PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಂಪತ್ತು ಮರುಹಂಚಿಕೆ ಮಾಡಲು ರಾಹುಲ್ ಗಾಂಧಿಯೇನು ಮಾವೋವಾದಿಯಾ? ದೇವೇಗೌಡರು ಆಕ್ರೋಶ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಸಂಪತ್ತು ಮರುಹಂಚಿಕೆ ಮಾಡಲು ರಾಹುಲ್ ಗಾಂಧಿಯೇನು ಮಾವೋವಾದಿಯಾ? ದೇವೇಗೌಡರು ಆಕ್ರೋಶ
ಚುನಾವಣೆಮುಖಪುಟಹಾಸನ

ಸಂಪತ್ತು ಮರುಹಂಚಿಕೆ ಮಾಡಲು ರಾಹುಲ್ ಗಾಂಧಿಯೇನು ಮಾವೋವಾದಿಯಾ? ದೇವೇಗೌಡರು ಆಕ್ರೋಶ

Prathinidhi News
Last updated: April 25, 2024 11:21 am
Prathinidhi News
Published April 25, 2024
Share
SHARE

ಹಾಸನ: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾಗಿರುವ ಸಂಪತ್ತು ವಿಚಾರದ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯುವಕರಿಗೆ ಕೇಂದ್ರದ 30 ಲಕ್ಷ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ನೀಡಿದ ಹೇಳಿಕೆಗೂ ಗೌಡರು ತಿರುಗೇಟು ನಿಡಿದ್ದಾರೆ. ಆಸ್ತಿ ಮರುಹಂಚಿಕೆ ಮಾಡಲು ರಾಹುಲ್‌ ಗಾಂಧಿ ತನ್ನನ್ನು ಮಾವೋವಾದಿ ನಾಯಕ ಎಂದು ಭಾವಿಸಿದ್ದಾರೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ದೇವೇಗೌಡರು, ಸಂಪತ್ತು ಮರುಹಂಚಿಕೆ ವಿಚಾರವನ್ನು ಪ್ರಸ್ತಾಪಿಸುತ್ತಾ, ಇದು ಕಾಂಗ್ರೆಸ್ ಪಕ್ಷದ ಇಬ್ಬರು ಮಾಜಿ ಪ್ರಧಾನಿಗಳಿಗೆ ಮಾಡಿದ ಅವಮಾನ ಎಂದು ಬಣ್ಣಿಸಿದ್ದಾರೆ. ದೇಶದಲ್ಲಿ ಉದಾರೀಕರಣ ನೀತಿ ಜಾರಿಗೆ ತಂದಿದ್ದ ಪಿ.ವಿ. ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ಅವರನ್ನು ಗೌಡರು ಪ್ರಸ್ತಾಪಿಸಿದ್ದರು. ಕಾಂಗ್ರೆಸ್ ಪಕ್ಷ ತನ್ನ ಚನಾವಣಾ ಪ್ರಣಾಳಿಕೆಯಲ್ಲಿ ಹಲವು ಭರವಸೆಗಳನ್ನು ನೀಡಿದೆ. ಅಧಿಕಾರಕ್ಕೆ ಬರುವ ವಿಶ್ವಾಸ ಇಲ್ಲದ ಪಕ್ಷದಿಂದ ಮಾತ್ರ ಇಂತಹ ಆಶ್ವಾಸನೆಗಳು ಬರಲು ಸಾಧ್ಯ. ಕಾಂಗ್ರೆಸ್ಸಿಗರು ಈ ದೇಶವನ್ನು ಕೆಳಗೆ ಕೊಂಡೊಯ್ಯಲು ಹೊರಟಿದ್ದಾರೆ. ಯಾವುದೇ ರೀತಿಯಿಂದಲಾದರೂ ಅಧಿಕಾರ ಪಡೆಯಬೇಕೆನ್ನುವ ಹತಾಶೆ ಅವರಲ್ಲಿರುವುದು ಸ್ಪಷ್ಟವಾಗಿದೆ ಎಂದು ಜೆಡಿಎಸ್ ಮುಖ್ಯಸ್ಥರಾದ ದೇವೇಗೌಡರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಆಸ್ತಿ ಸಮೀಕ್ಷೆ ಮಾಡಿ ಸಮಾನ ಸಂಪತ್ತು ಹಂಚಿಕೆ ಮಾಡುವುದಾಗಿ ಹೇಳುತ್ತಿದ್ದಾರೆ. ಅವರೇನು ಮಾವೋವಾದಿ ನಾಯಕರಾ? ಕ್ರಾಂತಿಯ ಕನಸು ಕಾಣುತ್ತಿದ್ದಾರಾ? ಇದೆಲ್ಲವೂ ಪ್ರಾಯೋಗಿಕವಾಗಿ ಸಾಧ್ಯವಾ? ಎಂದು ಮಾಜಿ ಪ್ರಧಾನಿಗಳು ಪ್ರಶ್ನೆ ಮಾಡಿದ್ದಾರೆ.

