PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ಬಿಜೆಪಿ ಟಿಕೆಟ್ ಸಮರ: ಪ್ರತಾಪ್ ಸಿಂಹ ವಿರುದ್ಧ ಗುಡುಗಿದ ಎಲ್. ನಾಗೇಂದ್ರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ಬಿಜೆಪಿ ಟಿಕೆಟ್ ಸಮರ: ಪ್ರತಾಪ್ ಸಿಂಹ ವಿರುದ್ಧ ಗುಡುಗಿದ ಎಲ್. ನಾಗೇಂದ್ರ
ಮುಖಪುಟಮೈಸೂರು ನಗರ

ಮೈಸೂರು ಬಿಜೆಪಿ ಟಿಕೆಟ್ ಸಮರ: ಪ್ರತಾಪ್ ಸಿಂಹ ವಿರುದ್ಧ ಗುಡುಗಿದ ಎಲ್. ನಾಗೇಂದ್ರ

Prathinidhi News
Last updated: January 7, 2026 3:50 pm
Prathinidhi News
Published January 7, 2026
Share
SHARE

ಮೈಸೂರು, ಜನವರಿ 7, 2026 : ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಬಿಜೆಪಿಯ ಟಿಕೆಟ್ ಹಂಚಿಕೆ ವಿಚಾರವಾಗಿ ಈಗಲೇ ಬಿರುಸಿನ ಪೈಪೋಟಿ ಆರಂಭವಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಶಾಸಕ ಹಾಗೂ ಹಾಲಿ ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಟಿಕೆಟ್ ಯಾರಿಗೆ ನೀಡಬೇಕು ಎಂಬುದು ಪಕ್ಷದ ಹೈಕಮಾಂಡ್‌ನ ಅಂತಿಮ ನಿರ್ಧಾರವಾಗಿರುತ್ತದೆ ಎಂಬ ಕನಿಷ್ಠ ಅರಿವು ಪ್ರತಾಪ್ ಸಿಂಹ ಅವರಿಗೆ ಇರಬೇಕಿತ್ತು ಎಂದು ನಾಗೇಂದ್ರ ಕಿಡಿಕಾರಿದರು. ತಾವು ಸದಾ ಪಕ್ಷದ ಸಂಘಟನೆಗಾಗಿ ದುಡಿಯುತ್ತಿದ್ದು, ತಮ್ಮ ಮೇಲೆ ಯಾವುದೇ ಆಪಾದನೆಗಳಿಲ್ಲ ಹಾಗೂ ಯಾವುದೇ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿಲ್ಲ ಎಂದು ಪ್ರತಾಪ್‌ ಸಿಂಹ ಅವರನ್ನು ಟೀಕಿಸಿದರು.

ಪ್ರತಾಪ್ ಸಿಂಹ ಅವರ ಇತ್ತೀಚಿನ ನಡೆಗಳನ್ನು ಟೀಕಿಸಿದ ನಾಗೇಂದ್ರ ಅವರು, ಪಾರ್ಲಿಮೆಂಟ್ ಟಿಕೆಟ್ ಹಂಚಿಕೆ ಸಂದರ್ಭದಲ್ಲಿಯೂ ಇವರು ಇದೇ ರೀತಿ ಮಾತನಾಡಿದ್ದರು, ಹಾಗಾದರೆ ಇವರಿಗೆ ಸಂಸತ್ ಟಿಕೆಟ್ ಯಾಕೆ ಸಿಗಲಿಲ್ಲ ಎಂದು ಪ್ರಶ್ನಿಸಿದರು. ಕಳೆದ ಬಾರಿ ಪಾರ್ಲಿಮೆಂಟ್ ಹಾಗೂ ವಿಧಾನಸಭಾ ಚುನಾವಣೆಗಳ ಪ್ರಚಾರಕ್ಕೆ ಇವರು ಬರಲೇ ಇಲ್ಲ ಎಂದು ದೂರಿದ ಅವರು, ಕಳೆದ ಚುನಾವಣೆಯಲ್ಲಿ ಯದುವೀರ್ ಅವರಿಗೆ ಚಾಮರಾಜ ಕ್ಷೇತ್ರದಿಂದ ಸುಮಾರು 56,500 ಮತಗಳ ಭಾರಿ ಮುನ್ನಡೆ ತಂದುಕೊಟ್ಟಿರುವುದನ್ನು ನೆನಪಿಸಿದರು. ತಮ್ಮನ್ನು ತಾವು ‘ಹಿಂದೂ ಹುಲಿ’ ಎಂದು ಕರೆದುಕೊಳ್ಳುವ ಹಾಗೂ ರಾಜ್ಯ ನಾಯಕರಾಗಿ ಬೆಳೆದಿರುವ ಪ್ರತಾಪ್ ಸಿಂಹ ಅವರು ಬೇರೆ ಯಾವುದಾದರೂ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿ, ಚಾಮರಾಜ ಕ್ಷೇತ್ರದಲ್ಲಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವುದು ಬೇಡ ಎಂದು ನಾಗೇಂದ್ರ ಕಿವಿಮಾತು ಹೇಳಿದರು.

