ಹೆಚ್ಡಿ ಕುಮಾರಸ್ವಾಮಿ ರಾಜಕೀಯದ ವಿಲನ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನಾನು ಸಿದ್ದರಾಮಯ್ಯಗೆ ಸ್ನೇಹಿತ ಅಲ್ಲ, ವಿಲನ್ ಆಗಿರೋದು ನಿಜ. ನಾನು ಯಾಕೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸ್ನೇಹಿತ ಆಗಬೇಕು ಎಂದು ವಾಗ್ದಾಳಿ ನಡೆಸಿದರು.
