PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ: ಪ್ರಿಯಾಂಕಾ ಗಾಂಧಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ: ಪ್ರಿಯಾಂಕಾ ಗಾಂಧಿ
ಚುನಾವಣೆಬೆಂಗಳೂರುಮುಖಪುಟರಾಜಕೀಯ

ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ: ಪ್ರಿಯಾಂಕಾ ಗಾಂಧಿ

Prathinidhi News
Last updated: April 24, 2024 9:41 am
Prathinidhi News
Published April 24, 2024
Share
SHARE

ಬೆಂಗಳೂರು: ಚುನಾವಣಾ ಪ್ರಚಾರದಲ್ಲಿ 2 ದಿನದಿಂದ ಎಂತೆಂಥಾ ಮಾತು ಬರುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾಂಗಲ್ಯ ಕಿತ್ತುಕೊಳ್ಳಲಿದೆ ಅಂತಿದ್ದಾರೆ. ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ನಗರ HSR ಲೇಔಟ್​ನಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸೌಮ್ಯಾರೆಡ್ಡಿ ಪರ ಪ್ರಚಾರ ವೇಳೆ ಮಾತನಾಡಿದ ಅವರು, ಮಹಿಳೆಯರ ಮನಸಿನಲ್ಲಿರುವ ಸೇವಾಭಾವನೆ ಬಿಜೆಪಿಗೆ ಅರ್ಥವಾಗಲ್ಲ. ಪ್ರಧಾನಿ ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

Contents
ಬಿಜೆಪಿಯವರು ಹಿಂದೂ, ಮುಸ್ಲಿಂರ ಮಧ್ಯೆ ಕಿತ್ತಾಟ ತಂದಿಡ್ತಾರೆಮೋದಿ ಸೂಪರ್​ಮ್ಯಾನ್​ ಅಲ್ಲ, ಬೆಲೆ ಏರಿಕೆ ಮ್ಯಾನ್

ಬಿಜೆಪಿಯವರು ಯಾವುದೇ ಅಭಿವೃದ್ಧಿ ಕಾರ್ಯದ ಬಗ್ಗೆ ಮಾತನಾಡಲ್ಲ. ಬಿಜೆಪಿಯವರು ನರೇಂದ್ರ ಮೋದಿ ಇಟ್ಟುಕೊಂಡು ಮತ ಕೇಳುತ್ತಿದ್ದಾರೆ. ಬಿಜೆಪಿ ಭಾವನಾತ್ಮಕ ವಿಚಾರ ಮುಂದಿಟ್ಟು ರಾಜಕೀಯ ಮಾಡ್ತಿದ್ದಾರೆ. ಅವರಿಗೆ ಮಹಿಳೆಯರ ಕಷ್ಟ ಅರ್ಥವಾಗಲ್ಲ. ರೈತರು ಸಾಲ ಹೆಚ್ಚಾದಾಗ ಮಹಿಳೆಯರು ಮಾಂಗಲ್ಯ ಅಡವಿಡುತ್ತಾರೆ. ಮನೆಯಲ್ಲಿ ಯಾರಿಗಾದರೂ ಕಷ್ಟ ಬಂದರೆ ಮಾಂಗಲ್ಯ ಅಡವಿಡುತ್ತಾರೆ. ಅದರ ಬೆಲೆ ಅವರಿಗೆ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಬಿಜೆಪಿಯವರು ಹಿಂದೂ, ಮುಸ್ಲಿಂರ ಮಧ್ಯೆ ಕಿತ್ತಾಟ ತಂದಿಡ್ತಾರೆ

ರೈತರ ವಿರೋಧಿ ಕೃಷಿ ಕಾಯ್ದೆ ವಿರುದ್ಧ ವರ್ಷಾನುಗಟ್ಟಲೆ ಹೋರಾಟ ಮಾಡಿದ್ದಾರೆ. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿದ್ದ 609 ರೈತರು ಮೃತಪಟ್ಟರು. ಆಗ ಪ್ರಧಾನಿ ಮೋದಿಗೆ ಮಾಂಗಲ್ಯ ನೆನಪಾಗಲಿಲ್ವಾ? ಮಣಿಪುರದಲ್ಲಿ ಹೆಣ್ಣನ್ನು ಬೆತ್ತಲೆಮಾಡಿ ಮೆರವಣಿಗೆ ಮಾಡಿದ್ದರು ಆ ಸಂದರ್ಭದಲ್ಲಿ ಮೋದಿ ಎಲ್ಲಿದ್ರು? ಬಾಯಿಬಿಡಲಿಲ್ವಲ್ಲಾ? ದೇಶದ ಬಗ್ಗೆ ಕಿಂಚಿಂತೂ ಕಾಳಜಿಯಿಲ್ಲದ ಮೋದಿಗೆ ನಾಚಿಕೆ ಆಗ್ಬೇಕು. ನಿಮಗೆ ಪರೋಪಕಾರ ಬೇಕಾ? ಅಹಂಕಾರ ಬೇಕಾ? ಸುಳ್ಳು ಹೇಳುವವರು ಬೇಕಾ? ಸತ್ಯ ಹೇಳುವವರು ಬೇಕಾ? ನೈಜತೆ ಬೇಕಾ ನಾಟಕೀಯತೆ ಬೇಕಾ ನೀವೇ ತೀರ್ಮಾನ ಮಾಡಿ. ಬಿಜೆಪಿಯವರು ಕೇವಲ ಹಿಂದೂ, ಮುಸ್ಲಿಂ ಎಂದು ಕಿತ್ತಾಟ ತಂದಿಡ್ತಾರೆ ಎಂದು ಹಿರಿಹಾಯ್ದಿದ್ದಾರೆ.

