PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಶುದ್ದ ಕುಡಿಯುವ ನೀರಿಗಾಗಿ ಜನರ ಪರದಾಟ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ಶುದ್ದ ಕುಡಿಯುವ ನೀರಿಗಾಗಿ ಜನರ ಪರದಾಟ
ಮಂಡ್ಯ

ಶುದ್ದ ಕುಡಿಯುವ ನೀರಿಗಾಗಿ ಜನರ ಪರದಾಟ

ಪ್ರತಿನಿಧಿ
Last updated: May 28, 2024 9:40 pm
ಪ್ರತಿನಿಧಿ
Published May 28, 2024
Share
SHARE

ಕೆಟ್ಟು ನಿಂತ ಬೆಸಗರಹಳ್ಳಿಯ ನೀರಿನ ಘಟಕಗಳು

ಅಧಿಕಾರಿಗಳ ನಿರ್ಲಕ್ಷ್ಯ

ಬೆಸಗರಹಳ್ಳಿ ಮಧುಕುಮಾರ ಮದ್ದೂರು

ಜಿಲ್ಲೆಯಲ್ಲಿ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬೆಸಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರು ಶುದ್ಧ ಕುಡಿಯುವ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ಉಂಟಾಗಿದೆ.

- ಜಾಹೀರಾತು -

ನಿರ್ವಹಣೆ ಕೊರತೆಯಿಂದ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟಿದ್ದು, ಇಲ್ಲಿನ ಜನರು ಶುದ್ಧ ಕುಡಿಯುವ ನೀರಿಗಾಗಿ ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕಗಳ ಮುಂದೆ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಉದ್ಭವಿಸಿದೆ.

ಬೆಸಗರಹಳ್ಳಿ ಗ್ರಾಮ ಪಂಚಾಯಿತಿಯ ಮಹರ್ನವಮಿದೊಡ್ಡಿ, ಪಣ್ಣೆದೊಡ್ಡಿ, ಈರೇಗೌಡನದೊಡ್ಡಿ, ಕೆರೆಮೇಗಳದೊಡ್ಡಿ ಸೇರಿದಂತೆ ಬೆಸಗರಹಳ್ಳಿಯ 5 ವಾರ್ಡ್ ಗಳಲ್ಲಿ 16 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. 27 ಮಂದಿ ಗ್ರಾಮ ಪಂಚಾಯಿತಿ ಸದಸ್ಯರು ಪ್ರತಿನಿಧಿಸುವ ಬೆಸಗರಹಳ್ಳಿ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.

ಸಂಸದೆ ಸುಮಲತಾ ಅಂಬರೀಶ್ ಅವರು ತಮ್ಮ ಅನುದಾನದಲ್ಲಿ ಗ್ರಾಮ ಪಂಚಾಯಿತಿಯ ಓವರ್ ಟ್ಯಾಂಕ್ ಕೆಳಗಡೆ ಶುದ್ದ ಕುಡಿಯುವ ನೀರಿನ ಘಟಕ ನಿರ್ಮಿಸಿದ್ದಾರೆ, ಆದರೆ ಪಂಚಾಯಿತಿ ತೆರೆದಿದ್ದಾಗ ಮಾತ್ರ ಶುದ್ಧ ಕುಡಿಯುವ ನೀರಿನ ಘಟಕದ ಬಾಗಿಲು ತೆಗೆಯುತ್ತಾರೆ. ಉಳಿದಂತೆ ಪಂಚಾಯಿತಿ ಸಿಬ್ಬಂದಿಗಳು ಬೀಗ ಹಾಕಿಕೊಳ್ಳುತ್ತಾರೆ. ಈ ಘಟಕ ನಿಷ್ಕ್ರಿಯವಾಗಿದ್ದು ಜನಜಂಗುಳಿಯ ಪ್ರದೇಶಕ್ಕೆ ಸ್ಥಳಾಂತರ ಮಾಡಬೇಕು ಎಂಬುವುದು ಸ್ಥಳೀಯರ ಅಭಿಪ್ರಾಯವಾಗಿದೆ.

