PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಪತ್ನಿಯ ಕೊಲೆಗೆ ಸುಪಾರಿ ನೀಡಿದ್ದ ಪತಿ ಅಂದರ್ – ಪಾನಿಪುರಿ ವ್ಯಾಪಾರಿಯ ಭೀಕರ ಸಂಚು ಬಯಲು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಮೈಸೂರು: ಪತ್ನಿಯ ಕೊಲೆಗೆ ಸುಪಾರಿ ನೀಡಿದ್ದ ಪತಿ ಅಂದರ್ – ಪಾನಿಪುರಿ ವ್ಯಾಪಾರಿಯ ಭೀಕರ ಸಂಚು ಬಯಲು
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಪತ್ನಿಯ ಕೊಲೆಗೆ ಸುಪಾರಿ ನೀಡಿದ್ದ ಪತಿ ಅಂದರ್ – ಪಾನಿಪುರಿ ವ್ಯಾಪಾರಿಯ ಭೀಕರ ಸಂಚು ಬಯಲು

Prathinidhi News
Last updated: December 19, 2025 12:55 pm
Prathinidhi News
Published December 19, 2025
Share
SHARE

ಮೈಸೂರು, ಡಿಸೆಂಬರ್‌ 19, 2025 : ಮೈಸೂರಿನ ಬಿಎಂಶ್ರೀ ನಗರದಲ್ಲಿ ಪತ್ನಿಯನ್ನೇ ಕೊಲ್ಲಲು ಪತಿ ಸುಪಾರಿ ನೀಡಿದ್ದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಪತಿ ಮಹೇಶ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್, ತನ್ನ ಪತ್ನಿ ನಾಗರತ್ನ ಅವರ ನಡವಳಿಕೆಯಿಂದ ತೀವ್ರ ಬೇಸತ್ತು ಈ ಭೀಕರ ಕೃತ್ಯಕ್ಕೆ ಸಂಚು ರೂಪಿಸಿದ್ದನು. ಪತ್ನಿಯು ಪತಿಯ ಸಂಪಾದನೆಯ ಹಣವನ್ನೆಲ್ಲಾ ಕಿತ್ತುಕೊಂಡು ಅದನ್ನು ಬಡ್ಡಿಗೆ ನೀಡುತ್ತಿದ್ದಳು ಎನ್ನಲಾಗಿದ್ದು, ಗಂಡನಿಗೆ ಕನಿಷ್ಠ ಮರ್ಯಾದೆ ನೀಡದೆ ಆರ್ಥಿಕವಾಗಿ ವಂಚಿಸುತ್ತಿದ್ದಳು ಎಂಬ ದ್ವೇಷವೇ ಈ ಕೊಲೆ ಯತ್ನಕ್ಕೆ ಪ್ರಮುಖ ಕಾರಣವಾಗಿದೆ.

ತನ್ನ ಪತ್ನಿಯನ್ನು ಹತ್ಯೆ ಮಾಡಲು ನಿರ್ಧರಿಸಿದ ಮಹೇಶ್, ವಿರಾಜಪೇಟೆ ಮೂಲದ ಭಾಸ್ಕರ್ ಮತ್ತು ಅಭಿಷೇಕ್ ಎಂಬುವರಿಗೆ ಸುಪಾರಿ ನೀಡಿದ್ದನು. ಮನೆಯ ಗ್ಯಾಸ್ ಪೈಪ್ ಕತ್ತರಿಸಿ, ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಮೂಲಕ ಅದನ್ನು ಅಪಘಾತದಂತೆ ಬಿಂಬಿಸುವುದು ಇವರ ಯೋಜನೆಯಾಗಿತ್ತು. ಅದರಂತೆ ತಡರಾತ್ರಿ ಮನೆಗೆ ನುಗ್ಗಿದ ಸುಪಾರಿ ಹಂತಕರು ನಾಗರತ್ನ ಅವರ ಮೇಲೆ ಹಲ್ಲೆ ನಡೆಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಈ ವೇಳೆ ಮನೆಯ ವಸ್ತುಗಳು ಹೊತ್ತಿ ಉರಿಯಲಾರಂಭಿಸಿದವು.

ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಿದ್ದಂತೆ ಗಾಬರಿಗೊಂಡ ಆರೋಪಿಗಳು ಮನೆಯಿಂದ ಹೊರಕ್ಕೆ ಓಡಿಹೋಗಿದ್ದಾರೆ. ಈ ಸಂದರ್ಭದಲ್ಲಿ ಗೇಟ್ ಅನ್ನು ಜೋರಾಗಿ ತಳ್ಳಿದ ಶಬ್ದ ಕೇಳಿ ಎಚ್ಚರಗೊಂಡ ಮನೆ ಮಾಲೀಕರು ಕೂಡಲೇ ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ನಾಗರತ್ನ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಮೇಟಗಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದಾಗ, ಸ್ವತಃ ಪತಿಯೇ ಈ ಕೃತ್ಯದ ಹಿಂದಿರುವ ಆಘಾತಕಾರಿ ಸತ್ಯ ಬಯಲಾಗಿದೆ. ಆರೋಪಿಗಳಾದ ಮಹೇಶ್, ಭಾಸ್ಕರ್ ಮತ್ತು ಅಭಿಷೇಕ್ ಅವರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಕೌಟುಂಬಿಕ ಕಲಹ ಮತ್ತು ಹಣಕಾಸಿನ ವಿಚಾರವಾಗಿ ನಡೆದ ಈ ಕೊಲೆ ಯತ್ನದ ಪ್ರಕರಣ ಸದ್ಯ ಮೈಸೂರಿನಲ್ಲಿ ಭಾರಿ ಸಂಚಲನ ಮೂಡಿಸಿದೆ.

- ಜಾಹೀರಾತು -

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟರಾಜಕೀಯ

ರಾಜ್ಯದಲ್ಲಿ ನಿಜವಾಗಿ ಏನೂ ಅಭಿವೃದ್ಧಿ ಆಗಿಲ್ಲ, ಕಾಂಗ್ರೆಸ್ಸಿನ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ : ಶಾಸಕ ಬಿ.ವೈ.ವಿಜಯೇಂದ್ರ

January 14, 2026
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರಾಗಿಂಗ್‌ : ವಿದ್ಯಾರ್ಥಿಗೆ ವೃಷಣ ಹಾನಿ- ಶಾಲಾ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ !

November 10, 2025
ಮುಖಪುಟಮೈಸೂರು ನಗರರಾಜಕೀಯ

ಗ್ರೇಟರ್ ಮೈಸೂರು ಯೋಜನೆಗೆ ಸಂಪುಟ ಅಸ್ತು: “ನನ್ನ ಬಹಳ ವರ್ಷಗಳ ಕನಸು ಈಡೇರಿದೆ” – ಜಿ.ಟಿ. ದೇವೇಗೌಡ ಹರ್ಷ!

December 3, 2025
ಮುಖಪುಟಮೈಸೂರು ನಗರ

ಮೈಸೂರು: 2025 ಸಿಹಿ ಪದಾರ್ಥಗಳ ನೈವೇದ್ಯ, ವಿಶ್ವದಾಖಲೆಗೆ ಭೈರವ ಜನ್ಮಾಷ್ಠಮಿ ಕಾರ್ಯಕ್ರಮ!

November 12, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?