- ಜಿಲ್ಲಾ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಮೇಲೂರು ಗೌತಮ್ ವಿಶ್ವಾಸ
ಪ್ರತಿನಿಧಿ ವರದಿ ಸಾಲಿಗ್ರಾಮ
ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗುವುದರಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಇಮ್ಮಡಿ ಆಗಲಿದ್ದು, ಕನಿಷ್ಠ 3 ಲಕ್ಷ ಮತಗಳ ಅಂತರದಿಂದ ಅವರು ಗೆಲುವು ಸಾಧಿಸಲಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಮೇಲೂರು ಗೌತಮ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ಕುಮಾರಸ್ವಾಮಿ ಅವರ ಸೋಲನ್ನು ಇನ್ನೂ ಅರಗಿಸಿಕೊಳ್ಳಲಾಗುತ್ತಿಲ್ಲ. ಮಗನ ಸೋಲಿನಿಂದ ಆದ ನೋವನ್ನು ಕುಮಾರಸ್ವಾಮಿ ಅಭೂತಪೂರ್ವ ಗೆಲುವಿನ ಮೂಲಕ ನಮ್ಮಂತಹ ನಿಷ್ಠಾವಂತ ಲಕ್ಷಾಂತರ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಂತಸ ನೂರ್ಮಡಿಯಾಗಲಿದೆ ಎಂದು ಅವರು ಹೇಳಿಕೆಯಲ್ಲಿ ಆಶಿಸಿದ್ದಾರೆ.
ಕೆ.ಆರ್.ನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ಮಂಡ್ಯ ಲೋಕಸಭಾ ಕ್ಷೇತ್ರದ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲೂ ಕುಮಾರಸ್ವಾಮಿ ಅವರ ಸ್ಪರ್ಧೆಯಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಲಿದ್ದು, ಈ ಹಿಂದೆ ಆದ ಸೋಲಿನ ನೋವನ್ನು ಮರೆಯಲಿದ್ದಾರೆ. ಈ ಮೂಲಕ ಪಕ್ಷ ರಾಜ್ಯಾದ್ಯಂತ ಮತ್ತಷ್ಟು ಪ್ರಬಲವಾಗಿ ಸಂಘಟಿತವಾಗಲಿದೆ ಎಂದಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದರಿಂದ ಬಿಜೆಪಿ ಕಾರ್ಯಕರ್ತರು ಮೈತ್ರಿಪಕ್ಷ ಜೆಡಿಎಸ್ ಗೆ ಸಂಪೂರ್ಣ ಸಹಕಾರ ನೀಡಲಿದ್ದು, ಜೆಡಿಎಸ್ ಸ್ಪರ್ಧಿಸಲಿರುವ ಎಲ್ಲ ಮೂರು ಕ್ಷೇತ್ರಗಳಲ್ಲೂ ನಮಗೆ ಅನುಕೂಲವಾಗಲಿದೆ. ಹಾಗೆಯೇ ಉಳಿದ 25 ಕ್ಷೇತ್ರಗಳಲ್ಲೂ ಬಿಜೆಪಿಗೆ ಜೆಡಿಎಸ್ ಎಲ್ಲ ವಿಧವಾದ ಸಹಕಾರ ನೀಡಲಿದ್ದು, ಮೈತ್ರಿಪಕ್ಷಗಳು ಎಲ್ಲ 28 ಕ್ಷೇತ್ರಗಳಲ್ಲೂ ಜಯಗಳಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
( ಗೌತಮ್ ಅವರ ಭಾವಚಿತ್ರವಿದೆ.)