PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬೆಂಗಳೂರು: ಮತದಾನ ಮಾಡದವರು ಬದುಕಿದ್ದು ಸತ್ತಂತೆ, ಬ್ಯಾನರ್ ಹಾಕಿ ಆಕ್ರೋಶ​
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಬೆಂಗಳೂರು: ಮತದಾನ ಮಾಡದವರು ಬದುಕಿದ್ದು ಸತ್ತಂತೆ, ಬ್ಯಾನರ್ ಹಾಕಿ ಆಕ್ರೋಶ​
ಚುನಾವಣೆಜಿಲ್ಲೆಬೆಂಗಳೂರುಮುಖಪುಟ

ಬೆಂಗಳೂರು: ಮತದಾನ ಮಾಡದವರು ಬದುಕಿದ್ದು ಸತ್ತಂತೆ, ಬ್ಯಾನರ್ ಹಾಕಿ ಆಕ್ರೋಶ​

Prathinidhi News
Last updated: April 27, 2024 2:08 pm
Prathinidhi News
Published April 27, 2024
Share
SHARE

ಬೆಂಗಳೂರು: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಶುಕ್ರವಾರ ನಡೆಯಿತು. ಬೆಂಗಳೂರಿನಲ್ಲಿ ಪ್ರತಿ ಬಾರಿಯಂತೆ ಕಡಿಮೆ ಮತದಾನವಾಗಿದೆ. ಇದರಿಂದ ಆಕ್ರೋಶಗೊಂಡ ಕೆಲವರು ಮತದಾನ ಮಾಡದವರು ಬದುಕಿದ್ದು ಸತ್ತಂತೆ ಅಂತ ರಸ್ತೆ ಬದಿಗಳಲ್ಲಿ ಬ್ಯಾನರ್​ ಹಾಕಿದ್ದಾರೆ. “ಚುನಾವಣಾ ಆಯೋಗ ಅಷ್ಟೊಂದು ಪ್ರಚಾರ ಮಾಡಿದ ನಂತರವೂ ಮತದಾನದಿಂದ ದೂರ ಉಳಿದು ಬದುಕಿದ್ದರೂ ಸತ್ತಂತೆ ವರ್ತಿಸಿದ ಬೆಂಗಳೂರು ನಗರದ ಸುಶಿಕ್ಷತ ಸತ ಪ್ರಜೆಗಳಿಗೆ ನಮ್ಮ ಶ್ರದ್ಧಾಂಜಲಿಗಳು” ಎಂದು ಬ್ಯಾನರ್​ ಹಾಕಿದ್ದಾರೆ.

“ಪ್ರತಿ ಸಲದಂತೆ 2024ರ ಲೋಕಸಭಾ ಚುನಾವಣೆಯಲ್ಲೂ ವಲಸಿಗರು ಕೈ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮತದಾನ ಮಾಡುವ ಹಕ್ಕಿದ್ದರೂ ಮತ ಹಾಕಿಲ್ಲ. ಇವರು ಬದುಕಿದ್ದು ಸತ್ತಂತೆ” ಎಂದು ಹೆಸರು ಹೇಳಲು ಇಚ್ಚಿಸಿದ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

14 ಕ್ಷೇತ್ರಗಳಲ್ಲಿನ ಶೇಕಡಾವಾರು ಮತದಾನ

ರಾಜ್ಯದ 14 ಕ್ಷೇತ್ರಗಳಲ್ಲಿ ಒಟ್ಟು 69.23 ರಷ್ಟು ಮತದಾನವಾಗಿದೆ. ಇದರಲ್ಲಿ ಅತಿ ಕಡಿಮೆ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ 52.81 ರಷ್ಟು ಮತದಾನವಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೇಕಡಾ 54.42 ರಷ್ಟು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಶೇಕಡಾ 67.29 ರಷ್ಟು, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ 53.15 ರಷ್ಟು, ಚಾಮರಾಜನಗರ ಕ್ಷೇತ್ರದಲ್ಲಿ ಶೇ 76.59 ರಷ್ಟು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 76.82 ರಷ್ಟು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ 73.11 ರಷ್ಟು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶೇ 77.43 ರಷ್ಟು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಶೇ 77.51 ರಷ್ಟು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಶೇ 78.07 ರಷ್ಟು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ 81.48 ರಷ್ಟು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಶೇ 70.45 ರಷ್ಟು, ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಶೇ 77.70 ರಷ್ಟು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೇ 76.06 ರಷ್ಟು ಮತದಾನವಾಗಿದೆ.

