PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ಕೆರೆ ಒತ್ತುವರಿ ತೆರವು: ಶಾಸಕ ಶ್ರೀವತ್ಸ ಎಚ್ಚರಿಕೆ ಬೆನ್ನಲ್ಲೇ ತಾಲೂಕು ಆಡಳಿತದ ಭರ್ಜರಿ ಕಾರ್ಯಾಚರಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ಕೆರೆ ಒತ್ತುವರಿ ತೆರವು: ಶಾಸಕ ಶ್ರೀವತ್ಸ ಎಚ್ಚರಿಕೆ ಬೆನ್ನಲ್ಲೇ ತಾಲೂಕು ಆಡಳಿತದ ಭರ್ಜರಿ ಕಾರ್ಯಾಚರಣೆ
ಮುಖಪುಟಮೈಸೂರು ನಗರ

ಮೈಸೂರು ಕೆರೆ ಒತ್ತುವರಿ ತೆರವು: ಶಾಸಕ ಶ್ರೀವತ್ಸ ಎಚ್ಚರಿಕೆ ಬೆನ್ನಲ್ಲೇ ತಾಲೂಕು ಆಡಳಿತದ ಭರ್ಜರಿ ಕಾರ್ಯಾಚರಣೆ

Prathinidhi News
Last updated: February 14, 2026 3:55 pm
Prathinidhi News
Published February 14, 2026
Share
SHARE

ಮೈಸೂರು, ಫೆಬ್ರವರಿ 14, 2026 : ಸಾಂಸ್ಕೃತಿಕ ನಗರಿ ಮೈಸೂರಿನ ಪವಿತ್ರ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಕೆರೆ ಜಾಗವನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ, ಮೈಸೂರು ತಾಲ್ಲೂಕು ತಹಸೀಲ್ದಾರ್ ಮಹೇಶ್ ನೇತೃತ್ವದಲ್ಲಿ ಇಂದು ಕಾರ್ಯಾಚರಣೆ ನಡೆಯಿತು.

ಈ ಜಾಗ ನಮಗೆ ಸೇರಿದ್ದೆಂದು ಖಾಸಗಿಯವರು ಹಾಕಿಕೊಂಡಿದ್ದ ಎರಡು ನಾಮಫಲಕಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಯಿತು. ಇದರ ಬೆನ್ನಲ್ಲೇ ಒತ್ತುವರಿ ಜಾಗದ ಎರಡು ಕಡೆಗಳಲ್ಲಿ ನಿರ್ಮಿಸಲಾಗಿದ್ದ ಕಾಂಕ್ರೀಟ್ ಗೋಡೆಗಳನ್ನು ಕೂಡ ಭಾಗಶಃ ಧ್ವಂಸಗೊಳಿಸುವ ಮೂಲಕ ಆಡಳಿತ ಯಂತ್ರ ಒತ್ತುವರಿದಾರರಿಗೆ ಬಿಸಿ ಮುಟ್ಟಿಸಿದೆ.

ಈ ಪ್ರಕರಣದ ಕುರಿತು ಈ ಹಿಂದೆ ತೀವ್ರವಾಗಿ ಧ್ವನಿ ಎತ್ತಿದ್ದ ಶಾಸಕ ಶ್ರೀವತ್ಸ ಅವರು, ಶಿವರಾತ್ರಿ ಹಬ್ಬ ಮುಗಿಯುವುದರೊಳಗೆ ಒತ್ತುವರಿ ತೆರವು ಮಾಡಬೇಕು, ಇಲ್ಲದಿದ್ದರೆ ನಾವೇ ಖುದ್ದಾಗಿ ತೆರವು ಮಾಡುತ್ತೇವೆ ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದರು. ಶಾಸಕರ ಈ ಗಡುವು ಮುಕ್ತಾಯವಾಗುತ್ತಿದ್ದಂತೆಯೇ ಎಚ್ಚೆತ್ತ ತಹಸೀಲ್ದಾರ್ ಮಹೇಶ್ ಅವರು ಸ್ಥಳ ಪರಿಶೀಲನೆ ನಡೆಸಿ, ಗುರುತು ಮಾಡಲಾದ ಜಾಗಗಳಲ್ಲಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಿದರು.