ಕರ್ನಾಟಕ ಪಬ್ಲಿಕ್ ಶಾಲೆಯ ಸಮೀಪ ಮತ್ತೊಂದು ಶುದ್ಧ ಕುಡಿಯುವ ನೀರಿನ ಘಟಕವಿದ್ದು, ಅದು ಸಂಪೂರ್ಣ ಹಾಳಾಗಿದೆ ಈ ಪ್ರದೇಶದಲ್ಲಿ ಮುಸ್ಲಿಂ ಮತ್ತು ತಮಿಳು ಕಾಲೋನಿಗಳಿದ್ದು ಅಲ್ಲಿನ ಜನರು ಶುದ್ಧ ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ.

ಶಾಸಕ ಕೆ.ಎಂ.ಉದಯ್ ಶಾಸಕರಾಗುವುಕ್ಕಿಂತ ಮೊದಲೇ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪಣ್ಣೆದೊಡ್ಡಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿ ಲೋಕಾರ್ಪಣೆಗೊಳಿಸಿದರು. ಅದು ಈಗ ಕೆಟ್ಟು ನಿಂತಿದ್ದು ಅಲ್ಲಿನ ನಿವಾಸಿಗಳು 2 ಕಿ.ಮೀ.ದೂರದ ಬೆಸಗರಹಳ್ಳಿ ಗ್ರಾಮದ ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅವಲಂಬಿಸಿದ್ದಾರೆ.

ಈರೇಗೌಡನದೊಡ್ಡಿ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹಲವು ತಿಂಗಳುಗಳೆ ಕಳೆದಿವೆ. ಇಲ್ಲಿನ ನಿವಾಸಿಗಳು ಶುದ್ಧ ಕುಡಿಯುವ ನೀರಿನಿಂದ ವಂಚಿತರಾಗಿದ್ದಾರೆ. ದ್ವಿಚಕ್ರ ವಾಹನ ಇರುವವರು ಎರಡು ಕಿಲೋಮೀಟರ್ ದೂರವಿರುವ ಬೆಸಗರಹಳ್ಳಿಗೆ ಬಂದು ಶುದ್ಧ ಕುಡಿಯುವ ನೀರನ್ನು ತೆಗೆದುಕೊಂಡು ಹೋಗುವ ಪರಿಪಾಠವನ್ನು ಬೆಳಸಿಕೊಂಡಿದ್ದಾರೆ. 16 ಸಾವಿರ ಜನಸಂಖ್ಯೆ ಇರುವ ಬೆಸಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಏಕೈಕ ಶುದ್ಧ ಕುಡಿಯುವ ನೀರಿನ ಘಟಕ ಸಾಲದಾಗಿದೆ. ಇದರಿಂದ ಈ ಭಾಗದ ನಿವಾಸಿಗಳು ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅವಲಂಬಿಸಿದ್ದಾರೆ. ಸಾಲಿನಲ್ಲಿ ನಿಂತು ನೀರು ಕೊಂಡ್ಯೋಯುವುದೇ ಸಾಹಸಮಯವಾದ ಕೆಲಸವಾಗಿದೆ. ಆದ್ದರಿಂದ ತಕ್ಷಣ ಶುದ್ಧ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸ್ಥಳೀಯರಾದ ವೆಂಕಟೇಶ್, ಚೇತನ್ ಕುಮಾರ್ ಇತರರು ಒತ್ತಾಯಿಸಿದ್ದಾರೆ.

—————

ಕೋಟ್

ಬೆಸಗರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಮಾಡಲು ಸಂಬಂಧಪಟ್ಟವರಿಗೆ ಸೂಚಿಸಲಾಗುವುದು. ಶುದ್ಧ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಶೀಘ್ರಕ್ರಮ ವಹಿಸಲಾಗುವುದು.
-ಟಿ.ಎನ್. ಕೊಂದಡರಾಮ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ ಮದ್ದೂರು.

ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿಗೆ ತೊಂದರೆಯಾಗದಂತೆ ಸಂಬಂಧಿಸಿದವರಿಗೆ ಸೂಚಿಸಿ ತಕ್ಷಣ ಸಮಸ್ಯೆಯನ್ನು ಬಗೆಹರಿಸಲಾಗುವುದು. ಪ್ರತಿಯೊಬ್ಬರಿಗೂ ಶುದ್ದ ಕುಡಿಯುವ ನೀರು ದೊರೆಯಬೇಕು ಎಂಬುದು ನಮ್ಮ ಆದ್ಯತೆಯಾಗಿದ್ದು, ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಮತ್ತು ಪಂಚಾಯಿತಿ ಅಧಿಕಾರಿಗಳಿಗೆ ಸೂಕ್ತ ಕ್ರಮ ವಹಿಸುವಂತೆ ನಿರ್ದೇಶನ ನೀಡುತ್ತೇನೆ.
-ಜಿ.ಆರ್. ಮಂಜುನಾಥ್. ಕಾರ್ಯನಿರ್ವಹಣಾಧಿಕಾರಿ ತಾ.ಪಂ. ಮದ್ದೂರು.

ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿರುವುದರಿಂದ ಶುದ್ಧ ಕುಡಿಯುವ ನೀರಿಗಾಗಿ ಪರದಾಡಬೇಕಾದ ಪರಿಸ್ಥಿತಿ ಉಂಟಾಗಿದ್ದರೂ ಸಂಬಂಧಿಸಿದವರು ಯಾವುದೇ ಗಮನ ಹರಿಸದಿರುವುದು ವಿಪರ್ಯಾಸದ ಸಂಗತಿ. ಅಧಿಕಾರಿಗಳು ಚುನಾವಣೆಯ ನೆಪ ಹೇಳಿಕೊಂಡು ಸಾರ್ವಜನಿಕರನ್ನು ಶುದ್ಧ ಕುಡಿಯುವ ನೀರಿನಿಂದ ವಂಚಿಸುತ್ತಿದ್ದಾರೆ. ತಕ್ಷಣ ಸಮಸ್ಯೆ ಬಗೆಹರಿಸಬೇಕು.
– ಶ್ರೀಧರ್, ಚುಂಚೇಗೌಡನದೊಡ್ಡಿ ಸ್ಥಳೀಯ ವಾಸಿ.

ಮಾತಿಗೆ ಮಾತ್ರ ದೊಡ್ಡ ಪಂಚಾಯಿತಿ ಆದರೆ ಸೌಲಭ್ಯಗಳಲ್ಲಿ ಬಹಳ ಹಿಂದುಳಿದಿದೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರು ಶುದ್ಧ ಕುಡಿಯುವ ನೀರಿಗಾಗಿ ಅಲೆದಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಗಮನಹರಿಸಿ ಮೂಲ ಸೌಕರ್ಯಗಳಲ್ಲಿ ಒಂದಾದ ಶುದ್ಧ ಕುಡಿಯುವ ನೀರನ್ನು ಒದಗಿಸಲು ಕಾರ್ಯ ಪ್ರವೃತ್ತರಾಗಬೇಕು.
-ಬಿ.ಆರ್. ಚೇತನ್ ಕುಮಾರ್, ತಾಲೂಕು ಸಂಘಟನಾ ಸಂಚಾಲಕ ಡಿಎಸ್ಎಸ್.

ಸಂಬಂಧಿಸಿದ ಪೋಟೋಗಳಿವೆ

Oplus_0
Oplus_0
Oplus_131072
Oplus_0
Oplus_131072
Oplus_131072
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯಮುಖಪುಟಮೈಸೂರು ನಗರರಾಜಕೀಯ

ಸಿಎಂ ಕಾಲ್ಗುಣ ಸರಿ ಇಲ್ಲ ಅಂತಿದ್ರು.. ಈಗ ಎಲ್ಲಾ ಜಲಾಶಯ ತುಂಬಿದೆ : ವಿಪಕ್ಷಗಳಿಗೆ ಡಿಸಿಎಂ ಡಿಕೆಶಿ ಡಿಚ್ಚಿ

July 29, 2024
ಮಂಡ್ಯ

ಆರೋಗ್ಯವಂತ ಜೀವನಕ್ಕೆ ಸ್ವಚ್ಚತೆ ಕಾಪಾಡಿಕೊಳ್ಳಿ

July 20, 2024
ಮಂಡ್ಯ

ಎನ್ ಡಿಎ ಅಭ್ಯರ್ಥಿಗೆ ಭರ್ಜರಿಯಾಗಿ ಗೆಲ್ಲಿಸುತ್ತೇವೆ

March 19, 2024
ಮಂಡ್ಯ

ಸುಸಂಸ್ಕಾರ ಸಮಾಜಕ್ಕೆ ಕನಕರ ವಾಣಿ ಪಂಚಾಮೃತ

March 18, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?