PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಲೋಕ ಸಮರ: ಬಿಜೆಪಿ-ಕಾಂಗ್ರೆಸ್‌ನಿಂದ ಭರ್ಜರಿ ಪ್ರಚಾರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ನಗರ > ಲೋಕ ಸಮರ: ಬಿಜೆಪಿ-ಕಾಂಗ್ರೆಸ್‌ನಿಂದ ಭರ್ಜರಿ ಪ್ರಚಾರ
ಮೈಸೂರು ನಗರ

ಲೋಕ ಸಮರ: ಬಿಜೆಪಿ-ಕಾಂಗ್ರೆಸ್‌ನಿಂದ ಭರ್ಜರಿ ಪ್ರಚಾರ

ಪ್ರತಿನಿಧಿ
Last updated: April 6, 2024 9:31 pm
ಪ್ರತಿನಿಧಿ
Published April 6, 2024
Share
SHARE

– ನಗರದೆಲ್ಲೆಡೆ ಯದುವೀರ್‌ ಒಡೆಯರ್‌ ಪಾದಯಾತ್ರೆ
– ಚಾಮುಂಡೇಶ್ವರಿಯಲ್ಲಿ ಕೈ ನಾಯಕರ ಮತಬೇಟೆ

ಪ್ರತಿನಿಧಿ ವರದಿ ಮೈಸೂರು
ಪ್ರತಿಷ್ಠೆಯ ಕಣವಾಗಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರದ ಭರಾಟೆ ಜೋರಾಗಿದ್ದು, ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ ಅವರುಗಳು ಕ್ಷೇತ್ರ ವ್ಯಾಪ್ತಿಯಲ್ಲಿ ಶನಿವಾರ ಭರ್ಜರಿ ಪ್ರಚಾರ ನಡೆಸಿದರು.