- ಜಾಹೀರಾತು -

ಮಾಧ್ಯಮಗಳೊಂದಿಗೆ ಮಾತನಾಡಿದ ತಹಸೀಲ್ದಾರ್ ಮಹೇಶ್ ಅವರು, ಸರ್ಕಾರಿ ದಾಖಲೆಗಳ ಪ್ರಕಾರ ಸದರಿ ಸ್ಥಳದಲ್ಲಿ 6.10 ಎಕರೆ ಜಾಗವು ಕೆರೆ ಎಂದು ನಮೂದಾಗಿದೆ. ಇಂದು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಒತ್ತುವರಿ ಸಾಬೀತಾಗಿದೆ. ಈ ವೇಳೆ ಕಾಂಪೌಂಡ್ ನಿರ್ಮಿಸಿದ್ದವರು ತಾವೇ ಸ್ವತಃ ನಾಳೆಯೊಳಗೆ ತೆರವು ಮಾಡಿಕೊಳ್ಳುವುದಾಗಿ ಮನವಿ ಮಾಡಿದ್ದಾರೆ. ಒಂದು ವೇಳೆ ನಾಳೆಯೊಳಗೆ ತೆರವು ಮಾಡದಿದ್ದರೆ ಸೋಮವಾರ ಮತ್ತೆ ಕಾರ್ಯಾಚರಣೆ ನಡೆಸಿ ಸಂಪೂರ್ಣ ತೆರವು ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಅಲ್ಲದೆ, ಇಲ್ಲಿ ಕೇವಲ 3.17 ಎಕರೆ ಕೆರೆ ಜಾಗ ಮಾತ್ರ ಒತ್ತುವರಿಯಾಗಿಲ್ಲ, ಬದಲಾಗಿ ಅಕ್ರಮವಾಗಿ 10 ಮನೆಗಳನ್ನು ನಿರ್ಮಿಸಲಾಗಿದೆ ಮತ್ತು 20ಕ್ಕೂ ಹೆಚ್ಚು ನಿವೇಶನಗಳನ್ನು ಮಾಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ತಜ್ಞರೊಂದಿಗೆ ಚರ್ಚಿಸಿ, ಕೆರೆ ಒತ್ತುವರಿಯನ್ನು ಸಂಪೂರ್ಣವಾಗಿ ಮುಕ್ತಗೊಳಿಸಲು ಮುಂದಿನ ದಿನಗಳಲ್ಲಿ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರರಾಜಕೀಯಸನ್ನಿಧಾನ

ಹೊಸರಾಮನಹಳ್ಳಿಯಲ್ಲಿ ಶ್ರೀ ಈರಣ್ಣೇಶ್ವರ ಹಬ್ಬದ ಸಂಭ್ರಮ: ಶಾಸಕ ಜಿ.ಡಿ. ಹರೀಶ್ ಗೌಡರಿಂದ ಪೂಜೆ ಸಲ್ಲಿಕೆ

January 12, 2026
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಯೂಟ್ಯೂಬ್‌ ವೀಡಿಯೋ ನೋಡಿ ದರೋಡೆ ; ಪರಿಚಯಸ್ಥರ ಮನೆಯಲ್ಲಿ ಕೋಟಿ ಕೊಳ್ಳೆ ಹೊಡೆದ ಐನಾತಿಗಳು !

December 4, 2025
ಮುಖಪುಟಮೈಸೂರು ನಗರರಾಜಕೀಯ

ಸ್ನೇಹಿತನ ಪುತ್ರನ ವಿವಾಹದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ; ವಧು-ವರರಿಗೆ ಆಶೀರ್ವಾದ

November 3, 2025
ಕ್ರೈಂ ಸುದ್ದಿಗಳುನಂಜನಗೂಡುಮುಖಪುಟ

ಮನೆ ಬಾಡಿಗೆ ನೆಪದಲ್ಲಿ ವೃದ್ಧೆಗೆ ಮಾರಣಾಂತಿಕ ಹಲ್ಲೆ, ಚಿನ್ನಾಭರಣ ದೋಚಿ ಪರಾರಿ

November 4, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?