PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮುಸ್ಲಿಂ ಮಹಿಳೆಯರ ಕುರಿತ ‘ಹಮಾರೆ ಬಾರಾ’ ಸಿನಿಮಾ ಕರ್ನಾಟಕದಲ್ಲಿ ನಿಷೇಧ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮುಸ್ಲಿಂ ಮಹಿಳೆಯರ ಕುರಿತ ‘ಹಮಾರೆ ಬಾರಾ’ ಸಿನಿಮಾ ಕರ್ನಾಟಕದಲ್ಲಿ ನಿಷೇಧ
ಮುಖಪುಟಸಿನಿಮಾ

ಮುಸ್ಲಿಂ ಮಹಿಳೆಯರ ಕುರಿತ ‘ಹಮಾರೆ ಬಾರಾ’ ಸಿನಿಮಾ ಕರ್ನಾಟಕದಲ್ಲಿ ನಿಷೇಧ

Prathinidhi News
Last updated: June 7, 2024 1:42 pm
Prathinidhi News
Published June 7, 2024
Share
SHARE

ಮುಸ್ಲಿಂ ಮಹಿಳೆಯರ ಕುರಿತಾದ ಸಿನಿಮಾ ‘ಹಮಾರೆ ಬಾರಾ’ ಬಿಡುಗಡೆಗೆ ಕರ್ನಾಟಕ ಸರ್ಕಾರ ನಿಷೇಧ ವಿಧಿಸಿದೆ. ಕಮಲ್ ಚಂದ್ರಾ ನಿರ್ದೇಶನ ಮಾಡಿ ಅನ್ನು ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಹಮಾರೆ ಬಾರಾ’ ಸಿನಿಮಾವು ಮುಸ್ಲಿಂ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯದ ಕತೆಯನ್ನು ಒಳಗೊಂಡಿದೆ. ಸಿನಿಮಾದ ಬಿಡುಗಡೆಗೆ ಈಗಾಗಲೇ ಬಾಂಬೆ ಹೈಕೋರ್ಟ್ ತಡೆ ನೀಡಿದೆ ಅಷ್ಟರಲ್ಲಾಗಲೆ ಕರ್ನಾಟಕ ಸರ್ಕಾರ ಸಿನಿಮಾದ ಬಿಡುಗಡೆ ಮತ್ತು ಸ್ಕ್ರೀಮ್ ಮೇಲೆ ನಿಷೇಧ ಹೇರಿದೆ.

ಕರ್ನಾಟಕ ಸಿನಿಮಾ ರೆಗ್ಯುಲೇಷನ್ ಕಾಯ್ದೆ 1964, ಸೆಕ್ಷನ್ 15 (1) ಮತ್ತು 15(5) ರ ಅನ್ವಯ ಈ ಸಿನಿಮಾದ ಪ್ರದರ್ಶನವನ್ನು ರಾಜ್ಯದಲ್ಲಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಸಿನಿಮಾದ ಪ್ರದರ್ಶನದಿಂದ ರಾಜ್ಯದಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆ ಆಗುತ್ತದೆ ಎಂಬ ಕಾರಣ ನೀಡಿ ಸಿನಿಮಾವನ್ನು ಬ್ಯಾನ್ ಮಾಡಲಾಗಿದೆ. ಅಲ್ಲದೆ ಕೆಲವು ಅಲ್ಪಸಂಖ್ಯಾತ ಸಂಘಗಳು ಸಿನಿಮಾವನ್ನು ಬಿಡುಗಡೆ ಮಾಡದಿರಲು ಮನವಿ ಮಾಡಿವೆ ಎಂದು ಸಹ ಹೇಳಲಾಗಿದೆ.

ಸಿನಿಮಾದ ಟ್ರೈಕರ್​ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿತ್ತು. ಟ್ರೈಲರ್ ಆಧರಿಸಿ ಅಜರ್ ಎಂಬುವರು ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಜೂನ್ 14 ರವರೆಗೆ ಬಿಡುಗಡೆ ನಿಷೇಧಿಸಿದ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ. ಸಿನಿಮಾದಲ್ಲಿ ಇಸ್ಲಾಂ ಧರ್ಮದ ಬಗ್ಗೆ ಋಣಾತ್ಮಕ ಸಂಭಾಷಣೆಗಳಿವೆ, ಇಸ್ಲಾಂ ಧರ್ಮವನ್ನು ಕೆಟ್ಟ ರೀತಿಯಾಗಿ ಬಿಂಬಿಸಲಾಗಿದೆ ಎಂಬುದು ಅರ್ಜಿದಾರರ ಆರೋಪವಾಗಿದೆ. ಸಿಬಿಎಫ್​ಸಿ ಈಗಾಗಲೇ ಕೆಲವು ಸಂಭಾಷಣೆಗಳಿಗೆ ಕಟ್​ಗಳನ್ನು ಸೂಚಿಸಿ ಸಿನಿಮಾಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದ್ದು, ಬಿಡುಗಡೆಗೆ ತಕಾರರು ಸಲ್ಲಿಸಿಲ್ಲ. ನ್ಯಾಯಾಲಯದಲ್ಲಿಯೂ ಸಹ ಈ ಬಗ್ಗೆ ಸಿಬಿಎಫ್​ಸಿ ಹೇಳಿಕೆ ದಾಖಲಿಸಿದೆ.