ಇನ್ನು ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಸೃಷ್ಟಿ ಮಾಡುವುದಾಗಿ ನೀಡಲಾದ ಆಶ್ವಾಸನೆಯನ್ನು ಪ್ರಸ್ತಾಪಿಸಿದ ಗೌಡರು, ರಾತ್ರೋರಾತ್ರಿ ಇವರು 30 ಲಕ್ಷ ಹೊಸ ಉದ್ಯೋಗಳನ್ನು ಎಲ್ಲಿಂದ ತರುತ್ತಾರೆ? ಇವರಿಗೆ ಪ್ರಾಯೋಗಿಕ ಜ್ಞಾನ ಇಲ್ಲ ಎಂಬುದು ಅರ್ಥವಾಗುತ್ತದೆ. ಕಾಂಗ್ರೆಸ್​ನ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಪಿ ಚಿದಂಬರಂ ಕೂಡ ರಾಹುಲ್ ಗಾಂಧಿ ಅವರ ಈ ಅಪಕ್ವ ವಿಚಾರಗಳನ್ನು ಒಪ್ಪುತ್ತಾರಾ ಎಂದು ಎಚ್ ಡಿ ದೇವೇಗೌಡರು ಕೇಳಿದ್ದಾರೆ.

ಹಾಸನ, ಮಂಡ್ಯದಲ್ಲಿ ಸಹಕಾರ ಸಿಗುತ್ತಿಲ್ಲ: ಎಚ್​ಡಿಡಿ ಬೇಸರ

- ಜಾಹೀರಾತು -

ಇದೇ ವೇಳೆ, ಹಾಸನ ಮತ್ತು ಮಂಡ್ಯ ಕ್ಷೇತ್ರದಲ್ಲಿ ಕೆಲ ಬಿಜೆಪಿಗರಿಂದ ಬೆಂಬಲ ಸಿಗುತ್ತಿಲ್ಲ ಎಂದು ಎಚ್.ಡಿ. ದೇವೇಗೌಡರು ಇದೇ ವೇಳೆ ಬೇಸರ ಹೊರಹಾಕಿದ್ದಾರೆ. ಹಾಸನ ಕ್ಷೇತ್ರದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಆದರೂ ಪ್ರಜ್ವಲ್ ರೇವಣ್ಣ ಗೆಲುವನ್ನು ತಡೆಯಲು ಆಗಲ್ಲ ಎಂದು ಅವರು ಹೇಳಿದ್ದಾರೆ.

ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅವರು ಸಹಕರಿಸುತ್ತಿಲ್ಲ. ಆದರೆ ಕುಮಾರಸ್ವಾಮಿ ಅವರಿಗೆ ಇದರಿಂದ ಅಪಾಯ ಏನಾಗುವುದಿಲ್ಲ ಎಂದೂ ಗೌಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನವದೆಹಲಿಮುಖಪುಟ

ಪದ್ಮಶ್ರೀ ಪುರಸ್ಕೃತ ಖ್ಯಾತ ಜಾನಪದ ಗಾಯಕಿ ಶಾರದಾ ಸಿನ್ಹಾ ವಿಧಿವಶ; ಗಣ್ಯರ ಸಂತಾಪ

November 6, 2024
ಚುನಾವಣೆಮುಖಪುಟಮೈಸೂರು ನಗರ

ನೇಹಾ ಹತ್ಯೆ ಪ್ರಕರಣ; ದುರಂಹಕಾರದ ಹೇಳಿಕೆಗಳನ್ನು ಯಾರೂ ಸಹಿಸಲ್ಲ- ಬಿ.ವೈ.ವಿಜಯೇಂದ್ರ

April 21, 2024
ಮುಖಪುಟಮೈಸೂರು ಗ್ರಾಮಾಂತರ

ಲಾರಿ – ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸ್ಥಳದಲ್ಲೇ ಸಾವು..!

April 17, 2025
ಮುಖಪುಟಮೈಸೂರು ನಗರರಾಜಕೀಯ

ರಾಜ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವಿಶ್ವವಿದ್ಯಾಲಯಗಳಿಗೆ ಅನುದಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ..!

April 21, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?