PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬಿಜೆಪಿಯಲ್ಲಿದ್ದ ಮುನಿಸು ಶಮನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಬಿಜೆಪಿಯಲ್ಲಿದ್ದ ಮುನಿಸು ಶಮನ
ಸಮಗ್ರ

ಬಿಜೆಪಿಯಲ್ಲಿದ್ದ ಮುನಿಸು ಶಮನ

ಪ್ರತಿನಿಧಿ
Last updated: April 4, 2024 4:38 pm
ಪ್ರತಿನಿಧಿ
Published April 4, 2024
Share
SHARE

ಸುಧಾಕರ್ ಬೆಂಬಲಕ್ಕೆ ನಿಂತ ಯಲಹಂಕ ಶಾಸಕ ವಿಶ್ವನಾಥ್

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಬಗ್ಗೆ ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರಿಗಿದ್ದ ಮುನಿಸು ಶಮನವಾಗಿದೆ‌‌‌.

ಹಿರಿಯ ನಾಯಕರ ಸಮ್ಮುಖದಲ್ಲಿ ವಿವಾದ ಅಂತ್ಯಗೊಂಡಿದ್ದು, ಈ ಒಳಬೇಗುದಿಯನ್ನೇ ನೆಚ್ಚಿಕೊಂಡಿದ್ದ ಕಾಂಗ್ರೆಸ್ ನಾಯಕರಿಗೆ ಮಹಾ ಶಾಕ್ ಆಗಿದೆ. ಶಾಸಕ ಎಸ್.ಆರ್.ವಿಶ್ವನಾಥ್ ಈವರೆಗೆ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ಗೆ ಬೆಂಬಲಿಸುವುದಿಲ್ಲ ಎಂದು ಬಹಿರಂಗವಾಗಿ ತಿಳಿಸಿ ವಿರೋಧ ವ್ಯಕ್ತಪಡಿಸಿದ್ದರು.

ತಮ್ಮ ಪುತ್ರನಿಗೆ ಟಿಕೆಟ್ ನೀಡದ ಕಾರಣ ಸಹಜವಾಗಿಯೇ ಶಾಸಕ ವಿಶ್ವನಾಥ್ ಮುನಿಸಿಕೊಂಡಿದ್ದರು. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ ಬಳಿಕ ಪರಿಸ್ಥಿತಿ ಬದಲಾಗಿದೆ. ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ಅವರ ಸಮ್ಮುಖದಲ್ಲಿ ಸಂಧಾನ ಸಭೆ ನಡೆದು, ಕೊನೆಗೆ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಡಾ.ಕೆ.ಸುಧಾಕರ್‌ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮುಂದಿದ್ದ ದೊಡ್ಡ ತಡೆಯೊಂದು ನಿವಾರಣೆಯಾಗಿದೆ.

- ಜಾಹೀರಾತು -

ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಬಿಜೆಪಿಯ ಈ ಸಣ್ಣ ಒಡಕನ್ನೇ ತಮ್ಮ ಲಾಭವಾಗಿಸಿಕೊಂಡು ಮತಗಳಾಗಿ ಪರಿವರ್ತಿಸಿಕೊಳ್ಳಲು ತಂತ್ರ ಹೂಡಿದ್ದರು. ಬಿಜೆಪಿ ನಾಯಕರ ನಡುವಿನ ಸಮಸ್ಯೆ ಇನ್ನಷ್ಟು ಬೆಳೆಯಲಿದ್ದು, ಇದರಿಂದ ಕಾಂಗ್ರೆಸ್‌ಗೆ ಒಂದಷ್ಟು ಮತಗಳು ಬರಬಹುದೆಂದು ಕಾಂಗ್ರೆಸ್ ನಾಯಕರು ಲೆಕ್ಕಾಚಾರ ಹಾಕಿದ್ದರು. ಆದರೆ ಈಗ ಕಾಂಗ್ರೆಸ್ ನಾಯಕರಿಗೆ ಮುಖಭಂಗವಾಗಿ ಎಲ್ಲ ನಿರೀಕ್ಷೆ ಹುಸಿಯಾಗಿದೆ.

ಡಾ.ಕೆ.ಸುಧಾಕರ್‌ಗೆ ಆನೆ ಬಲ: ಈ ದಿಢೀರ್ ಬದಲಾವಣೆಯಿಂದಾಗಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರಿಗೆ ಆನೆ ಬಲ ಬಂದಂತಾಗಿದೆ. ಈಗಾಗಲೇ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಉತ್ತಮ ಹೊಂದಾಣಿಕೆ ಬೆಳೆದಿದ್ದು, ಡಾ.ಕೆ.ಸುಧಾಕರ್‌ ನಿರಂತರವಾಗಿ ಸಮನ್ವಯ ಸಭೆಗಳನ್ನು ನಡೆಸಿ ಎಲ್ಲರ ವಿಶ್ವಾಸ ಗಳಿಸಿದ್ದಾರೆ. ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ಸೇರಿದಂತೆ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಮುಖಂಡರ ಬೆಂಬಲ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈಗ ಯಲಹಂಕ ಕ್ಷೇತ್ರದಲ್ಲಿ ಸ್ವಪಕ್ಷೀಯರ ಸಂಪೂರ್ಣ ಬೆಂಬಲ ದೊರೆತಿದೆ. ಈ ಮೂಲಕ ಡಾ‌.ಕೆ.ಸುಧಾಕರ್ ಅವರಿಗೆ ವಿಜಯಲಕ್ಷ್ಮಿ ಒಲಿಯುವ ಹಾದಿ ಇನ್ನಷ್ಟು ಸುಗಮವಾಗಿದೆ. ಈ ಬಾರಿಯೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಬಿಜೆಪಿ ತೆಕ್ಕೆಗೆ ಬೀಳಲಿದೆ ಎಂಬ ಸಂದೇಶ ಸ್ಪಷ್ಟವಾಗಿ ರವಾನೆಯಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಮೈಸೂರು ನಗರಸಮಗ್ರ

ಇನ್ಫೋಸಿಸ್ ಸಂಸ್ಥಾಪಕ ಎನ್ .ಆರ್ ನಾರಾಯಣಮೂರ್ತಿ ಹೇಳಿಕೆಗೆ ಸಚಿವರ ವಾಗ್ದಾಳಿ

December 3, 2023
ಸಮಗ್ರ

ಎಂ.ಮಲ್ಲೇಶ್ ಬಾಬು ನಾಮಪತ್ರ ಸಲ್ಲಿಕೆ

April 4, 2024
ಸಮಗ್ರ

ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ಕೋರ್ಸ್

May 9, 2024
ಸಮಗ್ರ

ದೇಶದಲ್ಲಿ 20 ಕೊರೊನಾ ಜೆಎನ್​1 ಪ್ರಕರಣ, ಕರ್ನಾಟಕದಲ್ಲಿ ಒಂದು ಸಾವು

December 20, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?