PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹಸುಗೂಸು ಮಾರಾಟ ಪ್ರಕರಣ: ವಿಚಾರಣೆ ವೇಳೆ ಹೊರಬಿತ್ತು 250ಕ್ಕೂ ಹೆಚ್ಚು ಮಕ್ಕಳ ಮಾರಾಟ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಹಸುಗೂಸು ಮಾರಾಟ ಪ್ರಕರಣ: ವಿಚಾರಣೆ ವೇಳೆ ಹೊರಬಿತ್ತು 250ಕ್ಕೂ ಹೆಚ್ಚು ಮಕ್ಕಳ ಮಾರಾಟ
ಜಿಲ್ಲೆ

ಹಸುಗೂಸು ಮಾರಾಟ ಪ್ರಕರಣ: ವಿಚಾರಣೆ ವೇಳೆ ಹೊರಬಿತ್ತು 250ಕ್ಕೂ ಹೆಚ್ಚು ಮಕ್ಕಳ ಮಾರಾಟ

Prathinidhi News
Last updated: November 30, 2023 10:08 am
Prathinidhi News
Published November 30, 2023
Share
SHARE

ಬೆಂಗಳೂರು, ನ.30: ಹಸುಗೂಸು ಮಾರಾಟ ಪ್ರಕರಣ  ಸಂಬಂಧ ಆರೋಪಿಗಳು ಇದುವರೆಗೆ 250ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿರುವ ವಿಚಾರ ಸಿಸಿಬಿ ಪೊಲೀಸರ  ತನಿಖೆಯಿಂದ ಹೊರಬಿದ್ದಿದೆ. ಮಾರಾಟ ಮಾಡಿದ ಮಕ್ಕಳ ಪೈಕಿ 50-60 ಮಕ್ಕಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಿದರೆ, ಉಳಿದ ಮಕ್ಕಳನ್ನು ತಮಿಳುನಾಡಿಗೆ ಮಾರಾಟ ಮಾಡಿರುವುದು ತಿಳಿದುಬಂದಿದೆ.

Contents
ಗ್ಯಾಂಗ್ ಲೀಡರ್ ಮಹಾಲಕ್ಷ್ಮೀ ಕಥೆಯೇ ರೋಚಕಆರೋಪಿಗಳನ್ನು ಸೆರೆ ಹಿಡಿದದ್ದೇ ರೋಚಕ

ಹಸುಗೂಸು ಮಾರಾಟ ಪ್ರಕರಣ ಸಂಬಂಧ ಬಂಧಿತ ಎಂಟು ಆರೋಪಿಗಳನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅದರಂತೆ, ಆರೋಪಿಗಳು ಕಳೆದ 6 ವರ್ಷಗಳಲ್ಲಿ 250 ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿದ ವಿಚಾರವನ್ನು ಬಾಯಿಬಿಟ್ಟಿದ್ದಾರೆ. ಈ ಪೈಕಿ ಕೇವಲ 50-60 ಮಕ್ಕಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಿದರೆ, ಉಳಿದ ಮಕ್ಕಳನ್ನು ತಮಿಳುನಾಡಿನಲ್ಲಿ ಮಾರಾಟ‌ ಮಾಡಿದ್ದಾರೆ.

ಆರೋಪಿಗಳು ಈ ವಿಚಾರವನ್ನು ಬಾಯಿಬಿಡುತ್ತಿದ್ದಂತೆ ಮತ್ತಷ್ಟು ಕಾರ್ಯಪ್ರವೃತ್ತರಾದ ಸಿಸಿಬಿ ಪೊಲೀಸರು ಕರ್ನಾಟಕದಲ್ಲಿ ಮಾರಾಟ ಆಗಿರುವ ಮಕ್ಕಳ ಬಗ್ಗೆ ಆರೋಪಿಗಳಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. ಸದ್ಯ 10 ಮಕ್ಕಳ ಸುಳಿವು ಸಿಕ್ಕಿದ್ದು, ಉಳಿದ ಮಕ್ಕಳನ್ನು ಎಲ್ಲಿ, ಯಾರಿಗೆ ಮಾರಾಟ ಮಾಡಲಾಗಿದೆ ಎಂದು ವಿಚಾರಣೆ ನಡೆಸುತ್ತಿದ್ದಾರೆ.

ಗ್ಯಾಂಗ್ ಲೀಡರ್ ಮಹಾಲಕ್ಷ್ಮೀ ಕಥೆಯೇ ರೋಚಕ

ಕರ್ನಾಟಕದ ಗ್ಯಾಂಗ್ ಲೀಡರ್ ಮಹಾಲಕ್ಷ್ಮೀ ಕಥೆಯೇ ಒಂದು ರೀತಿ ರೋಚಕವಾಗಿದೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡು ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡಿಕೊಂಡಿದ್ದಾಕೆ‌ ಇವತ್ತು ಕೋಟ್ಯಾಧಿಪತಿಯಾಗಿದ್ದಾಳೆ. 2017 ರಿಂದಲೂ ಈ ದಂಧೆಯನ್ನು ಮಾಡುತ್ತಾ ಇರುವ ಮಹಾಲಕ್ಷ್ಮೀ, ಇಂದು ಸ್ವಂತ ಮನೆ, ಕಾರು ಜೊತೆಗೆ ಮೈತುಂಬಾ ಚಿನ್ನಾಭರಣ ಹೊಂದಿದ್ದಾಳೆ.