ಯದುವೀರ್‌ ಪಾದಯಾತ್ರೆ: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ನಗರದ ವಿವಿಧೆಡೆ ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರ ಬೆಂಬಲದೊಂದಿಗೆ ಬಿರುಸಿನ ಪಾದಯಾತ್ರೆ ನಡೆಸಿದರು. ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನ್ನೇಗೌಡನ ಕೊಪ್ಪಲು, ಗಂಗೋತ್ರಿ ಬಡಾವಣೆ, ಮಂಡಿಮೊಹಲ್ಲಾ, ಅಕ್ಬರ್ ರಸ್ತೆ, ಶ್ರೀ ಟಾಕೀಸ್ ರಸ್ತೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ತೆರದ ವಾಹನದ ಮೂಲಕ ಮತಯಾಚಿಸಿದರು. ಇದಲ್ಲದೆ ಕಾಳಮ್ಮ ದೇವಸ್ಥಾನ ಬೀದಿ, ಇರ್ವೀನ್ ರಸ್ತೆ, ಅಶೋಕ ರಸ್ತೆ ಸೇರಿದಂತೆ ಹಲವೆಡೆ ಪ್ರಚಾರ ನಡೆಸಿದರು. ಬಳಿಕ ಸಂಜೆ ಖಾಸಗಿ ಹೋಟೆಲ್‌ನಲ್ಲಿ ವೈದ್ಯರೊಂದಿಗೆ ನಡೆದ ಸಭೆಯಲ್ಲಿ ಪಾಲ್ಗೊಂಡ ಅವರು, ಮೇಟಗಳ್ಳಿ ಮತ್ತು ಬಿಎಂಶ್ರೀ ನಗರದಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯದುವೀರ್ ಒಡೆಯರ್ ಅವರು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಸಮನ್ವಯತೆಯಿಂದ ಪ್ರಚಾರ ನಡೆಸುತ್ತಿದ್ದಾರೆ. ಎರಡು ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಿನಿಂದ ಪ್ರಚಾರದಲ್ಲಿ ನಿರತರಾಗಿದ್ದು, ಎಲ್ಲ ಕಡೆಗಳಲ್ಲಿ ಜನರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಮೈಸೂರು ಅರಮನೆ, ರಾಜಮನೆತನದ ಬಗ್ಗೆ ಜನರಿಗೆ ಇರುವ ಭಾವನಾತ್ಮಕ ಸಂಬಂಧಕ್ಕೆ ಇದು ಸಾಕ್ಷಿಯಾಗಿದೆ. ಪ್ರಚಾರದ ವೇಳೆ ಜನರ ಸಮಸ್ಯೆಗಳನ್ನು ಕಣ್ಣಾರೆ ಕಾಣುತ್ತಿದ್ದು, ಈ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು. ಬಿಜೆಪಿ ಮುಖಂಡ ಮೈ.ವಿ. ರವಿಶಂಕರ್, ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ಮಾಜಿ ಮೇಯರ್ ಲಿಂಗಪ್ಪ, ಪಾಲಿಕೆ ಮಾಜಿ ಸದಸ್ಯ ಪ್ರಮಿಳಾ ಭಾರತ್, ಕಿರಣ್‌ಗೌಡ ಇತರರಿದ್ದರು.
=================
ಬಾಕ್ಸ್‌
ಚಾಮುಂಡೇಶ್ವರಿಯಲ್ಲಿ ಕೈ ಅಬ್ಬರ
ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಅವರು ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯಲ್ಲಿ ಶನಿವಾರ ಕೂಡ ಭರ್ಜರಿ ಪ್ರಚಾರ ನಡೆಸಿದರು. ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಇನ್ನಿತರ ಮುಖಂಡರೊಂದಿಗೆ ಪ್ರಚಾರದ ಅಖಾಡಕ್ಕಿಳಿದ ಎಂ. ಲಕ್ಷ್ಮಣ್‌, ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಎಂ. ಲಕ್ಷ್ಮಣ್‌, ನಮ್ಮ ಗ್ಯಾರಂಟಿ ಸರ್ಕಾರದಷ್ಟೇ ಗ್ಯಾರಂಟಿಯಾಗಿ ನಿಮ್ಮ ಸೇವಕನಾಗಿ ಕೆಲಸ ಮಾಡಿಕೊಡುತ್ತೇನೆ ನನಗೊಂದು ಅವಕಾಶ ಕೊಡಿ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ. ಲಕ್ಷ್ಮಣ್ ಮನವಿ ಮಾಡಿದರು. ಎಲ್ಲ ಕಾರ್ಯಕ್ರಮಗಳನ್ನು ಕೊಡುವ ವ್ಯವಸ್ಥೆ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಾಗಿದೆ. ಪ್ರತಿಯೊಬ್ಬರನ್ನೂ ಒಟ್ಟಿಗೆ ಕರೆದೊಯ್ಯುವುದು ಕಾಂಗ್ರೆಸ್ ಪಕ್ಷವಾಗಿದೆ. ರಾಜ್ಯದಲ್ಲಿ ಬರಗಾಲ ಇದ್ದರೂ ಕೇಂದ್ರ ಸರ್ಕಾರ ನಯಾಪೈಸೆ ಕೊಡಲಿಲ್ಲ. ಸೆಪ್ಟಂಬರ್‌ನಲ್ಲೇ ವರದಿ ಕೊಟ್ಟು ಮನವಿ ಮಾಡಿದರೂ ಸ್ಪಂದನೆ ಮಾಡಲಿಲ್ಲ. ಎನ್ ಡಿಆರ್ ಎ ತಂಡವೇ ೧೮ ಸಾವಿರ ಕೋಟಿ ರೂ.ಪರಿಹಾರವನ್ನು ತ್ವತರಿತವಾಗಿ ಬಿಡುಗಡೆ ಮಾಡಬೇಕೆಂದು ವರದಿ ಕೊಟ್ಟರು ಐದು ಪೈಸೆ ಬಿಡುಗಡೆ ಮಾಡಿಲ್ಲ. ಅವರು ಪುಕ್ಕಟ್ಟೆ ಕೊಡದಿದ್ದರೂ ನಮ್ಮ ರಾಜ್ಯದ ತೆರಿಗೆ ಹಣದಲ್ಲಿ ನ್ಯಾಯಯುತವಾಗಿ ನೀಡಬೇಕಾದ ಅನುದಾನ ನೀಡಲಿಲ್ಲ. ಬರೀ ಸುಳ್ಳು ಹೇಳಿಕೊಂಡೆ ತಿರುಗಾಡುವ ಕೆಲಸ ಮಾಡುತ್ತಾರೆ. ಆದುದರಿಂದ ಜನತೆ ಅರ್ಥ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.
ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿ, ಸಿದ್ದಲಿಂಗಪುರ, ಕೆ.ಆರ್.ಮಿಲ್ ಕಾಲೋನಿ, ರಮ್ಮನಹಳ್ಳಿ, ಕಾಳಿಸಿದ್ದನಹುಂಡಿ, ಹಂಚ್ಯಾ, ಆಲನಹಳ್ಳಿ ಹಾಗೂ ಹೊಸುಂಡಿ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.
=================

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಮುಖಪುಟಮೈಸೂರು ನಗರರಾಜಕೀಯ

PODCAST : ಸಿದ್ದರಾಮಯ್ಯ ತವರಿಗೆ ಬಿ.ವೈ.ವಿಜಯೇಂದ್ರ ಎಂಟ್ರಿ

March 27, 2024
ಮುಖಪುಟಮೈಸೂರು ನಗರ

ಮೇ. 12 ರಂದು ಅರ್ಥಪೂರ್ಣವಾಗಿ ಭಗವಾನ್ ಬುದ್ಧ ಜಯಂತಿ ಆಚರಣೆ – ಡಾ.ಪಿ ಶಿವರಾಜು

April 29, 2025
ಬೆಂಗಳೂರುಮುಖಪುಟಮೈಸೂರು ನಗರ

ಋತುಮತಿಯಾದ ಅಪ್ರಾಪ್ತ ಬಾಲಕಿಯರೇ ಟಾರ್ಗೆಟ್: ‘ಪ್ರಥಮ ಲೈಂಗಿ*ಕ ಸಂಪರ್ಕಕ್ಕೆ 20 ಲಕ್ಷ’ – ಮೂಢನಂಬಿಕೆ ಜಾಲ ಭೇದ!

September 29, 2025
ಮುಖಪುಟಮೈಸೂರು ನಗರರಾಜಕೀಯ

ʼಮುಂದಿನ ಮುಖ್ಯಮಂತ್ರಿ ಮಹದೇವಪ್ಪʼ ಕೂಗು : ಸಿಎಂ ತವರಲ್ಲಿ ಮಹದೇವಪ್ಪ ಬೆಂಬಲಿಗರ ಘೋಷಣೆ

September 20, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?