PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಸ್ಟರಿಂಗ್ ಕೇಂದ್ರದಿಂದ ಮತಗಟ್ಟೆಗೆ ತೆರಳಿದ ಅಧಿಕಾರಿಗಳು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಮಸ್ಟರಿಂಗ್ ಕೇಂದ್ರದಿಂದ ಮತಗಟ್ಟೆಗೆ ತೆರಳಿದ ಅಧಿಕಾರಿಗಳು
ಚಾಮರಾಜನಗರ

ಮಸ್ಟರಿಂಗ್ ಕೇಂದ್ರದಿಂದ ಮತಗಟ್ಟೆಗೆ ತೆರಳಿದ ಅಧಿಕಾರಿಗಳು

ಪ್ರತಿನಿಧಿ
Last updated: April 25, 2024 8:41 pm
ಪ್ರತಿನಿಧಿ
Published April 25, 2024
Share
SHARE

ಪ್ರತಿನಿಧಿ ವರದಿ ಕೊಳ್ಳೇಗಾಲ
ಪಟ್ಟಣದ ಶ್ರೀ ಮಹದೇಶ್ವರ ಪ್ರಥಮ ದರ್ಜೆ ಕಾಲೇಜಿನ ಮಸ್ಟರಿಂಗ್ ಕೇಂದ್ರದಿAದ 241 ಮತಗಟ್ಟೆ ಕೇಂದ್ರಗಳಿಗೆ ಲೋಕಸಭಾ ಚುನಾವಣೆ ಹಿನ್ನೆಲೆ ಪಿಆರ್ ಒ(ಮತಕಟ್ಟೆ ಅಧಿಕಾರಿಗಳು) ಹಾಗೂಎಪಿಆರ್ ಒ (ಸಹಾಯಕ ಮತಗಟ್ಟೆ ಅಧಿಕಾರಿಗಳು) ಸೇರಿದಂತೆ ಎಲ್ಲ ಸಿಬ್ಬಂದಿ ವರ್ಗ ಇವಿಎಂ ಮಷಿನ್ ನೊಂದಿಗೆ ಗುರುವಾರ ಮಧ್ಯಾಹ್ನ ತೆರಳಿದರು.
ಈ ನಡುವೆ ಜಿಲ್ಲಾ ಚುನಾವಣಾಧಿಕಾರಿ ಸಿ.ಟಿ.ಶಿಲ್ಪನಾಗ್ ಹಾಗೂ ಸಹಾಯಕ ಚುನಾವಣಾಧಿಕಾರಿ ಶಿವಮೂರ್ತಿ ಅವರು ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಚುನಾವಣೆಯ ಎಲ್ಲಾ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ನಂತರ ಅವರು ಮಾತನಾಡಿ, ಶುಕ್ರವಾರ ನಿಗದಿಯಾಗಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಎಲ್ಲೆಡೆ ಮತದಾನ ಪ್ರಕ್ರಿಯೆ ಶಾಂತಿಯುತ ಹಾಗೂ ವ್ಯವಸ್ಥಿತವಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮತದಾನದ ವೇಳೆ ಒಂದು ಸಣ್ಣ ಲೋಪವೂ ಆಗದ ರೀತಿ ಎಚ್ಚರ ವಹಿಸಲಾಗಿದೆ. ಮತಗಟ್ಟೆಗಳಲ್ಲಿ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಬಿಗಿ ಪೊಲೀಸ್ ವ್ಯವಸ್ಥೆಯನ್ನು ಕೈಗೊಳ್ಳಲಾಗಿದ್ದು, ಮತಗಟ್ಟೆಗಲ್ಲಿ ಅಧಿಕಾರಿಗಳಿಗೆ ತಿಂಡಿ, ಊಟ ಹಾಗೂ ಮೂಲ ಸೌಕರ್ಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ. ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳಿಗೆ ಚುನಾವಣಾ ಆಯೋಗದ ಮಾರ್ಗ ಸೂಚಿಯಂತೆ ಸೂಕ್ತ ಮಾರ್ಗದರ್ಶನ ಹಾಗೂ ಸಲಹೆ ನೀಡಲಾಗಿದೆ ಎಂದರು.
ಈ ನಡುವೆ ಮಸ್ಟರಿಂಗ್ ಕೇಂದ್ರದಲ್ಲಿ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ವಿದ್ಯುನ್ಮಾನ ಮತಯಂತ್ರ (ಇವಿಎಂ) ನಿರ್ವಹಣೆ ಕುರಿತು ಸಮಗ್ರ ಮಾಹಿತಿ ನೀಡಲಾಯಿತು ಹಾಗೂ ಈ ಬಗ್ಗೆ ಗೊಂದಲವಿದ್ದರೆ ಮತ್ತೊಮ್ಮೆ ಇಲ್ಲಿಯೇ ತಿಳಿಸಿ ಎಂದು ಸಹಾಯಕ ಚುನಾವಣಾಧಿಕಾರಿ ಶಿವಮೂರ್ತಿ ಹಾಗೂ ತಹಸೀಲ್ದಾರ್ ಎಂ.ಮಂಜುಳಾ ಅವರು ಮತಗಟ್ಟೆ ಅಧಿಕಾರಿಗಳಿಗೆ ಹೇಳಿದರು.
241 ಮತಗಟ್ಟೆಯಲ್ಲಿ ಮತದಾನಕ್ಕೆ ಸಿದ್ಧತೆ :
