PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: “ಹೈಕಮಾಂಡ್ ತೀರ್ಮಾನವೇ ಅಂತಿಮ” ; ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > “ಹೈಕಮಾಂಡ್ ತೀರ್ಮಾನವೇ ಅಂತಿಮ” ; ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ
ಮುಖಪುಟಮೈಸೂರು ನಗರರಾಜಕೀಯ

“ಹೈಕಮಾಂಡ್ ತೀರ್ಮಾನವೇ ಅಂತಿಮ” ; ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ

Prathinidhi News
Last updated: December 5, 2025 1:02 pm
Prathinidhi News
Published December 5, 2025
Share
SHARE

ಮೈಸೂರು, ಡಿಸೆಂಬರ್‌ 5, 2025 : ರಾಜ್ಯ ರಾಜಕಾರಣದಲ್ಲಿ ಪದೇ ಪದೇ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಕುರಿತ ಗೊಂದಲಗಳಿಗೆ ತೆರೆ ಎಳೆಯಲು ಪ್ರಯತ್ನಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಮತ್ತು ಡಿಸಿಎಂ ಸೇರಿ ಎಲ್ಲರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದರು.

ಸಿಎಂ ಬದಲಾವಣೆ ಕುರಿತ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ದಿನೇಶ್ ಗುಂಡೂರಾವ್, “ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಎಲ್ಲರೂ ಸಹ ಹೈಕಮಾಂಡ್‌ನ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿರುತ್ತದೆ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ” ಎಂದು ಪುನರುಚ್ಚರಿಸಿದರು.

“ನೀವು ಕೂಡ ಸಿಎಂ ರೇಸ್‌ನಲ್ಲಿದ್ದೀರಾ?” ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಗುಂಡೂರಾವ್, “ಈ ವಿಚಾರದಲ್ಲಿ ನನ್ನನ್ನು ಯಾಕೆ ಎಳೆದು ತರುತ್ತಾ ಇದ್ದೀರಾ? ನನಗೂ ಆಸೆ ಇರುತ್ತದೆ, ಆದರೆ ಸಮಯ-ಸಂದರ್ಭ ಎಲ್ಲವನ್ನೂ ಕೂಡ ನಿರ್ಧಾರ ಮಾಡುತ್ತದೆ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ನೋಡೋಣ” ಎಂದು ಪ್ರತಿಕ್ರಿಯಿಸಿದರು.  “ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಸದಾನಂದ ಗೌಡ ಎಲ್ಲರೂ ಸಿಎಂ ಆದರು. ಅವರ ರೀತಿಯ ಕಿತ್ತಾಟ, ಗೊಂದಲ ನಮ್ಮಲ್ಲಿ ಇಲ್ಲ. ನಿನ್ನೆ ನಡೆದ ಸಭೆಯಲ್ಲೂ ಕೂಡ ಎಲ್ಲರೂ ಒಟ್ಟಾಗಿ ಭಾಗಿಯಾಗಿದ್ದೇವೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ,” ಎಂದು ಅವರು ಬಿಜೆಪಿ ಆಡಳಿತಾವಧಿಯನ್ನು ನೆನಪಿಸಿದರು.

ಬಿಜೆಪಿ ನಾಯಕರ ನಿಷ್ಕ್ರಿಯತೆ ವಿರುದ್ಧ ವಾಗ್ದಾಳಿ

ಇದೇ ವೇಳೆ, ರಾಜ್ಯದಲ್ಲಿನ ಪ್ರತಿಪಕ್ಷವಾದ ಬಿಜೆಪಿ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಪ್ರತಿಪಕ್ಷ ಬಿಜೆಪಿ ಸಂಪೂರ್ಣ ನಿಷ್ಕ್ರಿಯವಾಗಿದೆ. ವಿಜಯೇಂದ್ರ, ಅಶೋಕ್, ಪ್ರಹ್ಲಾದ್ ಜೋಶಿಯಂತಹ ನಾಯಕರು ಕೇವಲ ಭಾಷಣ ಬಿಗಿಯುವುದರಲ್ಲೇ ಬ್ಯುಸಿ ಇದ್ದಾರೆ. ನಮ್ಮ ರಾಜ್ಯದ ರೈತರ ಸಮಸ್ಯೆಗಳನ್ನು ಕೇಂದ್ರಕ್ಕೆ ತಲುಪಿಸುತ್ತಿಲ್ಲ. ಕೇಂದ್ರದಲ್ಲಿ ಸಂಸದರು ದ್ವನಿ ಎತ್ತುತ್ತಿಲ್ಲ. ಇವರಿಗೇನು ಜವಾಬ್ದಾರಿ ಇಲ್ವಾ? ಎಂದು ಪ್ರಶ್ನಿಸುವ ಮೂಲಕ ಬಿಜೆಪಿ ನಾಯಕರ ಕಾರ್ಯವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

- ಜಾಹೀರಾತು -

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ನರೇಗಾ ಹೆಸರು ಬದಲಾವಣೆ: ಕೇಂದ್ರದ ವಿರುದ್ಧ ಕಿಡಿಕಾರಿದ ಉಸ್ತುವಾರಿ ಸಚಿವ ಡಾ. ಹೆಚ್‌ ಸಿ ಮಹದೇವಪ್ಪ

January 12, 2026
ಮುಖಪುಟಮೈಸೂರು ನಗರ

ಮೈಸೂರು: ಚಿನ್ನದ ಮೇಲೆ ಕಡಿಮೆ ಬಡ್ಡಿ ಸಾಲದ ಆಮಿಷವೊಡ್ಡಿ ಪರಾರಿಯಾಗಿದ್ದ ಸ್ಟಾರ್ ಗೋಲ್ಡ್ ಕಂಪನಿ ಮಾಲೀಕನ ಬಂಧನ

February 2, 2026
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಪರಪ್ಪನ ಅಗ್ರಹಾರ ವೀಡಿಯೋ ವೈರಲ್‌ : ಡ್ಯಾನ್ಸ್ ಮಾಡಿದ ಕೈದಿಗಳ ಮೇಲೆ FIR ದಾಖಲು.!

November 12, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ಗ್ರಾಮಾಂತರ

ಹೆಚ್.ಡಿ.ಕೋಟೆಯಲ್ಲಿ ಹರಿದ ನೆತ್ತರು; ಹಣಕಾಸಿನ ವಿಚಾರಕ್ಕೆ ಭೀಕರ ಕೊಲೆ!

December 17, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?