- ಜಾಹೀರಾತು -

ರಾಜಧಾನಿ ಬೆಂಗಳೂರಿನ ಮತದಾರರಲ್ಲಿ ನಿರುತ್ಸಾಹ ಮುಂದುವರೆದಿದ್ದು, ಮತದಾನ ಪ್ರಮಾಣ ನಿರೀಕ್ಷೆಯಂತೆ ಕಡಿಮೆ ಪ್ರಮಾಣದಲ್ಲಾಗಿದೆ. ಬೇರೆ ಕಡೆಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲೂ ಜನರು ಉತ್ಸಾಹದಿಂದ ಮತಚಲಾಯಿಸಿದ್ದಾರೆ. ಯುವ ಮತದಾರರು, ವೃದ್ಧರು, ಶತಾ ಯುಷಿಗಳು ಹುಮ್ಮಸ್ಸಿನಿಂದ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಕೆಲವೆಡೆ ಬಹಿಷ್ಕಾರ

ಮೂಲ ಸೌಕರ್ಯ ಸೇರಿದಂತೆ ನಾನಾ ಕಾರಣಗಳಿಗೋಸ್ಕರ ಹಲವೆಡೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಪ್ರಸಂಗವೂ ನಡೆಯಿತು.ಸಮಾಧಾನ ಮಾಡಲು ಬಂದ ಅಧಿಕಾರಿಗಳ ಮೇಲೆಯೆ ಗ್ರಾಮಸ್ಥರು ಮುಗಿಬಿದ್ದ ಕಾರಣ ಪೊಲೀಸರ ಲಾಠಿ ಏಟು ತಿನ್ನಬೇಕಾದ ಪ್ರಸಂಗವೂ ಅವರಿಗೆ ಎದುರಾಯಿತು.

ಇನ್ನು ದೇಶಾದ್ಯಂತ ನಡೆದ ಎರಡನೇ ಹಂತದ ಮತದಾನದಲ್ಲಿ ತ್ರಿಪುರಾದಲ್ಲಿ 77ರಷ್ಟು ಮತದಾನವಾಗಿದೆ. ಮಣಿಪುರದಲ್ಲಿ 76, ಮಹಾರಾಷ್ಟ್ರದಲ್ಲಿ 53ರಷ್ಟು ವೋಟಿಂಗ್ ಆಗಿದೆ. ಇನ್ನೂ ಮಧ್ಯಪ್ರದೇಶದಲ್ಲಿ 55, ಉತ್ತರ ಪ್ರದೇಶದಲ್ಲಿ 52, ಪಶ್ಚಿಮ ಬಂಗಾಳದಲ್ಲಿ 71ರಷ್ಟು ಮತದಾನವಾಗಿದೆ.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟಮುಡಾ ಹಗರಣರಾಜಕೀಯ

ಶಕ್ತಿ ಯೋಜನೆ ಪರಿಷ್ಕರಣೆ ಉದ್ದೇಶ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

October 31, 2024
ಮುಖಪುಟಮುಡಾ ಹಗರಣಮೈಸೂರು ನಗರರಾಜಕೀಯ

ಸಿಎಂ ವಿರುದ್ದ ಭುಗಿಲೆದ್ದ ಬಿಜೆಪಿ ಆಕ್ರೋಶ ; ಕಾರ್ಯಕರ್ತರು ಪೊಲೀಸರ ವಶಕ್ಕೆ

November 6, 2024
ಬೆಂಗಳೂರುಮುಖಪುಟರಾಜಕೀಯ

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

December 9, 2024
ಚಾಮರಾಜನಗರಮುಖಪುಟ

ಮಲೈ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ ಸಾವು ಪ್ರಕರಣ : ಚುರುಕುಗೊಂಡ ತನಿಖೆ , 6 ಮಂದಿ ತನಿಖಾ ತಂಡ ನೇಮಕ ..!

June 27, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?