PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ನಾಳೆ ಲಕ್ಷ ಕಂಠಗಳಿಂದ ಹನುಮಾನ್ ಚಾಲೀಸಾ ಪಠಣ; ಸಿದ್ದರಾಮಯ್ಯ ಸುದೀರ್ಘ ಕಾಲ ಸಿಎಂ ಆಗಿರಲಿ ಎಂದ ಶಾಸಕ ಹರೀಶ್ ಗೌಡ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ನಾಳೆ ಲಕ್ಷ ಕಂಠಗಳಿಂದ ಹನುಮಾನ್ ಚಾಲೀಸಾ ಪಠಣ; ಸಿದ್ದರಾಮಯ್ಯ ಸುದೀರ್ಘ ಕಾಲ ಸಿಎಂ ಆಗಿರಲಿ ಎಂದ ಶಾಸಕ ಹರೀಶ್ ಗೌಡ
ಮುಖಪುಟಮೈಸೂರು ನಗರ

ಮೈಸೂರು: ನಾಳೆ ಲಕ್ಷ ಕಂಠಗಳಿಂದ ಹನುಮಾನ್ ಚಾಲೀಸಾ ಪಠಣ; ಸಿದ್ದರಾಮಯ್ಯ ಸುದೀರ್ಘ ಕಾಲ ಸಿಎಂ ಆಗಿರಲಿ ಎಂದ ಶಾಸಕ ಹರೀಶ್ ಗೌಡ

Prathinidhi News
Last updated: February 13, 2026 3:35 pm
Prathinidhi News
Published February 13, 2026
Share
SHARE

ಮೈಸೂರು, ಫೆಬ್ರವರಿ 13, 2026 :ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಳೆ ಭಕ್ತಿ ಪರವಶತೆಯ ವಾತಾವರಣ ನಿರ್ಮಾಣವಾಗಲಿದ್ದು, ಮಹಾರಾಜ ಕಾಲೇಜು ಮೈದಾನದಲ್ಲಿ ಸುಮಾರು ಒಂದು ಲಕ್ಷ ಜನರಿಂದ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮ ನಡೆಯಲಿದೆ. ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವತಿಯಿಂದ ಆಯೋಜಿಸಲಾಗಿರುವ ಈ ಬೃಹತ್ ಕಾರ್ಯಕ್ರಮವು ಶ್ರೀಗಳ ನೇತೃತ್ವದಲ್ಲಿಯೇ ಜರುಗಲಿದೆ. ಲೋಕ ಕಲ್ಯಾಣಾರ್ಥವಾಗಿ ಈ ವೇಳೆ ಮಹಾಯಜ್ಞ ಕೂಡ ಆಯೋಜನೆಯಾಗಿದ್ದು, ಜಾತಿ-ಮತ ಭೇದವಿಲ್ಲದೆ ಯಾರು ಬೇಕಾದರೂ ಈ ಪವಿತ್ರ ಪಾರಾಯಣದಲ್ಲಿ ಭಾಗವಹಿಸಬಹುದಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಶಾಸಕರಾದ ಶ್ರೀವತ್ಸ ಮತ್ತು ಹರೀಶ್ ಗೌಡ ಅವರು, ಕಾರ್ಯಕ್ರಮಕ್ಕೆ ಬರುವ ಭಕ್ತರಿಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಮೈದಾನದಲ್ಲಿ 75 ಸಾವಿರ ಆಸನಗಳ ವ್ಯವಸ್ಥೆ, ಕುಡಿಯುವ ನೀರು ಹಾಗೂ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ವಿಶೇಷವಾಗಿ ಈ ಪಾರಾಯಣದಲ್ಲಿ ಪೌರ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ಈ ಬಗ್ಗೆ ಮಾತನಾಡಿದ ಮಾಜಿ ಮೇಯರ್ ಎಂ. ನಾರಾಯಣ್ ಅವರು, ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಪೌರ ಕಾರ್ಮಿಕರ ಕಾಲೋನಿಗಳಲ್ಲಿನ 20 ದೇಗುಲಗಳ ಜೀರ್ಣೋದ್ದಾರ ಮಾಡಿದ್ದಾರೆ ಹಾಗೂ 25ಕ್ಕೂ ಹೆಚ್ಚು ಪೌರ ಕಾರ್ಮಿಕರಿಗೆ ಪೌರೋಹಿತ್ಯದ ತರಬೇತಿ ನೀಡುವ ಮೂಲಕ ಸಮುದಾಯದ ಏಳಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತನಾಡಿದ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಅವರು ಸಿಎಂ ನಾಯಕತ್ವದ ಕುರಿತು ಮಹತ್ವದ ಹೇಳಿಕೆ ನೀಡಿದರು. ಸಿದ್ದರಾಮಯ್ಯ ಅವರು ಕೇವಲ ಐದು ವರ್ಷ ಮಾತ್ರವಲ್ಲ, ಮುಂದಿನ ಹತ್ತು ಹದಿನೈದು ವರ್ಷಗಳ ಕಾಲವೂ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬುದು ನನ್ನ ಆಸೆ ಎಂದು ತಿಳಿಸಿದರು. ತಮಗೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ಹೈಕಮಾಂಡ್ ಇದ್ದಂತೆ ಮತ್ತು ತಾವು ಇಬ್ಬರ ಪರವಾಗಿಯೂ ಇರುವುದಾಗಿ ಸ್ಪಷ್ಟಪಡಿಸಿದರು.

