PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ; ಸಿದ್ದಲಿಂಗಪುರದಲ್ಲಿ ಬೆಳ್ಳಿಯ ನಾಗಾಭರಣ ದರ್ಶನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಅಂಕಣ > ಸನ್ನಿಧಾನ > ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ; ಸಿದ್ದಲಿಂಗಪುರದಲ್ಲಿ ಬೆಳ್ಳಿಯ ನಾಗಾಭರಣ ದರ್ಶನ
ಮುಖಪುಟಮೈಸೂರು ನಗರಸನ್ನಿಧಾನ

ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ; ಸಿದ್ದಲಿಂಗಪುರದಲ್ಲಿ ಬೆಳ್ಳಿಯ ನಾಗಾಭರಣ ದರ್ಶನ

Prathinidhi News
Last updated: November 26, 2025 1:25 pm
Prathinidhi News
Published November 26, 2025
Share
SHARE

ಮೈಸೂರು , ನವೆಂಬರ್‌ 26, 2025 : ನಾಡಿನೆಲ್ಲೆಡೆ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಗುತ್ತಿದ್ದು, ಮೈಸೂರಿನ ಹೊರವಲಯದ ಸಿದ್ದಲಿಂಗಪುರದಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಹಳೆ ಮೈಸೂರು ಭಾಗದಲ್ಲಿ ಇದನ್ನು ‘ಸುಬ್ರಹ್ಮಣ್ಯ ಷಷ್ಠಿ’ ಎಂದು ಆಚರಿಸಿದರೆ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ‘ಚಂಪಾ ಷಷ್ಠಿ’ ಎಂದು ಆಚರಿಸಲಾಗುತ್ತದೆ.

Contents
ಒಡೆಯರ್ ಕೊಡುಗೆ ‘ಬೆಳ್ಳಿಯ ನಾಗಾಭರಣ’ ಧಾರಣೆಸಾವಿರಾರು ಭಕ್ತರ ಆಗಮನ, ಪೊಲೀಸ್ ಬಂದೋಬಸ್ತ್

ಒಡೆಯರ್ ಕೊಡುಗೆ ‘ಬೆಳ್ಳಿಯ ನಾಗಾಭರಣ’ ಧಾರಣೆ

ಸಿದ್ದಲಿಂಗಪುರದ ಸುಬ್ರಹ್ಮಣ್ಯ ದೇಗುಲದಲ್ಲಿ ಷಷ್ಠಿ ಅಂಗವಾಗಿ ಬೆಳಗಿನ ಜಾವದಿಂದಲೇ‌ ವಿಶೇಷ ಪೂಜೆಗಳು ಆರಂಭಗೊಂಡವು. ಮೂಲ ದೇವರಿಗೆ ಮೈಸೂರಿನ ಅರಸರು ಕೊಡುಗೆಯಾಗಿ ನೀಡಿರುವ ಬೆಳ್ಳಿಯ ನಾಗಾಭರಣವನ್ನು ಧಾರಣೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ನಾಗಾಭರಣಕ್ಕೆ ವಿಶೇಷ ಇತಿಹಾಸವಿದೆ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಚಿಕ್ಕ ವಯಸ್ಸಿನಲ್ಲಿ ಅನಾರೋಗ್ಯ ಪೀಡಿತರಾಗಿದ್ದಾಗ, ಒಳಿತಾಗಲೆಂದು ಮೈಸೂರಿನ ಅರಮನೆಯಿಂದ ಹರಕೆ ಸಲ್ಲಿಕೆಯಾಗಿತ್ತು. ಒಡೆಯರ್ ಗುಣಮುಖರಾದ ಹಿನ್ನೆಲೆಯಲ್ಲಿ ಈ ಬೆಳ್ಳಿಯ ನಾಗಾಭರಣವನ್ನು ದೇಗುಲಕ್ಕೆ ಕೊಡುಗೆಯಾಗಿ ನೀಡಲಾಗಿತ್ತು. ಅಂದಿನಿಂದ ಪ್ರತಿವರ್ಷ ಷಷ್ಠಿಯ ದಿನದಂದು ಇದನ್ನು ಧಾರಣೆ ಮಾಡಿ ಪೂಜೆ ಸಲ್ಲಿಸಲಾಗುತ್ತದೆ.