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಲು 241 ಮತಗಟ್ಟೆಯನ್ನು ತೆರೆಯಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿ 5 ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದು, ಒಟ್ಟು 1,250 ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಕಾಯ್ದಿರಿಸಿದ ತಂಡದಲ್ಲಿ 500 ಅಧಿಕಾರಿಗಳಿದ್ದಾರೆ. ಪ್ರತಿ ಬೂತ್‌ನಲ್ಲಿ ವಿಡಿಯೋ ಕ್ಯಾಮರ ವ್ಯವಸ್ಥೆ ಹಾಗೂ ಮೈಕ್ರೋ ಅಬ್ಸರ್‌ವರ್ ಇರಲಿದ್ದಾರೆ. 36 ಕೆಎಸ್‌ಆರ್‌ಸಿ ಬಸ್ ಹಾ ಗೂ ಕಡಿಮೆ ಅಂತರದ ಮತಗಟ್ಟೆಗಳಿಗೆ ಕಾರು, ಮಿನಿ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ.
ಮತಗಟ್ಟೆಗೆ ತೆರಳಿದ ಅಧಿಕಾರಿಗಳು:
ಶ್ರೀ ಮಹದೇಶ್ವರ ಕಾಲೇಜು ಮೈದಾನದಲ್ಲಿ ಕಾದಿರಿಸಲಾಗಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಇತರ ವಾಹನಗಳ ಸಹಾಯದಿಂದ ಮತಗಟ್ಟೆ ಅಧಿಕಾರಿ(ಪಿಆರ್‌ಒ), ಸಹಾಯಕ ಮತಗಟ್ಟೆ ಅಧಿಕಾರಿ (ಎಪಿಆರ್‌ಒ) ಮತದಾರರ ಪಟ್ಟಿ, ವಿದ್ಯುನ್ಮಾನ ಮತ ಯಂತ್ರದ ಬ್ಯಾಲೆಟ್ ಯೂನಿಟ್(ಬಿಯು), ಕಂಟ್ರೋಲ್ ಯೂನಿಟ್( ಸಿಯು) ವಿವಿ ಪ್ಯಾಟ್‌ಗಳೊಂದಿಗೆ ತಮ್ಮ ನಿಗದಿತ ಮತಗಟ್ಟೆಗಳಿಗೆ ತೆರಳಿದರು. ಇದಕ್ಕೂ ಮೊದಲು ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು ಮಸ್ಟರಿಂಗ್ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದ್ದ ಅಂಚೆ ಮತ ಕೇಂದ್ರದಲ್ಲಿ ಪೋಸ್ಟಲ್ ಬ್ಯಾಲೆಟ್ ಮೂಲಕ ಹಕ್ಕು ಚಲಾಯಿಸಿದ ದೃಶ್ಯ ಸಾಮಾನ್ಯವಾಗಿತ್ತು.
ಪೊಲೀಸ್ ಬಿಗಿ ಬಂದೋಬಸ್ತ್:
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು 385ಕ್ಕೂ ಹೆಚ್ಚು ಪೋಲಿಸರನ್ನು ನಿಯೋಜಿಸಲಾಗಿದೆ. ಎಎಸ್ಪಿ ಉದೇಶ್ ಅವರು ಮೇಲುಸ್ತುವಾರಿ ವಹಿಸಲಿದ್ದು, 1 ಡಿವೈಎಸ್ಪಿ, 3 ಇನ್ಸ್ಪೆಕ್ಟರ್, 10 ಸಬ್ ಇನ್ಸ್ಪೆಕ್ಟರ್, 4 ಸಹಾಯಕ ಸಬ್ ಇನ್ಸ್ ಪೆಕ್ಟರ್ , 165 ಹೆಡ್ ಕಾನ್ಸ್ ಟೇಬಲ್  ಮತ್ತು ಕಾನ್ಸ್ ಟೇಬಲ್  ಸೇರಿದಂತೆ ಹೋಂ ಗಾರ್ಡ್ಸ್ ಹಾಗೂ ಇತರ ಭಧ್ರತಾ ಸಿಬ್ಬಂದಿ  ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
25ಕೆಜಿಎಲ್-3
ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ಪಟ್ಟಣದ ಶ್ರೀ ಮಹದೇಶ್ವರ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಮಸ್ಟರಿಂಗ್ ಕೇಂದ್ರದಿAದ ಮತಗಟ್ಟೆ ಕೇಂದ್ರಗಳಿಗೆ ಗುರುವಾರ ವಿದ್ಯುನ್ಮಾನ ಯಂತ್ರ ಮತ್ತು ಪರಿಕರಗಳೊಂದಿಗೆ ಅಧಿಕಾರಿಗಳು ತೆರಳುತ್ತಿರುವುದು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರ

ಶಿವಪುರದಲ್ಲಿ ಕಾಂಗ್ರೆಸ್ ಪರ ಶಾಸಕರಿಂದ ಮತಯಾಚನೆ

April 5, 2024
ಚಾಮರಾಜನಗರ

ದುರಸ್ತಿಯಾಗದ ಆರ್‌ಒ ಪ್ಲಾಂಟ್

July 2, 2024
ಚಾಮರಾಜನಗರ

26ರಂದು ಸೆಸ್ಕ್‌ ಎಂ.ಡಿ. ಕಚೇರಿ ಮುತ್ತಿಗೆ

March 21, 2024
ಚಾಮರಾಜನಗರ

ಬಗೆದಷ್ಟು ಬಯಲಾಗುತ್ತಿದೆ ಕೇರಳ ರಾಬರಿ ಗ್ಯಾಂಗ್​ ಅಸಲಿಯತ್ತು: ವಿಚಾರಣೆ ವೇಳೆ ರಿವೀಲ್ ಆಯ್ತು ಸ್ಪೋಟಕ ಸತ್ಯ

December 7, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?