PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ; ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ನಂಜನಗೂಡು > ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ; ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ !
ನಂಜನಗೂಡುಮುಖಪುಟಮೈಸೂರು ಗ್ರಾಮಾಂತರರಾಜಕೀಯ

ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ; ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ !

Prathinidhi News
Last updated: November 8, 2025 11:37 am
Prathinidhi News
Published November 8, 2025
Share
SHARE

ತಾಂಡವಪುರ ,ನವಂಬರ್ 7, 2025 : ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಂಜನಗೂಡು ಬ್ಲಾಕ್, ನಗರ ಹಾಗೂ ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ‘ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಚಾಲನೆ ನೀಡಿದರು. 

ಚಾಲನೆ ನೀಡಿದ ಬಳಿಕ ಶಾಸಕರಾದ ದರ್ಶನ್ ಧ್ರುವನಾರಾಯಣ್ ಮಾತನಾಡಿ, 2004ರಲ್ಲಿ, ಇ ವಿ ಎಂ ಮೂಲಕ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆರ್. ಧ್ರುವನಾರಾಯಣ್ ಅವರು ಕೇವಲ ಒಂದು ಮತದ ಅಂತರದಿಂದ ಗೆಲುವು ಸಾಧಿಸಿ, ದೇಶದಲ್ಲೇ ಒಂದು ಇತಿಹಾಸ ನಿರ್ಮಿಸಿದರು. ಆ ಜಯದಿಂದ ಜನರು ಇ ವಿ ಎಂ ವ್ಯವಸ್ಥೆಯ ಮೇಲೆ ನಂಬಿಕೆ ಇಟ್ಟರು. ಆದರೇ ಇಂದು ಕೇಂದ್ರದ ಬಿಜೆಪಿ ಸರ್ಕಾರವು ಮತದಾರರ ಪಟ್ಟಿಯನ್ನು ಬಿಜೆಪಿ ಗೆಲುವಿಗೆ ಅನುಕೂಲವಾಗುವಂತೆ ಮಾಡಿಕೊಳ್ಳುವ ಮೂಲಕ ಕಳ್ಳ ಮತದಾನ ನಡೆಸುತ್ತಿರುವುದನ್ನು ವಿರೋಧಿಸಿ ಈ ಅಭಿಯಾನ ನಡೆಸಿ, ಈ ಸಂದರ್ಭದಲ್ಲಿ ನಾನು ಕೂಡ ಬಿಜೆಪಿಯ ಕಳ್ಳ ಮತದಾನ ಕ್ರಮಗಳ ವಿರುದ್ಧ ನನ್ನ ಬೆಂಬಲದ ಸಹಿಯನ್ನು ನೀಡಿದ್ದೇನೆ.

ಚುನಾವಣೆ ಆಯೋಗದ ದುರ್ಬಳಕೆ ಮೂಲಕ ಹಲವು ರಾಜ್ಯಗಳಲ್ಲಿ ಮತದಾರರ ಪಟ್ಟಿಯನ್ನು ಬಿಜೆಪಿ ಪರವಾಗಿ ತಿರುಗಿಸುವ ಪ್ರಯತ್ನ ನಡೆಯುತ್ತಿರುವುದು ಪ್ರಜಾತಂತ್ರದ ಮೂಲತತ್ವಗಳ ಮೇಲಿನ ನೇರ ದಾಳಿ.
ಇದಕ್ಕೆ ವಿರೋಧವಾಗಿ ಕಾಂಗ್ರೆಸ್‌ ಪಕ್ಷ ಕೈಗೊಂಡಿರುವ ಈ ಹೋರಾಟಾತ್ಮಕ ಅಭಿಯಾನವು ಜನರ ಮತದ ಹಕ್ಕಿನ ರಕ್ಷಣೆಗೆ ಮತ್ತು ಪ್ರಜಾಸತ್ತಾತ್ಮಕ ಭಾರತದ ಉಳಿವಿಗೆ ಬದ್ಧವಾಗಿದೆ ಎಂದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸೋಲಿಲದ ಸರದಾರರ ಎಂದೇ ಕರೆಸಿಕೊಂಡಿದ್ದ ಮಲ್ಲಿಕಾರ್ಜುನ್ ಖರ್ಗೆ ಅವರು ಸಹ ಈ ವೋಟ್ ಚೋರು ಕಳ್ಳತನದಿಂದಲೇ ಅವರು ಸೋತಿರಬಹುದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಇದಕ್ಕೆ ಪ್ರತಿ ಹಳ್ಳಿಯಲ್ಲೂ ಬೂತ್ ಬೆಟ್ಟದ ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವೋಟ್ ಲಿಸ್ಟ್ ಅಲ್ಲಿ ಯಾರದಾದರೂ ಹೆಸರು ಬಿಟ್ಟಿದ್ದರೆ ಅದನ್ನು ಸೇರಿಸುವುದು ಮತ್ತು ನಮ್ಮ ಸ್ಥಳೀಕರಣದ ಎಷ್ಟೊ ಮಂದಿ ಮತದಾರರಾಗಿದ್ದಾರೆ ಅಂತವರನ್ನು ಗುರುತಿಸಿ ಅದನ್ನು ಚುನಾವಣಾ ಆಯೋಗ ಕಳಿಸಿಕೊಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್, ನಗರ ಬ್ಲಾಕ್ ಅಧ್ಯಕ್ಷರಾದ ಸಿ. ಎಂ ಶಂಕರ್, ಹುಲ್ಲಹಳ್ಳಿ ಬ್ಲಾಕ್ ಅಧ್ಯಕ್ಷರಾದ ಶ್ರೀಕಂಠ ನಾಯಕ, ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲತಾ ಸಿದ್ದಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ ಮಾರತಿ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಚಂದನ್,ತಾಲ್ಲೂಕು ಅಧ್ಯಕ್ಷರಾದ ವಿಜಯ್, ಕಾಂಗ್ರೆಸ್ ಮುಖಂಡರಾದ ಗಿರೀಶ್ ನಗರ ಅಧ್ಯಕ್ಷರಾದ ಮಹೇಶ್, ಹುಲ್ಲಹಳ್ಳಿ ಬ್ಲಾಕ್ ಅಧ್ಯಕ್ಷರಾದ ಆದರ್ಶ್, ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರಿನಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ‘ಖಾಕಿ’ ಕಣ್ಗಾವಲು: ಅಬಕಾರಿ ಮತ್ತು ಪೊಲೀಸ್ ಇಲಾಖೆಯಿಂದ ಹದ್ದಿನ ಕಣ್ಣು

December 31, 2025
ಬೆಂಗಳೂರುಮುಖಪುಟರಾಜಕೀಯ

ನನ್ನ ಡಿಕೆಶಿ ನಡುವೆ ಗೊಂದಲ ಇಲ್ವೇ ಇಲ್ಲ., ಸುಗಮ ಆಡಳಿತವೊಂದೇ ಗುರಿ ; ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಟಿ

November 29, 2025
ಕ್ರೀಡೆಮುಖಪುಟ

“ಹಿಟ್ ಮ್ಯಾನ್” – “ಕಿಂಗ್ ” ಆಟಕ್ಕೆ ಫ್ಯಾನ್ಸ್ ಫಿದಾ.. “ನಿವೃತ್ತಿ” ಮಾತಾಡ್ತಿದ್ದವರಿಗೆ ಗಪ್ ಚುಪ್ ಎಂದ ಸ್ಟಾರ್ ಬ್ಯಾಟರ್ಸ್..

December 1, 2025
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಕಿರುಕುಳ: ಯೂಟ್ಯೂಬರ್ ಬಂಧನ

January 2, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?