ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯಕ್ಕೆ ಅಕ್ರಮವಾಗಿ ಮೋಟಾರ್ ಅಳವಡಿಕೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ಸಮಸ್ಯೆ ನಡುವೆ ಅಕ್ರಮ ಮೋಟಾರ್ ಅಳವಡಿಸಿ ಕೆಆರ್ಎಸ್ ಡ್ಯಾಂನಿಂದ ಫಾರ್ಮ್ಹೌಸ್ಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಸಂಬಂಧ ಮಾಹಿತಿ ನೀಡಿದರೂ ಅಧಿಕಾರಿಗಳು ಉಳ್ಳವರ ವಿರುದ್ಧ ಕ್ರಮಕ್ಕೆ ಮುಂದಾಗುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನ ಹಿನ್ನೀರಿಗೆ ಹೊಂದಿಕೊಂಡು ಫಾರ್ಮ್ ಹೌಸ್ ಇದೆ. ಈ ಫಾರ್ಮ್ಹೌಸ್ಗೆ ಅಕ್ರಮವಾಗಿ ಮೋಟಾರ್ ಅಳವಡಿಕೆ ಮಾಡಿ ಸುಮಾರು 200 ಮೀ. ಪೈಪ್ ಅಳವಡಿಸಿಕೊಂಡು ಜಲಾಯಶಯದ ನೀರಿಗೆ ಕನ್ನ ಹಾಕಲಾಗುತ್ತಿದೆ. ಕುಡಿಯುವ ನೀರಿಗೆ ಸಮಸ್ಯೆ ಇದ್ದರೂ ಫಾರ್ಮ್ಹೌಸ್ಗೆ ಅಕ್ರಮವಾಗಿ ನೀರು ಪೂರೈಕೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.