PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸುಧಾಕರ್‌ ಗೆಲ್ಲಿಸುವುದು ನಮ್ಮೆಲ್ಲರ ಗುರಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಸುಧಾಕರ್‌ ಗೆಲ್ಲಿಸುವುದು ನಮ್ಮೆಲ್ಲರ ಗುರಿ
ಸಮಗ್ರ

ಸುಧಾಕರ್‌ ಗೆಲ್ಲಿಸುವುದು ನಮ್ಮೆಲ್ಲರ ಗುರಿ

ಪ್ರತಿನಿಧಿ
Last updated: April 17, 2024 6:00 pm
ಪ್ರತಿನಿಧಿ
Published April 17, 2024
Share
SHARE

ಚಿಕ್ಕಬಳ್ಳಾಪುರ: ದಲಿತ ಸಮುದಾಯದ ಮೇಲೆ ವಿಶೇಷ ಕಾಳಜಿ ಹೊಂದಿರುವ ಡಾ.ಕೆ.ಸುಧಾಕರ್ ಅವರನ್ನು ಈ ಚುನಾವಣೆಯಲ್ಲಿ ಗೆಲ್ಲಿಸಿ ಸಂಸದರಾನ್ನಾಗಿ ಮಾಡುವುದು ನಮ್ಮೆಲ್ಲರ ಗುರಿಯಾಗಿದೆ ಎಂದು ಮಾಜಿ ಶಾಸಕ ಎಂ.ಶಿವಾನಂದ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್ ಸರ್ವಜನಾಂಗದ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ವಿಶೇಷವಾಗಿ ದಲಿತ ಸಮುದಾಯದ ಏಳಿಗೆಗಾಗಿ ಕೆಲಸ ಮಾಡಿದ್ದಾರೆ. ಅವರು ಯಾವೊಬ್ಬ ದಲಿತರ ಮೇಲೆ ಕೇಸ್ ಹಾಕಿಲ್ಲ, ದೂರು ನೀಡಿಲ್ಲ ಎಂದು ಹೇಳಿದರು.

ದಲಿತ ಸಮುದಾಯಕ್ಕಾಗಿ ಸಮುದಾಯವನ್ನು ಮುನಿಸಿಪಾಲ್ ಕಾಲೇಜು ಬಳಿ ಮಂಜೂರು ಮಾಡಿಸಿದ್ದಾರೆ. ಅದರಂತೆ ಎಲ್ಲ ಸಮುದಾಯಗಳಿಗೂ ಸಮುದಾಯದ ಭವನಗಳ ನಿರ್ಮಾಣಕ್ಕೆ ಆದ್ಯತೆ ನೀಡಿದ್ದಾರೆ. ಅಲ್ಲದೆ ದಲಿರಿಗೆ ಅಧಿಕಾರ ಹಾಗೂ ಸೂಕ್ತ ಸ್ಥಾನಮಾನ ನೀಡಿದ್ದಾರೆ. ದಲಿತರಿಗೆ ಹಲವು ಸೌಲಭ್ಯ ಒದಗಿಸಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಪಕ್ಷಬೇಧ ಮಾಡಿಲ್ಲ. ಲೋಕಲ್ ಸುಧಾಕರ್ ಅವರನ್ನು ಅಭ್ಯರ್ಥಿ ಲೋಕಸಭೆಯ ಚುನಾವಣೆಯಲ್ಲಿ ಗೆಲ್ಲಿಸಿ ಸಂಸದರನ್ನಾಗಿ ಮಾಡಲಾಗುವುದು ಎಂದರು.

ದಲಿತ ಮುಖಂಡ ಬಾಲಕುಂಟಹಳ್ಳಿ ಬಿ.ಎನ್.ಗಂಗಾಧರ್ ಮಾತನಾಡಿ, ಡಾ.ಕೆ.ಸುಧಾಕರ್ ಕ್ಷೇತ್ರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕಾಗಿ ಅವರು ತಮ್ಮ ಶಾಸಕ ಸ್ಥಾನವನ್ನೇ ತ್ಯಾಗ ಮಾಡಿದವರು. ಅಭಿವೃದ್ಧಿಗೆ ಪಣ ತೊಟ್ಟು ಅನೇಕ ಯೋಜನೆಗಳು, ಕಾರ್ಯಕ್ರಮಗಳನ್ನು ಕ್ಷೇತ್ರದ ಜನತೆಗೆ ನೀಡಿದ್ದಾರೆ ಎಂದರು.

