ರಾಮನಗರ ಜಿಲ್ಲೆ ವಿಚಾರವಾಗಿ ಬಹಿರಂಗ ಚರ್ಚೆಗೆ ಡಿಕೆ ಶಿವಕುಮಾರ್ ಆಹ್ವಾನ ವಿಚಾರಕ್ಕೆ ಸಂಬಂಧಿಸಿ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್ ಟಿಆರ್ಪಿ ಇರುವ ಚಾನಲ್ನಲ್ಲಿ ಚರ್ಚೆಗೆ ಬರುವ ಸವಾಲು ಹಾಕಿದ್ದಾರೆ. ನಾನು ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲನ್ನು ಸ್ವೀಕಾರ ಮಾಡುತ್ತೇನೆ. ನಾನು ಪಲಾಯನ ಮಾಡಲ್ಲ, ನನ್ನ ಬಳಿಯೂ ಸಾಕಷ್ಟು ಸರಕು ಇದೆ ಎಂದು ಬೆಂಗಳೂರಿನಲ್ಲಿ ಡಿಕೆಶಿ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.