PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಲೇರಿಯ ಮುಕ್ತ ಜಿಲ್ಲೆ ನಮ್ಮ ಗುರಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಮಲೇರಿಯ ಮುಕ್ತ ಜಿಲ್ಲೆ ನಮ್ಮ ಗುರಿ
ಸಮಗ್ರ

ಮಲೇರಿಯ ಮುಕ್ತ ಜಿಲ್ಲೆ ನಮ್ಮ ಗುರಿ

ಪ್ರತಿನಿಧಿ
Last updated: May 2, 2024 3:45 pm
ಪ್ರತಿನಿಧಿ
Published May 2, 2024
Share
SHARE

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಕುಮಾರ್

ಚಿಕ್ಕಬಳ್ಳಾಪುರ  : ಒಂದು ಚಮಚದಷ್ಟು ನಿಂತ ನೀರಲ್ಲಿ ಸೊಳ್ಳೆಗಳ ಉತ್ಪತ್ತಿಗೆ ಅವಕಾಶವಿರುತ್ತದೆ. ಸೊಳ್ಳೆಗಳ ಉತ್ಪತ್ತಿ ಆದರೆ ಮಲೇರಿಯ ಹಾಗೂ ಇತರ ಕೀಟ ಜನ್ಯ ರೋಗಗಳಿಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 2009ನೇ ಸಾಲಿನಲ್ಲಿ 1,554 ಮಲೇರಿಯಾ ಪ್ರಕರಣಗಳು ದಾಖಲಾಗಿದ್ದವು. 2023ರ ಸಾಲಿನಲ್ಲಿ ಕೇವಲ 3 ಪ್ರಕರಣಗಳು ದಾಖಲಾಗಿ ಬಹುತೇಕ ಇಳಿಮುಖವಾಗಿದೆ. 2024ರ ಸಾಲಿನಲ್ಲಿ ಈವರೆಗೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಜಿಲ್ಲೆಯಲ್ಲಿ ಮಲೇರಿಯ ಪ್ರಕರಣಗಳಿಲ್ಲ ಎಂದು ಸಾರ್ವಜನಿಕರು ತಮ್ಮ ಸುತ್ತಮುತ್ತಲ ಸ್ವಚ್ಚತೆ ಕಾಪಾಡಿಕೊಳ್ಳುವುದನ್ನು ಕಡಿಮೆ ಮಾಡಬಾರದು. ಸೊಳ್ಳೆಗಳ ಉತ್ಪತ್ತಿ ತಾಣಗಳು, ನೀರು ನಿಲ್ಲುವ ತಾಣಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ನೀರಿನ ತೊಟ್ಟಿಗಳು, ಟ್ಯಾಂಕ್ ಗಳ, ಸಂಪುಗಳನ್ನು ಪ್ರತಿವಾರ ಸ್ವಚ್ಚಗೊಳಿಸಬೇಕು. ಮನೆಗಳಲ್ಲಿ ಪ್ರಿಜ್, ಏರ್ ಕೂಲರ್ ಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವ ಮೂಲಕ ಜೈವಿಕ ವಿಧಾನಗಳಿಂದ ಮಲೇರಿಯ ತಡೆಗಟ್ಟಬೇಕು. ಅನಿವಾರ್ಯ ಇದ್ದಾಗ ಮಾತ್ರ ಫಾಗಿಂಗ್ ಮಾಡಿಸಬೇಕು. ಇಲ್ಲವೆ ಬೇವಿನ ಹೊಗೆ ಹಾಕಿ ಸೊಳ್ಳೆಗಳನ್ನು ನಿಯಂತ್ರಿಸಬೇಕು. ಮನೆಗಳಲ್ಲಿ ಸೊಳ್ಳೆ ಪರದೆ ಹಾಗೂ ಇತರ ನಿರೋಧಕಗಳನ್ನು ಬಳಸಬೇಕು. ಪ್ರತಿ ಮನೆಯು ಮಲೇರಿಯ ಮುಕ್ತ ಆಗುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯು ಮಲೇರಿಯ ಮುಕ್ತ ಆಗಬೇಕು ಎಂದರು.
ಈಗಾಗಲೇ ಪ್ರಪಂಚದ 43 ದೇಶಗಳು ಮಲೇರಿಯ ಮುಕ್ತ ದೇಶಗಳಾಗಿವೆ. ಭಾರತವು ಆ ನಿಟ್ಟಿನಲ್ಲಿ ಸಂಕಲ್ಪ ಮಾಡಿದೆ. 2025ರ ಮೇಳೆಗೆ ಕರ್ನಾಟಕ ರಾಜ್ಯದಲ್ಲಿ ಮಲೇರಿಯ ಪ್ರಕರಣಗಳ ಶೂನ್ಯ ಸಾಧನೆ ಉದ್ದೇಶದಿಂದ ಮಲೇರಿಯ ನಿಯಂತ್ರಣಕ್ಕೆ ಯುಕ್ತ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸೂಚಿಸಿದೆ. ಅದರಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ 2025ರ ವೇಳೆಗೆ ಶೂನ್ಯ ಸ್ಥಳೀಯ ಮಲೇರಿಯ ಸಾಧನೆಯನ್ನು ಕೈಗೊಳ್ಳಬೇಕಿದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮಲೇರಿಯ ಮುಕ್ತ ಜಿಲ್ಲೆಯ ಸಾಧನೆಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು. ಪೋಷಕರು ಹಾಗೂ ಸುತ್ತಮುತ್ತಲ ವಾಸಿಗಳಿಗೆ ಸೊಳ್ಳೆ ನಿಯಂತ್ರಣ ಕುರಿತು ವಿದ್ಯಾರ್ಥಿಗಳು ಅರಿವು ಮೂಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾದಿಕಾರಿ ಡಾ. ಮಹೇಶ್ ಕುಮಾರ್ ಅವರು ಸಲಹೆ ನೀಡಿದರು.