- ಜಾಹೀರಾತು -

ಸುಧಾಕರ್ ಅವರು ಅಧಿಕಾರದಲ್ಲಿದ್ದಾಗ ನಮ್ಮ ದಲಿತ ಸಮುದಾಯದ ಹಲವು ಮುಖಂಡರಿಗೆ ಒಳ್ಳೆಯ ಸ್ಥಾನಮಾನ ಕೊಟ್ಟು ಬೆಳೆಸಿದ್ದಾರೆ. ಹಿಂದಿನಿಂದಲೂ ಕಾಂಗ್ರೆಸ್‌ನವರು ಜಾತಿಗಳ ನಡುವೆ ವಿಷ ಬೀಜ ಬಿತ್ತಿ ದಲಿತರನ್ನು ಹೊಡೆದು ಆಳುವ ನೀತಿಯನ್ನೇ ಅನುಸರಿಕೊಂಡೆ ಬಂದಿದೆ. ಕಳೆದ ವಷÀðದಿಂದ ಕ್ಷೇತ್ರದಲ್ಲಿ ಏನು ಕೆಲಸಗಳಾಗಿವೆ ಎಂಬುದರ ಬಗ್ಗೆ ಜನರಿಗೆ ಅರಿವಿದೆ. ದಲಿತ ಸಮುದಾಯವು ಸುಧಾಕರ್ ಪರವಾಗಿದೆ. ನಾವೆಲ್ಲ ಸುಧಾಕರ್ ಅವರನ್ನು ಬೆಂಬಲಿಸುತ್ತೇವೆ ಎಂದು ನುಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಟಿ.ಕೃಷ್ಣಮೂರ್ತಿ ಮಾತನಾಡಿ, ಡಾ.ಕೆ.ಸುಧಾಕರ್ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ವಿವಿಧ ಹುದ್ದೆಗಳಿಗೆ ದಲಿತ ಸಮುದಾಯದ ಮುಖಂಡರನ್ನು ನೇಮಿಸಿ ಗುರ್ತಿಸಿದ್ದಾರೆ. ಈಗ ಕಾಂಗ್ರೆಸ್‌ನಲ್ಲಿರುವ ಶೇ.೯೯ ರಷ್ಟು ಮುಖಂಡರು ಡಾ.ಕೆ.ಸುಧಾಕರ್‌ರಿಂದ ಅನುಕೂಲ ಪಡೆದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಅವರನ್ನು ವೈಯಕ್ತಿಕವಾಗಿ ನಿಂದಿಸುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದರು.

ನಗರಸಭೆ ಸದಸ್ಯ ಸತೀಶ್, ಮುನಿರಾಜು, ಸಿಂಧೂರ್, ತರಕಾರಿ ವೆಂಕಟೇಶ್, ಎಂ.ಮುನಿರಾಜು ಇದ್ದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಸಿಯಾಚಿನ್‌ನಲ್ಲಿ ನಿಯೋಜನೆಗೊಂಡ ಮೊದಲ ಮಹಿಳಾ ವೈದ್ಯಕೀಯ ಅಧಿಕಾರಿ ಕ್ಯಾಪ್ಟನ್ ಗೀತಿಕಾ ಕೌಲ್

December 6, 2023
ಚುನಾವಣೆಮುಖಪುಟಸಮಗ್ರ

ಜಮ್ಮು ಕಾಶ್ಮೀರದಲ್ಲಿ ಚುನಾವಣಾ ಪೂರ್ವ ಉಗ್ರ ದಾಳಿ: ಬಿಜೆಪಿ ಮುಖಂಡ ಸಾವು

May 19, 2024
ಸಮಗ್ರ

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಮಾದಕವಸ್ತುಗಳಿಂದ ದೂರವಿರಿ

June 12, 2024
ಸಮಗ್ರ

 ಭಾರತ ನಂ.1 ಆಗಲು ಮತ್ತೆ ಮೋದಿ ಸರ್ಕಾರ ಬರಬೇಕು

March 26, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?