ಸಾವಿರಾರು ಭಕ್ತರ ಆಗಮನ, ಪೊಲೀಸ್ ಬಂದೋಬಸ್ತ್

 

- ಜಾಹೀರಾತು -

ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆಯಲು ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಸೇರಿದಂತೆ ವಿವಿಧೆಡೆಗಳಿಂದ ಸಾವಿರಾರು ಸಂಖ್ಯೆಯ ಭಕ್ತರು ಸಿದ್ದಲಿಂಗಪುರಕ್ಕೆ ಆಗಮಿಸಿದ್ದರು. ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು.

ಯಾವುದೇ ನೂಕುನುಗ್ಗಲು ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ಪೊಲೀಸರು ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು. ದೇಗುಲದ ಆಸುಪಾಸಿನಲ್ಲಿರುವ ಹುತ್ತಗಳಿಗೆ ಭಕ್ತರು ಹಾಲು ಎರೆದು ಪೂಜೆ ಸಲ್ಲಿಸಿ ತಮ್ಮ ಭಕ್ತಿಯನ್ನು ಸಮರ್ಪಿಸಿದರು.

ಖ್ಯಾತ ಉರಗ ಸಂರಕ್ಷಕ ಸ್ನೇಕ್ ಶಾಮ್ ಭೇಟಿ

ಸಿದ್ದಲಿಂಗಪುರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇಗುಲಕ್ಕೆ ಖ್ಯಾತ ಉರಗ ಸಂರಕ್ಷಕ ಸ್ನೇಕ್ ಶಾಮ್ ಭೇಟಿ ನೀಡಿದ್ದರು. ಈ ವೇಳೆ ಪ್ರತಿನಿಧಿ ನ್ಯೂಸ್ ಜೊತೆ ಮಾತನಾಡಿದ ಸ್ನೇಕ್ ಶಾಮ್,  ನಾನು ಇದುವರೆಗೆ ಸುಮಾರು 96 ಸಾವಿರ ಹಾವುಗಳನ್ನು ‌ಸಂರಕ್ಷಣೆ ಮಾಡಿದ್ದೇನೆ.ಹಾವುಗಳು ಪರಿಸರ ಸಮತೋಲನ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.ಹಾಗಾಗಿ ಅನಾದಿಕಾಲದಿಂದಲೂ ಹಾವುಗಳನ್ನು ಪೂಜಿಸುತ್ತಾ ಬರಲಾಗಿದೆ.ಷಷ್ಠಿಯ ದಿನ ಹುತ್ತಗಳಿಗೆ ಹಾಲನ್ನೆರೆಯುವುದರಿಂದ ಹಾವುಗಳಿಗೆ ತೊಂದರೆಯಾಗುತ್ತದೆ.ಹಾವು ಹಾಲನ್ನು ಕುಡಿಯುವುದಿಲ್ಲ.ಹಾವು ಸುಮ್ಮನೆ ಯಾರಿಗೂ ಕಚ್ಚುವುದಿಲ್ಲ. ಹಾಗಾಗಿ ಯಾರು ಕೂಡ ಹಾವುಗಳನ್ನು ಕೊಲ್ಲಬೇಡಿ ಎಂದು ಕರೆ ನೀಡಿದರು

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕರ್ನಾಟಕದಲ್ಲಿ ಮಳೆ ಮತ್ತೆ ಅಬ್ಬರ : ನವೆಂಬರ್ 5 ರಿಂದ ಭಾರೀ ಮಳೆ

November 3, 2025
ಬೆಂಗಳೂರುಮುಖಪುಟರಾಜಕೀಯ

ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ʼಕಾಗಿನೆಲೆʼ ಸ್ವಾಮೀಜಿ ; ನಿರ್ಮಲಾನಂದ ಸ್ವಾಮೀಜಿಗೆ ಟಾಂಗ್‌ !

November 27, 2025
ಕ್ರೀಡೆನವದೆಹಲಿಮುಖಪುಟ

ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಿದ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್

January 20, 2026
ಮುಖಪುಟಮೈಸೂರು ನಗರ

ಮೈಸೂರು ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ: ಅರಮನೆ ಆವರಣದಲ್ಲಿ ಪೊಲೀಸ್ ತಪಾಸಣೆ ತೀವ್ರ

December 29, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?