ಇನ್ನು ಸಿನಿಮಾ ತಂಡವು ತಮ್ಮ ಸಿನಿಮಾದಲ್ಲಿ ಯಾವುದೇ ಧರ್ಮವನ್ನು ಕೆಟ್ಟ ರೀತಿಯಲ್ಲಿ ಬಿಂಬಿಸಿಲ್ಲ ಎನ್ನುತ್ತಿದೆ. ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಅನ್ನು ಕಪೂರ್ , ‘ದಯವಿಟ್ಟು ಸಿನಿಮಾವನ್ನು ಒಮ್ಮೆ ನೋಡಿ ಆ ನಂತರ ನಿಮ್ಮ ಅಭಿಪ್ರಾಯ ರೂಪಿಸಿಕೊಳ್ಳಿ. ಇದು ಎಲ್ಲರೂ ನೋಡಬೇಕಾದ ಸಿನಿಮಾ’ ಎಂದಿದ್ದಾರೆ. ಅಲ್ಲದೆ ಈ ಸಿನಿಮಾ ಮಾಡಿದ ಚಿತ್ರತಂಡಕ್ಕೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಚಿತ್ರತಂಡ ವರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

- ಜಾಹೀರಾತು -

ರಾಜ್ಯ ಸರ್ಕಾರಗಳು ಇತ್ತೀಚೆಗಿನ ಕೆಲವು ವರ್ಷಗಳಲ್ಲಿ ಕೆಲವು ಸಿನಿಮಾಗಳನ್ನು ಬ್ಯಾನ್ ಮಾಡಿವೆ, ಕೆಲವಕ್ಕೆ ತೆರಿಗೆ ವಿನಾಯಿತಿ ನೀಡಿವೆ. ಆದರೆ ರಾಜ್ಯ ಸರ್ಕಾರ ನಿಷೇಧವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ಸಿನಿಮಾ ತಂಡಗಳಿಗೆ ಜಯ ದೊರೆತಿದೆ. ಒಂದೊಮ್ಮೆ ಕರ್ನಾಟಕ ರಾಜ್ಯ ಸರ್ಕಾರದ ನಿಷೇಧದ ವಿರುದ್ಧ ಚಿತ್ರತಂಡ ನ್ಯಾಯಾಲಯಕ್ಕೆ ಹೋದರೆ ಗೆಲುವು ಸಿಗುವ ಸಾಧ್ಯತೆ ಇದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮುಂಗಾರು ಮಳೆಯ ಅಬ್ಬರ : 101 ಅಡಿ ದಾಟಿದ ಕೃಷ್ಣರಾಜಸಾಗರ ಅಣೆಕಟ್ಟಿನ ನೀರಿನ ಮಟ್ಟ..!

May 31, 2025
ಚುನಾವಣೆನವದೆಹಲಿಮುಖಪುಟರಾಜಕೀಯ

ಏಪ್ರಿಲ್ 26 ರಂದು 13 ರಾಜ್ಯಗಳ 89 ಲೋಕಸಭಾ ಸ್ಥಾನಗಳಿಗೆ ಎರಡನೇ ಹಂತದ ಚುನಾವಣೆ

March 28, 2024
ಬೆಂಗಳೂರುಮುಖಪುಟರಾಜಕೀಯ

ಪ್ರಜ್ವಲ್ ರೇವಣ್ಣ ನಾಳೆ ಬೆಂಗಳೂರಿಗೆ ಬರುವುದು ಅನುಮಾನ? ಮತ್ತೊಂದು ಟಿಕೆಟ್ ಬುಕ್​

May 2, 2024
ಮುಖಪುಟರಾಜಕೀಯ

ಸಿಎಂ ಪತ್ನಿ ವಿರುದ್ಧ ಆಧಾರ ರಹಿತ ಆರೋಪ ಮಾಡಿದವರಿಗೆ ತಕ್ಕ ಶಾಸ್ತಿ ಆಗಬೇಕಿದೆ : ಎಂಎಲ್ಸಿ., ಡಾ. ಡಿ ತಿಮ್ಮಯ್ಯ

July 22, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?