PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಡೆಂಘೆ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಹಾಸನ > ಡೆಂಘೆ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ
ಹಾಸನ

ಡೆಂಘೆ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ

ಪ್ರತಿನಿಧಿ
Last updated: June 1, 2024 7:46 pm
ಪ್ರತಿನಿಧಿ
Published June 1, 2024
Share
SHARE

ಕಾರ್ಯಕ್ರಮಾಧಿಕಾರಿ ಡಾ.ನಾಗೇಶ್ ಆರಾಧ್ಯ ಮಾಹಿತಿ

ಪ್ರತಿನಿಧಿ ವರದಿ ಹೊಳೆನರಸೀಪುರ

ಹಾಸನ ಜಿಲ್ಲೆಯಲ್ಲಿ ಡೆಂಘೆ ಪ್ರಕರಣಗಳು ತೀವ್ರಗತಿಯಲ್ಲಿ ಏರುತ್ತಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯರೋಗ ಹಾಗೂ ಅಂದತ್ವ ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ.ನಾಗೆಶ್ ಆರಾಧ್ಯ ತಿಳಿಸಿದರು.

ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ಮಲೇರಿಯಾ ಮತ್ತು ಡೆಂಘೆ ವಿರೋಧಿ ಮಾಸಾಚರಣೆ ಬಗ್ಗೆ ಆಯೋಜಿಸಿದ್ದ ವಿವಿಧ ಇಲಾಖೆಗಳ ಸಮನ್ವಯ ಸಭೆಯಲ್ಲಿ ಮಾತನಾಡಿದರು.

- ಜಾಹೀರಾತು -

ಡೆಂಘೆ ಪ್ರಕರಣಗಳನ್ನು ಕಡಿಮೆ ಮಾಡಲು ಕೇವಲ ಆರೋಗ್ಯ ಇಲಾಖೆಯಿಂದ ಮಾತ್ರ ನಿಯಂತ್ರಣ ಮಾಡಲು ಕಷ್ಟಸಾಧ್ಯ. ಹಾಗಾಗಿ, ಬೇರೆ- ಬೇರೆ ಇಲಾಖೆಗಳೂ ಸಹ ನಮ್ಮ ಇಲಾಖೆಯೊಂದಿಗೆ ಕೈಜೋಡಿಸಿದಾಗ ಮಾತ್ರ, ಡೆಂಘೆ ಪ್ರಕರಣಗಳಿಂದ ಸಂಭವಿಸುವು ಸಾವಿನ ಪ್ರಕರಣಗಳಿರಬಹುದು, ಅವುಗಳೆಲ್ಲವನ್ನು ಕಡಿವಾಣ ಹಾಕಿ ನಿಯಂತ್ರಣ ಮಾಡಲು ಸಾಧ್ಯವಾಗುತ್ತದೆ ಎಂದರು.

