PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಇಂದಿನಿಂದ ಭಾರತ vs ಆಸ್ಟ್ರೇಲಿಯಾ ಟಿ20 ಕದನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಇಂದಿನಿಂದ ಭಾರತ vs ಆಸ್ಟ್ರೇಲಿಯಾ ಟಿ20 ಕದನ
ಜಿಲ್ಲೆ

ಇಂದಿನಿಂದ ಭಾರತ vs ಆಸ್ಟ್ರೇಲಿಯಾ ಟಿ20 ಕದನ

Prathinidhi News
Last updated: November 23, 2023 10:13 am
Prathinidhi News
Published November 23, 2023
Share
SHARE

ಅಂತಾರಾಷ್ಟ್ರೀಯ ಕ್ರಿಕೆಟ್‌ನ ವೇಳಾಪಟ್ಟಿ ಎಷ್ಟು ಗೊಂದಲಮಯವಾಗಿರಲಿದೆ ಎನ್ನುವುದಕ್ಕೆ ಈ ಸರಣಿಯೇ ಸಾಕ್ಷಿ. ಏಕದಿನ ವಿಶ್ವಕಪ್‌ ಮುಗಿದ ನಾಲ್ಕೇ ದಿನದಲ್ಲಿ ಫೈನಲ್‌ನಲ್ಲಿ ಎದುರಾಗಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಟಿ20 ಸರಣಿ ಆರಂಭಗೊಳ್ಳುತ್ತಿದೆ. 5 ಪಂದ್ಯಗಳ ಸರಣಿ ಇದ್ದಾಗಿದ್ದು, ಗುರುವಾರ ಮೊದಲ ಪಂದ್ಯವು ಇಲ್ಲಿನ ಆಂಧ್ರ ಪ್ರದೇಶ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಹಾಗೂ ಆಸ್ಟ್ರೇಲಿಯಾ ಈ ವರ್ಷ ಪದೇ ಪದೇ ಎದುರಾಗುತ್ತಲೇ ಇದ್ದರೂ, ಈ ಸರಣಿ ತನ್ನದೇ ರೀತಿಯಲ್ಲಿ ಮಹತ್ವವನ್ನು ಪಡೆದಿದೆ.

ಈ ಸರಣಿಯನ್ನು ಈಗೇಕೆ ನಡೆಸಲಾಗುತ್ತಿದೆ ಎಂದು ಹಲವರಿಗೆ ಅನಿಸಬಹುದು. ಆದರೆ 2024ರ ಟಿ20 ವಿಶ್ವಕಪ್‌ಗೆ ಇನ್ನು 7 ತಿಂಗಳಷ್ಟೇ ಬಾಕಿ ಇದ್ದು, ವಿಶ್ವಕಪ್‌ಗೂ ಮುನ್ನ ಎರಡೂ ತಂಡಗಳಿಗೆ ಕೇವಲ 11 ಪಂದ್ಯಗಳಷ್ಟೇ ಸಿಗಲಿದೆ. ಹೀಗಾಗಿ ವಿಶ್ವಕಪ್‌ ಸಿದ್ಧತೆಗೆ ಈ ಸರಣಿ ಬಳಕೆಯಾಗಲಿದೆ.

ಹಿರಿಯರಿಗೆಲ್ಲಾ ವಿಶ್ರಾಂತಿ: ವಿಶ್ವಕಪ್‌ ತಂಡದಲ್ಲಿದ್ದ ಬಹುತೇಕ ಆಟಗಾರರಿಗೆ ಸಹಜವಾಗಿಯೇ ಈ ಸರಣಿಗೆ ವಿಶ್ರಾಂತಿ ನೀಡಲಾಗಿದೆ. ವಿಶ್ವಕಪ್‌ ತಂಡದಲ್ಲಿದ್ದ ಸೂರ್ಯಕುಮಾರ್‌ ಯಾದವ್‌ ಈ ಸರಣಿಯಲ್ಲಿ ತಂಡ ಮುನ್ನಡೆಸಲಿದ್ದು, ಕೇವಲ 2 ಪಂದ್ಯಗಳನ್ನಾಡಿದ್ದ ಇಶಾನ್‌ ಕಿಶನ್‌ ಹಾಗೂ ಆಡುವ ಅವಕಾಶ ಪಡೆಯದ ವೇಗಿ ಪ್ರಸಿದ್ಧ್‌ ಕೃಷ್ಣ ಈ ಸರಣಿಗೆ ಆಯ್ಕೆಯಾಗಿರುವ ತಂಡದಲ್ಲಿದ್ದಾರೆ. ಇನ್ನು ಮೊದಲ 3 ಪಂದ್ಯಗಳಿಂದ ಹೊರಗುಳಿಯಲಿರುವ ಶ್ರೇಯಸ್‌ ಅಯ್ಯರ್‌, ಕೊನೆಯ 2 ಪಂದ್ಯಗಳಿಗೆ ತಂಡ ಕೂಡಿಕೊಳ್ಳಲಿದ್ದಾರೆ. ಕೋಚ್‌ ರಾಹುಲ್‌ ದ್ರಾವಿಡ್‌ ಕೂಡ ವಿಶ್ರಾಂತಿ ಬಯಸಿದ್ದು, ವಿವಿಎಸ್‌ ಲಕ್ಷ್ಮಣ್‌ ಈ ಸರಣಿಯಲ್ಲಿ ತಂಡಕ್ಕೆ ಮಾರ್ಗದರ್ಶನ ಮಾಡಲಿದ್ದಾರೆ.