ನಂದಿ ವೈದ್ಯಕೀಯ ಕಾಲೇಜಿನ ನಿರ್ದೇಶಕ ಮಂಜುನಾಥ ಮಾತನಾಡಿ, ಯಾವ ದೇಶದ ಆರೋಗ್ಯ ಸೂಚ್ಯಂಕ ಚೆನ್ನಾಗಿರುತ್ತದೋ ಆ ದೇಶ ಅಭಿವೃದ್ಧಿಯಲ್ಲಿ ಮುಂದಿರುತ್ತದೆ. ಅಧಿಕ ರಕ್ತದ ಒತ್ತಡ, ಮಧುಮೇಹ ಇಂದಿನ ಬದಲಾದ ಜೀವನ ವಿಧಾನದಿಂದ ಬರುವ ಸಾಧ್ಯತೆ ಹೆಚ್ಚಾಗಿದೆ. ಉತ್ತಮ ಜೀವನ ವಿಧಾನ, ವ್ಯಾಯಾಮ, ಪಾಲನೆಯಿಂದ ಇಂತಹ ರೋಗಗಳನ್ನು ತಡೆಗಟ್ಟಬಹುದು. ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯ, ಡೆಂಗ್ಯು, ಚಿಕುನ್ ಗುನ್ಯ, ಆನೆ ಕಾಲು ರೋಗ ಇನ್ನು ಮುಂತಾದ ಕೀಟ ಜನ್ಯ ಕಾಯಿಲೆಗಳನ್ನು ನಿಯಂತ್ರಿಸಬಹುದು. ಚಳಿ ಜ್ವರ, ಮೈ ಕೈ ನೋವು, ಕಂಡು ಬಂದರೆ ಹತ್ತಿರದ ಆಸ್ಪತ್ರೆಗೆ ತೆರಳಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಮಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಲೇರಿಯಾ ಪ್ರಕರಣಗಳು ಜಾಸ್ತಿ ಇದ್ದು, ಆ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡರೆ ಹೆಚ್ಚು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ವಿದ್ಯಾರ್ಥಿಗಳಿಗೆ ತಿಳಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗ ನಿಯಂತ್ರಾಣಾಧಿಕಾರಿ ಡಾ. ಪ್ರಕಾಶ್ ಅವರು ಪಿ.ಪಿ.ಟಿ ಪ್ರದರ್ಶನದ ಮೂಲಕ ಮಲೇರಿಯಾ ನಿಯಂತ್ರಣದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಜಿ.ಡಿ. ಚಂದ್ರಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕೃಷ್ಣ ಪ್ರಸಾದ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಶಿವಕುಮಾರ್, ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಶಿ ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಕೆ.ಮಂಜುಳ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಹರೀಶ್ ರವರು ಉಪಸ್ಥಿತರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಯುವಕರು ಸೇವಾ ಮಭೋಬಾವನೆ ಬೆಳೆಸಿಕೊಳ್ಳಿ

May 16, 2024
ಮುಖಪುಟಸಮಗ್ರ

ಕಾಂಗ್ರೆಸ್ ಸೇರಿದ್ದಕ್ಕೆ ಪರೋಕ್ಷವಾಗಿ ನೇಹಾ ತಂದೆ ಅಸಮಾಧಾನ

April 20, 2024
ಸಮಗ್ರ

ಹಲವು ಗಣ್ಯರಿಗೆ ಯುಗಾದಿ ಪ್ರಶಸ್ತಿ ಪುರಸ್ಕಾರ

April 8, 2024
ಸಮಗ್ರ

ಸುದ್ದಿ ರಹಿತ ಫೊಟೋ ಮಾತ್ರ

April 5, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?