ಮುಂದುವರಿದು ಮಾತನಾಡಿದ ಅವರು, ತಾವು ಇದೇ ಊರಿನವರಾಗಿದ್ದು ತಮಗೆ ಬೇರೆ ಕಡೆ ಹೋಗಲು ಸಾಧ್ಯವಿಲ್ಲ, ಆದ್ದರಿಂದ ತಮ್ಮ ಹೋರಾಟವೇನಿದ್ದರೂ ಸ್ವಂತ ಊರಿನಲ್ಲೇ ಇರಲಿದೆ ಎಂದು ಹೇಳಿದರು. ಮಂಡಲದ ಅಧ್ಯಕ್ಷರು ಮತ್ತು ಸುಮಾರು ನೂರರಷ್ಟು ಪಟ್ಟು ಹೆಚ್ಚು ಕಾರ್ಯಕರ್ತರು ಹಾಗೂ ಸ್ನೇಹಿತರು ತಮ್ಮ ಜೊತೆಗಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, 2028ರ ಚುನಾವಣೆಯಲ್ಲಿ ತಮಗೆ ಟಿಕೆಟ್ ಸಿಗುವುದು ಖಚಿತ ಎಂಬ ಆಶಯ ವ್ಯಕ್ತಪಡಿಸಿದರು. ಬಿಜೆಪಿಯಲ್ಲಿದ್ದುಕೊಂಡು ಪಕ್ಷದ ನಾಯಕರ ವಿರುದ್ಧವೇ ‘ಕವರ್ ಸಂಸ್ಕೃತಿ’ಯಂತಹ ಟೀಕೆಗಳನ್ನು ಮಾಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ನಾಗೇಂದ್ರ, ಪ್ರತಾಪ್ ಸಿಂಹ ಅವರು ಮುಂದಿನ ದಿನಗಳಲ್ಲಿ ತಮ್ಮ ವರ್ತನೆಯನ್ನು ತಿದ್ದಿಕೊಳ್ಳಲಿ ಎಂದು ಖಡಕ್ ಎಚ್ಚರಿಕೆ ನೀಡಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂಗೆ ಹಕ್ಕೊತ್ತಾಯ: ಅಹಿಂದ ಸಂಘಟನೆಗಳಿಂದ ಉಗ್ರ ಹೋರಾಟದ ಎಚ್ಚರಿಕೆ

November 29, 2025
ಮುಖಪುಟಮೈಸೂರು ಗ್ರಾಮಾಂತರ

ಸರಗೂರು: ಉಪಟಳ ನೀಡುತ್ತಿದ್ದ ತಾಯಿ ಹುಲಿ ಮತ್ತು ಮೂರು ಮರಿಗಳ ಸೆರೆ!

November 18, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಸಾಂಸ್ಕೃತಿಕ ನಗರಿ ಮೇಲೆ ಡ್ರಗ್ಸ್ ಮಾಫಿಯಾ ಕರಿನೆರಳು! ಗಾಂಜಾ ಅಡ್ಡೆಗಳಾದ್ವಾ ಕ್ಯಾತಮಾರನಹಳ್ಳಿ, ಗಾಯತ್ರಿಪುರಂ?

November 18, 2025
ಮುಖಪುಟಮೈಸೂರು ನಗರ

ಮೈಸೂರು : ಮಾನವ-ಪ್ರಾಣಿ ಸಂಘರ್ಷ ನಿಲ್ಲಿಸಿ ; ರೆಸಾರ್ಟ್‌ಗಳ ಬಂದ್‌ಗೆ ಆಗ್ರಹಿಸಿ ರೈತರ ಪ್ರತಿಭಟನೆ

November 4, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?