ಮುಂದಿನ ದಿನಗಳಲ್ಲಿ ಡೆಂಘೆ ಪ್ರಕರಣಗಳು ಹೆಚ್ಚಾಗುವು ಮುನ್ಸೂಚನೆಗಳಿರುವುದರಿಂದ ಈಗಲೇ ಮುನ್ನೆಚ್ಚರಿಕೆಯ ಸಲುವಾಗಿ ಏನೇನು ಮಾಡುವುದರಿಂದ ಡೆಂಘೆ ಪ್ರಕರಣಗಳಿಗೆ ಕಡಿವಾಣ ಹಾಕಿ ತಡೆಗಟ್ಟಬಹುದರ ಬಗ್ಗೆ ಈ ಸಭೆಯನ್ನು ಕರೆಯಲಾಗಿದೆ. ಎಲ್ಲ ಇಲಾಖೆಗಳು ತಮ್ಮ ಕಾರ್ಯುವ್ಯಾಪ್ತಿಯಲ್ಲಿ ಹೇಗೆ ನಿಯಂತ್ರಣ ಮಾಡಬಹುದು ಅನ್ನುವುದನ್ನು ಪಿ.ಪಿ.ಟಿ.ಮೂಲಕ ವೀಕ್ಷಿಸಿ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೀಟಶಾಸ್ತ್ರ ತಂತ್ರಜ್ಞ ರಾಜೇಶ್ ಕುಲಕರ್ಣಿ ಮಾತನಾಡಿ, ಡೆಂಘೆ ಹರಡುವ ಈಡೀಸ್ ಸೊಳ್ಳೆಗಳ ವಿಶೇಷತೆಯೆಂದರೆ ಬೇರೆ ಸೊಳ್ಳೆಗಳು ರಾತ್ರಿವೇಳೆ ಕಚ್ಚಿದರೆ ಈ ಸೊಳ್ಳೆಯು ಹಗಲು ವೇಳೆ ಕಚ್ಚುತ್ತವೆ. ಶುದ್ಧವಾದ ತಿಳಿ ನೀರಿನಲ್ಲಿ ಲಾರ್ವ ಉತ್ಪತ್ತಿಮಾಡುತ್ತವೆ. ರೋಗಗಳ ಗುಣಲಕ್ಷಣಗಳು ಹಾಗೂ ನಿಯಂತ್ರಣದ ಬಗ್ಗೆ ಸವಿವರವಾಗಿ ಪಿಪಿಟಿ ಮೂಲಕ ಪ್ರಾತ್ಯಕ್ಷತೆ ನಡೆಸಿಕೊಟ್ಟು, ನಮ್ಮ  ಇಲಾಖೆಯೊಂದಿಗೆ, ಬೇರೆ ಇಲಾಖೆಗಳು ಹಾಗೂ ಸಾರ್ವಜನಿಕರೂ ಸಹಕಾರ ನೀಡಿ ಎಂದು ತಿಳಿಸುತ್ತಾ ರೋಗಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದರು.

ತಹಸೀಲ್ದಾರ್ ಕಚೇರಿಯ ಶಿರಸ್ತೇದಾರ್ ಲೋಕೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ತಾಲೂಕು ಪಂಚಾಯಿತಿ ತಾಂತ್ರಿಕ ಅಧಿಕಾರಿ ಗೋಪಾಲ್, ಪುರಸಭೆಯ ಮುಖ್ಯಾಧಿಕಾರಿ ಮಹೇಂದ್ರ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಯರಾಮ,  ವಿವಿಧ ಪ್ರಾ.ಆರೋಗ್ಯ ಕೇಂದ್ರದ ಹಿರಿಯ ಹಾಗೂ ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಮೇಲ್ವಿಚಾರಕರು, ವಿವಿಧ ಇಲಾಖೆಯ ಮುಖ್ಯಸ್ಥರು  ಉಪಸ್ಥಿತರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಹಾಸನ

ಬಾಣಾವರದಲ್ಲಿ ದಾಖಲೆಗಳಿಲ್ಲದ ಬಟ್ಟೆಗಳ ವಶ

April 6, 2024
ಹಾಸನ

24ರಂದು ವಿದ್ಯಾರ್ಥಿ ನಿಲಯದ ಉದ್ಘಾಟನೆ

June 21, 2024
ಚುನಾವಣೆಮುಖಪುಟರಾಜಕೀಯಹಾಸನ

ಸಂಪತ್ತು ಮರುಹಂಚಿಕೆ ಮಾಡಲು ರಾಹುಲ್ ಗಾಂಧಿಯೇನು ಮಾವೋವಾದಿಯಾ? ದೇವೇಗೌಡರು ಆಕ್ರೋಶ

April 25, 2024
ಹಾಸನ

ಬಿಜಿಎಸ್‌ನಲ್ಲಿ ಬುಲ್ ಬುಲ್ ಉತ್ಸವ: ಪಿ.ಜಿ.ಆರ್.ಸಿಂಧ್ಯಾ

August 10, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?