ಬೆಂಗಳೂರು ಒನ್ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ವರಂ ಬೆಂಗಳೂರು ಒನ್ ಸೆಂಟರ್ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪರಿಶೀಲನೆ ನಡೆಸಿ ಪ್ರತಿ ಜಿಲ್ಲೆಯಿಂದಲೂ ಮಾಹಿತಿ ಪಡೆಯುತ್ತಿದ್ದಾರೆ. ಕಲಬುರಗಿ ಜಿಲ್ಲೆಯಲ್ಲೇ 14 ಸಾವಿರ ‘ಗೃಹಲಕ್ಷ್ಮೀ’ ಅರ್ಜಿ ಬಾಕಿ ಇದೆ. ಈ ಹಿನ್ನೆಲೆ ಕಲಬುರಗಿ ಸಿಡಿಪಿಒಗೆ ತರಾಟೆ ತೆಗೆದುಕೊಂಡಿದ್ದಾರೆ. ಆದಷ್ಟು ಬೇಗ ಅರ್ಜಿಯನ್ನು ವಿಲೇವಾರಿ ಮಾಡಲು ಏನು ಸಮಸ್ಯೆ? ಏಕೆ ಇಷ್ಟು ಅರ್ಜಿ ಬಾಕಿ ಇದೆ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ವಾರದೊಳಗೆ ಅರ್ಜಿ ವಿಲೇವಾರಿ ಮಾಡುವುದಾಗಿ CDPO ತಿಳಿಸಿದ್ದಾರೆ.