- ಜಾಹೀರಾತು -

2015 ರಿಂದ 2017 ರವರೆಗೂ ಗಾರ್ಮೆಟ್ಸ್​​ನಲ್ಲಿ ಕೇವಲ 8 ಸಾವಿರ ಸಂಬಳಕ್ಕೆ ಕೆಲಸ ಮಾಡ್ತಾ ಮಾಡುತ್ತಿದ್ದಳು. ಈ ವೇಳೆ ಆಕೆಯ ಪರಿಚಯ ಆದ ಮಹಿಳೆ ಅಂಡಾಣು ಕೊಟ್ಟರೇ ಹಣ ಕೊಡುವುದಾಗಿ ಕೇಳಿದ್ದಳು. ಆಗ ಅಂಡಾಣು ನೀಡಿದ್ದ ಮಹಾಲಕ್ಷ್ಮೀಗೆ ಸುಮಾರು 20 ಸಾವಿರ ನೀಡಿದ್ದಳು. ನಂತರ ದಿನಗಳಲ್ಲಿ ಅಂಡಾಣು ಕೊಡುವರನ್ನು ಪತ್ತೆ ಮಾಡಿ ಅದರಿಂದ ಕಮೀಷನ್ ಪಡೆಯುವ ಕೆಲಸ ಮಾಡಿಕೊಂಡಿದ್ದಳು ಎಂಬ ವಿಚಾರವೂ ತನಿಖೆಯಿಂದ ತಿಳಿದುಬಂದಿದೆ.

ಆರೋಪಿಗಳನ್ನು ಸೆರೆ ಹಿಡಿದದ್ದೇ ರೋಚಕ

ಪ್ರಕರಣ ಭೇದಿಸಲು ಸಿಸಿಬಿ ಅಧಿಕಾರಿಗಳು ಮಕ್ಕಳು ಕೊಳ್ಳುವ ಪೋಷಕರ ಸೋಗಿನಲ್ಲಿ ಥೇಟ್ ಫೀಲ್ಮ್ ಸ್ಟೈಲ್​ನಲ್ಲಿ ಎಂಟ್ರಿ ಕೊಟ್ಟು ಆರೋಪಿಗಳನ್ನು ಸೆರೆ ಹಿಡಿದಿದ್ದರು. ಕುಡುಕ‌ನೋರ್ವ ನೀಡಿದ್ದ ಮಹತ್ವದ ಸುಳಿವು ಆಧರಿಸಿ ಬೇಟೆಗಿಳಿದಿದ್ದ ಸಿಸಿಬಿ ಪೊಲೀಸರು, ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದರು. ಈ ವೇಳೆ ವೈದ್ಯರಿಂದ ಹಿಡಿದು ಸರ್ಕಾರಿ ಅಧಿಕಾರಿಗಳವರೆಗೂ ಪ್ರಕರಣದಲ್ಲಿ ಲಿಂಕ್ ಇರುವುದು ಪತ್ತೆಯಾಗಿದೆ. ಅವ್ಯಾಹತವಾಗಿ ಪಸರಿಸಿಕೊಂಡಿರುವ ಬೃಹತ್ ಜಾಲದಲ್ಲಿ ವೈದ್ಯರೇ ಕಿಂಗ್ ಪಿನ್​ಗಳಾಗಿದ್ದಾರೆ.

ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಕ್ಕಳ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಸರ್ಕಾರಿ ಅಧಿಕಾರಿ ಕೂಡ ಶಾಮೀಲಾಗಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮಾರಾಟವಾಗುವ ಮಕ್ಕಳ ನಕಲಿ ದಾಖಲೆ ಸೃಷ್ಟಿಸಿ ಕರಾಳ ದಂಧೆ ನಡೆಯುತ್ತಿರುವ ಬಗ್ಗೆ ಒಂದೊಂದೇ ಮುಖ ಅನಾವರಣಗೊಳ್ಳುತ್ತಿದೆ. ಸದ್ಯ ಹಲವು ಆಯಾಮಗಳಲ್ಲಿ ಸಿಸಿಬಿ ತನಿಖೆ ಚುರುಕುಗೊಳಿಸಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆ

ನಿಗಮ-ಮಂಡಳಿ ಹುದ್ದೆ, ನ.28ಕ್ಕೆ ಸುರ್ಜೇವಾಲ ಜತೆ ಸಭೆ: ಡಿಕೆಶಿ

November 23, 2023
ಜಿಲ್ಲೆ

ಹೆಚ್ಚಿನ ಬಡ್ಡಿ ನೀಡುವುದಾಗಿ ನಂಬಿಸಿ ಬಡವರಿಂದ ಲಕ್ಷಾಂತರ ಹಣ ಪಡೆದು ವಂಚಿಸಿದ ಕಂಪನಿ

December 9, 2023
ಜಿಲ್ಲೆಮುಖಪುಟಮೈಸೂರು ನಗರರಾಜಕೀಯ

ಮೈಸೂರು ಬಿಜೆಪಿ ನೂತನ ಜಿಲ್ಲಾಧ್ಯಕ್ಷರಿಗೆ ಸನ್ಮಾನಿಸಿ ಅಭಿನಂದಿಸಿದ ಬಿಜೆಪಿ ಮುಖಂಡರು

June 14, 2025
ಜಿಲ್ಲೆ

ವಿಪಕ್ಷ ನಾಯಕ ಆರ್.ಅಶೋಕ್ ಚಿತ್ರದುರ್ಗ, ತುಮಕೂರು ಜಿಲ್ಲಾ ಪ್ರವಾಸ

November 25, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?