- ಜಾಹೀರಾತು -

ಇತ್ತೀಚಿನ ಶಾಸಕರ ವಿದೇಶ ಪ್ರವಾಸದ ಕುರಿತಾದ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ಅವರು, ಶಾಸಕರು ವಿದೇಶಕ್ಕೆ ಹೋಗುವುದು ಹೊಸತೇನಲ್ಲ, ತಾವು ಕೂಡ ಆರು ತಿಂಗಳ ಹಿಂದೆ ಹೋಗಿ ಬಂದಿರುವುದಾಗಿ ತಿಳಿಸಿದರು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದ ಅವರು, ನಾಯಕತ್ವದ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಿಎಂ ಅವರೇ ಹೇಳಿದ್ದಾರೆ. ನಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದು, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲದೆ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಹರೀಶ್ ಗೌಡ ಮೈಸೂರಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯಮುಖಪುಟ

ಮೂರು ದಿನಗಳಿಂದ ಕಾಲುವೆಯಲ್ಲಿ ಸಿಲುಕಿರುವ ಕಾಡಾನೆ ; ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ!

November 18, 2025
ಮುಖಪುಟಮೈಸೂರು ನಗರ

ಮೈಸೂರು: ಮಾದಕ ವಸ್ತು ಜಾಲದ ಶಂಕೆ – ಮೈಸೂರಿನ ಉದ್ಯಮಿಯನ್ನು ರಾಜಸ್ಥಾನಕ್ಕೆ ಕರೆದೊಯ್ದ ಎನ್‌.ಸಿ.ಬಿ

January 30, 2026
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಗಾಂಜಾ, ನಗದು, ಮಾರಕಾಸ್ತ್ರ ವಶ: ಇಬ್ಬರ ಬಂಧನ; ಕಾರ್ಯಾಚರಣೆ ಮುಂದುವರಿಕೆ

December 3, 2025
ಮುಖಪುಟಮೈಸೂರು ನಗರ

ಮೈಸೂರು ಕೆರೆ ಒತ್ತುವರಿ ತೆರವು: ಶಾಸಕ ಶ್ರೀವತ್ಸ ಎಚ್ಚರಿಕೆ ಬೆನ್ನಲ್ಲೇ ತಾಲೂಕು ಆಡಳಿತದ ಭರ್ಜರಿ ಕಾರ್ಯಾಚರಣೆ

February 14, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?