ಬೆಂಗಳೂರು, ಜ.02: ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ(Siddaramaiah) ಕೂಡ ರಾಮನ ವಿರೋಧಿ ಎನ್ನುವುದನ್ನು ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್(Sunil kumar)ಸಿಎಂ ವಿರುದ್ದ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ ನಾನು ಪಟ್ಟಿ ಕೊಡುತ್ತೇನೆ, ನಿಮಗೆ ತಾಕತ್ ಇದ್ದರೆ ಕರ ಸೇವಕರನ್ನು ಬಂಧಿಸಿ. ನಾನೂ ಕರ ಸೇವೆಯಲ್ಲಿ ಭಾಗಿಯಾಗಿದ್ದೆ, ಬಂಧನ ಮಾಡಿದಾಕ್ಷಣ ಹಿಂದುತ್ವಕ್ಕೆ ಧಕ್ಕೆ ಮಾಡಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.