ಮೋದಿ ಸೂಪರ್​ಮ್ಯಾನ್​ ಅಲ್ಲ, ಬೆಲೆ ಏರಿಕೆ ಮ್ಯಾನ್

ದೇಶದಲ್ಲಿ ಇಂದು ಯಾವ ಪರಿಸ್ಥಿತಿ ಇದೆ ಎಂದು ನಿಮಗೆ ಗೊತ್ತು. ಬಹುದೊಡ್ಡ ಸಮಸ್ಯೆ ನಿರುದ್ಯೋಗ ಹಾಗೂ ಬೆಲೆ ಏರಿಕೆ. ಬೆಲೆ ಏರಿಕೆ ಆದಾಗ ಮಹಿಳೆಯರ ಮೇಲೆ ಕಷ್ಟ ಬೀಳುತ್ತೆ. ಡೀಸೆಲ್, ಪೆಟ್ರೋಲ್, ಗ್ಯಾಸ್​ ಸಿಲಿಂಡರ್ ದರ ಹೆಚ್ಚಾಗಿದೆ. ಮೋದಿ 10 ವರ್ಷದ ಆಡಳಿತದಲ್ಲಿ ನಿಮಗೇನು ಸಿಕ್ಕಿದೆ. ನಿತ್ಯ ಟಿವಿಯಲ್ಲಿ ಸೂಪರ್​ಮ್ಯಾನ್ ಇಮೇಜ್ ತೋರಿಸ್ತಾರೆ. ಮೋದಿ ಸೂಪರ್​ಮ್ಯಾನ್​ ಅಲ್ಲ, ಬೆಲೆ ಏರಿಕೆ ಮ್ಯಾನ್.​​ ನಿಮ್ಮ ಜೀವನದಲ್ಲಿ ಯಾವುದೇ ಬದಲಾವಣೆಯೇ ಆಗಿಲ್ಲ ಎಂದು ಹೇಳಿದ್ದಾರೆ.

- ಜಾಹೀರಾತು -

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಜಾರಿ ಮಾಡಲಾಗಿದೆ. ಪ್ರತಿ ತಿಂಗಳು ಮಹಿಳೆಯರ ಅಕೌಂಟ್​ಗೆ 2,000 ರೂ. ಹೋಗ್ತಿದೆ. ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಜಾರಿಯಾಗ್ತಿದೆ. ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿಯಿಂದ ಪ್ರತಿವರ್ಗಕ್ಕೂ ಅನ್ಯಾಯವಾಗಿದೆ ಎಂದಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಮುಖಪುಟ

ಮಾದೇಶ್ವರ ಬೆಟ್ಟದ ಹುಂಡಿಯಲ್ಲಿ ಬರೋಬ್ಬರಿ 2 ಕೋಟಿ 58 ಲಕ್ಷ ಕಾಣಿಕೆ ಸಂಗ್ರಹ

May 30, 2024
ಮುಖಪುಟಹಾಸನ

ಅರ್ಜುನ ಆನೆ ಹೆಸರಿನಲ್ಲಿ ಲಕ್ಷಾಂತರ ಹಣ ಸಂಗ್ರಹಿಸಿದ ಖದೀಮ: ನಟ ದರ್ಶನಗೂ ಮೋಸ?

May 27, 2024
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಚಿನ್ನದ ಸರಕ್ಕಾಗಿ ಸ್ನೇಹಿತೆಯನ್ನೇ ಕೊಲೆ ಮಾಡಿದ ಮಹಿಳೆ

March 13, 2025
ಮುಖಪುಟಮೈಸೂರು ನಗರರಾಜಕೀಯ

AIISH ಸಂಸ್ಥೆಗೆ ವರುಣಾ ಕ್ಷೇತ್ರದಲ್ಲಿ 10 ಎಕರೆ ಜಾಗ ಒದಗಿಸಿದ್ದೇವೆ : ಸಿ.ಎಂ ಘೋಷಣೆ

September 2, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?