ಮೈಸೂರು ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಹುಲಿಗಳ ದಾಳಿ ಹೆಚ್ಚಾಗಿದೆ. ಹಸು, ದನಗಾಹಿ ವೀರಭದ್ರ ಬೋವಿಯ ಮೇಲೆ ಹುಲಿ ದಾಳಿ ಹಿನ್ನೆಲೆ ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ ಮಾಡಿದ್ದಾರೆ. ಜೇನುಮತ್ತಿಮರ ಪ್ರದೇಶಕ್ಕೆ ಭೇಟಿ ನೀಡಿದರು. ಘಟನೆ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದರು. ಈ ವೇಳೆ ಅರಣ್ಯ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದು ಹುಲಿ ಕಾಣಿಸಿಕೊಂಡಿದ್ದರ ಬಗ್ಗೆ ಜನ ಮಾಹಿತಿ ನೀಡಿದ್ರೂ ಯಾಕೆ ಕ್ರಮವಿಲ್ಲ ಎಂದು ಗುಡುಗಿದ್ದಾರೆ.