ಕಿಶನ್‌ಗೆ ಸುವರ್ಣಾವಕಾಶ: ಮುಂದಿನ ವಿಶ್ವಕಪ್‌ಗೂ ಮುನ್ನ ವಿಕೆಟ್‌ ಕೀಪರ್‌ ಸ್ಥಾನವನ್ನು ಕಾಯಂಗೊಳಿಸಿಕೊಳ್ಳಲು ಇಶಾನ್‌ ಕಿಶನ್‌ಗೆ ಇದು ಸುವರ್ಣಾವಕಾಶ. ಈ ವರ್ಷದ ಮೊದಲ 8 ಟಿ20 ಪಂದ್ಯಗಳಲ್ಲಿ ಕಿಶನ್‌ಗೆ ಕಾಯಂ ಸ್ಥಾನ ಸಿಕ್ಕಿತ್ತು. ಆದರೆ ವೆಸ್ಟ್‌ಇಂಡೀಸ್‌ ಪ್ರವಾಸದಲ್ಲಿ ಸಂಜು ಸ್ಯಾಮ್ಸನ್‌ಗೆ ಸ್ಥಾನ ಬಿಟ್ಟುಕೊಟ್ಟಿದ್ದರು. ಸದ್ಯ ಸ್ಯಾಮ್ಸನ್‌ಗೆ ತಂಡದಲ್ಲಿ ಜಾಗವಿಲ್ಲ. ಹೀಗಾಗಿ ಕಿಶನ್‌ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಲು ಕಾಯುತ್ತಿದ್ದಾರೆ.

- ಜಾಹೀರಾತು -

ಇನ್ನು ಯಶಸ್ವಿ ಜೈಸ್ವಾಲ್‌ ಹಾಗೂ ಋತುರಾಜ್‌ ಗಾಯಕ್ವಾಡ್‌ ಪೈಕಿ ಕಿಶನ್‌ ಜೊತೆ ಇನ್ನಿಂಗ್ಸ್‌ ಆರಂಭಿಸುವವರು ಯಾರು ಎನ್ನುವ ಕುತೂಹಲವೂ ಇದೆ. ಭಾರತದ ಸಂಭವನೀಯ ಆಟಗಾರರ ಪಟ್ಟಿಯನ್ನು ಊಹಿಸುವುದು ಕಷ್ಟ. ಈ ವರ್ಷ ಹಲವು ಬಾರಿ ತಂಡದ ಸಂಯೋಜನೆ ಬದಲಿಸಿರುವ ಭಾರತ ಯಾರನ್ನು ಯಾವ ಪಾತ್ರಕ್ಕೆ ಕಣಕ್ಕಿಳಿಸಲಿದೆ ಎನ್ನುವು ಕುತೂಹಲ ಅಭಿಮಾನಿಗಳಲ್ಲಿದೆ.

ಇನ್ನು ಆಸ್ಟ್ರೇಲಿಯಾ ತನ್ನ ವಿಶ್ವಕಪ್‌ ವಿಜೇತ ತಂಡದಲ್ಲಿದ್ದ 7 ಆಟಗಾರರನ್ನು ಈ ಸರಣಿಗೆ ಉಳಿಸಿಕೊಂಡಿದೆ. ಡೇವಿಡ್‌ ವಾರ್ನರ್‌ ಸರಣಿಯಿಂದ ಹಿಂದೆ ಸರಿದಿದ್ದು, ಸ್ಟೀವ್‌ ಸ್ಮಿತ್‌ ಆರಂಭಿಕನಾಗಿ ಆಡುವ ನಿರೀಕ್ಷೆ ಇದೆ. ವಿಶ್ವಕಪ್‌ನಲ್ಲಿ ಹೆಚ್ಚಿನ ಅವಕಾಶ ಪಡೆಯದ ಮಾರ್ಕಸ್‌ ಸ್ಟೋಯ್ನಿಸ್‌ ಹಾಗೂ ಶಾನ್ ಅಬ್ಬಾಟ್‌ ಈ ಸರಣಿಯಲ್ಲಿ ಆಡಲಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆ

ಒಲಿಂಪಿಕ್ಸ್‌ ಮೇಲೆ ಕಣ್ಣು: ಬೆಂಗ್ಳೂರಿನಲ್ಲಿ ಅಭ್ಯಾಸ ಆರಂಭಿಸಿದ ಪಿ.ವಿ. ಸಿಂಧು

November 19, 2023
ಜಿಲ್ಲೆ

ಆರ್​.ಡಿ.ಪಾಟೀಲ್​ನನ್ನು ಮತ್ತೆ 8 ದಿನ ಕಸ್ಟಡಿಗೆ ಪಡೆದ ಸಿಐಡಿ ಪೊಲೀಸರು

November 25, 2023
ಜಿಲ್ಲೆ

ಕಸದ ತೊಟ್ಟಿಯಲ್ಲಿ ಹೆಣ್ಣು ಭ್ರೂಣ ಪತ್ತೆ! ವೈದ್ಯರ ವಿರುದ್ಧ ಎಫ್‌ಐಆರ್ ದಾಖಲು

December 15, 2023
ಜಿಲ್ಲೆ

ನಟ ದರ್ಶನ್ ಗೆ ರಿಲೀಫ್: ಚಾರ್ಜ್ ಶೀಟ್ ನಲ್ಲಿ ಹೆಸರು ಕೈಬಿಟ್ಟ ಪೊಲೀಸರು

January 20, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?