ದಾವಣಗೆರೆ : ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಹೊನ್ನಾಳಿ ಅಸೆಂಬ್ಲಿ ಕ್ಷೇತ್ರದಿಂದ ಸೋತಾಗಿನಿಂದಲೂ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟಿಗಾಗಿ ಪೈಪೋಟಿ ನಡೆಸುತ್ತಿದ್ದ ಎಂ.ಪಿ.ರೇಣುಕಾಚಾರ್ಯ ಅವರಿಗೆ ನಿರಾಸೆಯಾಗಿದೆ. ಬಿಜೆಪಿ ಅಭ್ಯರ್ಥಿ ಪಟ್ಟಿ ಘೋಷಣೆಯಾದ ಕೂಡಲೇ ದೊಡ್ಡ ಮಟ್ಟದಲ್ಲಿ ಅಸಮಾಧಾನವನ್ನು ರೇಣುಕಾಚಾರ್ಯ ಹೊರಹಾಕಿದ್ದಾರೆ. ದಾವಣಗೆರೆ ಟಿಕೆಟಿಗಾಗಿ ಹಾಲೀ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತೆ ಪ್ರಯತ್ನಿಸುತ್ತಿದ್ದರು, ಆದರೆ, ಟಿಕೆಟ್ ಕೈತಪ್ಪುವ ಸಾಧ್ಯತೆಯನ್ನು ಅರಿತ ಸಿದ್ದೇಶ್ವರ ತಮ್ಮ ಸಹೋದರನಿಗೆ ಟಿಕೆಟ್ ಪ್ರಯತ್ನಿಸುತ್ತಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್ ನೀಡಿತ್ತು. ಟಿಕೆಟಿಗಾಗಿ ಇನ್ನಿಲ್ಲದ ಪ್ರಯತ್ನ ನಡೆಸಿದ್ದ ರೇಣುಕಾಚಾರ್ಯ ಟಿಕೆಟ್ ಕೈತಪ್ಪಿದ್ದರಿಂದ, ಮಾಧ್ಯಮಗಳ ಮುಂದೆ ಅಸಮಾಧಾನ ಹೊರಹಾಕಿದ್ದರು. ಇದರಿಂದ ಬಿಜೆಪಿ ತೀವ್ರ ಮುಜುಗರಕ್ಕೀಡಾಗಿದ್ದರಿಂದ, ದೆಹಲಿಯಿಂದಲೇ ಯಡಿಯೂರಪ್ಪ ಅವರಿಗೆ ವಾರ್ನಿಂಗ್ ನೀಡಿದ್ದರು. ಈಗ, ಅಜ್ಞಾತ ಸ್ಥಳದಲ್ಲಿ ಸಭೆ ಸೇರಿ ಮುಂದಿನ ನಿರ್ಧಾರಕ್ಕೆ ಬರುವ ತೀರ್ಮಾನವನ್ನು ರೇಣುಕಾಚಾರ್ಯ ಮಾಡಿದ್ದಾರೆ.
![](https://www.prathinidhi.net/wp-content/uploads/2024/03/pro.webp)