮ ಗಂಟೆಗೆ ತಾಲೂಕು ಸಹಾಯಕ ಚುನಾವಣಾಧಿಕಾರಿ ಮಹಮದ್ ಹ್ಯಾರಿಸ್ ಸುಮೇರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಇದೇ ಮೊದಲ ಬಾರಿಗೆ ಸ್ವೀಪ್ ಚಟುವಟಿಕೆಯಡಿ ಚುನಾವಣಾ ಆಯೋಗ ಧ್ವಜಾರೋಹಣಕ್ಕಾಗಿ ಧ್ವಜವೊಂದನ್ನು ರೂಪಿಸಿದೆ. ರಾಷ್ಟ್ರೀಯ ಹಬ್ಬಗಳ ರೀತಿಯಲ್ಲಿ ಮತದಾನದ ಹಬ್ಬವನ್ನು ಆಚರಿಸಲಾಗುತ್ತಿದೆ. ತಾಲೂಕಿನ ಎಲ್ಲ ೨೭೪ ಮತಗಟ್ಟೆಯಲ್ಲೂ ಏಕಕಾಲಕ್ಕೆ ಧ್ವಜಾರೋಹಣ ನೆರವೇರಿಸಲಾಗಿದೆ. ಧ್ವಜಾರೋಹಣದ ವೇಳೆ ಸ್ಥಳೀಯ ಮುಖಂಡರು ಮತ್ತು ಮತದಾರರಿಗೂ ಆಹ್ವಾನ ನೀಡಿ ಮತದಾನದ ಮಹತ್ವದ ಕುರಿತು ಅರಿವು ಮೂಡಿಸಲಾಗಿದೆ ಎಂದರು.

ನಮ್ಮ ನಡೆ ಮತಗಟ್ಟೆಯ ಕಡೆಗೆ ಘೋಷವಾಕ್ಯದೊಂದಿಗೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕಿದೆ. ಬಿಸಿಲಿನ ತಾಪ ಹೆಚ್ಚಾಗಿರುವುದು ಮತದಾನಕ್ಕೆ ತೊಂದರೆಯುಂಟು ಮಾಡಬಹುದೆಂಬ ಆತಂಕವಿದ್ದರೂ, ಜನತೆಯಲ್ಲಿ ಚುನಾವಣೆಯ ಉತ್ಸಾಹದ ಕುಂದಿಲ್ಲ ಎನ್ನುವುದನ್ನು ಕಂಡುಕೊಂಡಿದ್ದೇನೆ. ಮತಗಟ್ಟೆಗಳಲ್ಲಿ ನೆರಳು ಒದಗಿಸಲು ಸಾಧ್ಯವಾದಷ್ಟು ಕಡೆ ಕ್ರಮವಹಿಸಲಾಗುವುದು. ದೇಶ ಕಟ್ಟುವ ಕಾರ್ಯದಲ್ಲಿ ಬಹು ಮಹತ್ತರ ಪಾತ್ರವಾಗಿ ನಾಗರಿಕರು ಕಡ್ಡಯವಾಗಿ ಮತ ಚಲಾಯಿಸಬೇಕು. ನಿಮಗಿಷ್ಟವಾದ ಅಭ್ಯರ್ಥಿಯ ಆಯ್ಕೆ ನಿಮ್ಮದಾಗಲಿ. ಯಾವುದೇ ಆಮಿಷಕ್ಕೆ ಒಳಗಾಗದಿರಿ ಎಂದು ಕೋರಿದರು.

- ಜಾಹೀರಾತು -

ಚುನಾವಣಾ ನೀತಿ ಸಂಹಿತೆ ನೋಡಲ್ ಅಧಿಕಾರಿ ಶಿವಕುಮಾರ್ ಮಾತನಾಡಿ, ನಾಗರಿಕರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಂತಹ ಪ್ರಕರಣಗಳನ್ನು ಕಂಡಲ್ಲಿ ಸಿ ವಿಜಿಲ್ ಆಪ್ ಮೂಲಕ ಅಪ್ ಲೋಡ್ ಮಾಡಿ ಮಾಹಿತಿ ನೀಡಿದಲ್ಲಿ ಅಕ್ರಮಗಳನ್ನು ತಡೆಗಟ್ಟಲು ಸಹಾಯಕವಾಗಲಿದೆ. ಸ್ವೀಪ್ ಸಮಿತಿ ವತಿಯಿಂದ ಈಗಾಗಲೇ ಸಾಕಷ್ಟು ಅರಿವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶೇಕಡವಾರು ಮತದಾನದ ಪ್ರಮಾಣದಲ್ಲಿ ಹೆಚ್ಚಳವಾಗುವ ನಿರೀಕ್ಷೆಯಿದೆ ಎಂದರು.

ತಹಸೀಲ್ದಾರ್ ಎಂ.ನಯನ, ನಗರಸಭೆ ಎಇಇ ಶರ್ಮಿಳಾ, ತಾಲೂಕು ಯೋಜನಾಧಿಕಾರಿ ಎಂ.ಎಸ್.ರಾಜೇಶ್, ನಗರಸಭೆ ಅಭಿವೃದ್ಧಿ ಅಧಿಕಾರಿ ಸೋಮಸುಂದರ್, ಎನ್‌ಆರ್‌ಎಲ್‌ಎಂ ವ್ಯವಸ್ಥಾಪಕಿ ಮಂಜುಳಾ ನರಗುಂದ್ ಹಾಗೂ ಮತಗಟ್ಟೆ ಕೇಂದ್ರದ ಅಧಿಕಾರಿಗಳು ಸೇರಿದಂತೆ ತಾಲೂಕು ಪಂಚಾಯಿತಿ ಮತ್ತು ನಗರಸಭೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

೨೧ಊUಓ೧: ಹುಣಸೂರು ನಗರದ ಕರೀಗೌಡರ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮವನ್ನು ಸಹಾಯಕ ಚುನಾವಣಾಧಿಕಾರಿ ಮಹಮದ್ ಹ್ಯಾರಿಸ್ ಸುಮೇರ್ ಧ್ವಜಾರೋಹಣ ನೆರವೇರಿಸಿದರು. ಶಿವಕುಮಾರ್, ತಹಸೀಲ್ದಾರ್ ಎಂ.ನಯನ, ನಗರಸಭೆ ಎಇಇ ಶರ್ಮಿಳಾ ಮತ್ತು ಮತದಾರರು ಇದ್ದಾರೆ.

೨೧ಊUಓ೨: ಚುನಾವಣಾ ಆಯೋಗ ರೂಪಿಸಿರುವ ನೂತನ ಧ್ವಜ

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮೈಸೂರು ಗ್ರಾಮಾಂತರ

ಬಹುದಿನದ ಬೇಡಿಕೆ ನನಸು

March 21, 2024
ಮುಖಪುಟಮೈಸೂರು ಗ್ರಾಮಾಂತರ

ಹಳೇ ವೈಷಮ್ಯಕ್ಕೆ ಯುವಕನಿಗೆ ಚಾಕುವಿನಿಂದ ಇರಿತ

October 18, 2024
ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ಫೆಂಗಲ್‌ ಎಫೆಕ್ಟ್:‌ ನಿರಂತರ ಮಳೆಗೆ ಕಟಾವು ಮಾಡಿದ್ದ ಭತ್ತದ ಪೈರು ಜಲಾವೃತ್ತ

December 3, 2024
ಮುಖಪುಟಮೈಸೂರು ಗ್ರಾಮಾಂತರಮೈಸೂರು ನಗರ

ಸಿಎಂ ತವರಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವ ಘಟನೆ : ಸಾಲ ಮರುಪಾವತಿಗಾಗಿ ಮಗುವನ್ನು ಕರೆದೊಯ್ದ ಪೈನಾನ್ಸ್‌ ಸಿಬ್ಬಂದಿ

June 20, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?