PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ಪ್ರತಾಪ್ ಸಿಂಹ ರವರ ಜನಪರ ಕೆಲಸಗಳು ಬಿಜೆಪಿ ಗೆಲುವಿಗೆ ಸಹಕಾರಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ಪ್ರತಾಪ್ ಸಿಂಹ ರವರ ಜನಪರ ಕೆಲಸಗಳು ಬಿಜೆಪಿ ಗೆಲುವಿಗೆ ಸಹಕಾರಿ
ಮೈಸೂರು ಗ್ರಾಮಾಂತರ

ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ಪ್ರತಾಪ್ ಸಿಂಹ ರವರ ಜನಪರ ಕೆಲಸಗಳು ಬಿಜೆಪಿ ಗೆಲುವಿಗೆ ಸಹಕಾರಿ

ಪ್ರತಿನಿಧಿ
Last updated: April 24, 2024 5:10 pm
ಪ್ರತಿನಿಧಿ
Published April 22, 2024
Share
SHARE

*ಬಿಜೆಪಿ ಮುಖಂಡ ಪಿ. ಪ್ರಶಾಂತ್ ಗೌಡ ಹೇಳಿಕೆ

ಪ್ರತಿನಿಧಿ ವರದಿ ಪಿರಿಯಾಪಟ್ಟಣ

ದೇಶದ ಅಭಿವೃದ್ಧಿ ಹಾಗೂ ಜನಪರ ಆಡಳಿತಕ್ಕಾಗಿ ಮತದಾರರು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಮಹಾನಗರ ಪಾಲಿಕೆ ಮಾಜಿ ಸದಸ್ಯ, ಬಿಜೆಪಿ ಮುಖಂಡ ಪಿ.ಪ್ರಶಾಂತ್ ಗೌಡ ಮನವಿ ಮಾಡಿದರು.

ಪಿರಿಯಾಪಟ್ಟಣ ತಾಲೂಕಿನ ಹುಣಸವಾಡಿ ಮಹಾಶಕ್ತಿ ಕೇಂದ್ರದ ವಿವಿಧ ಗ್ರಾಮಗಳಲ್ಲಿ ಮೈತ್ರಿ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಚುನಾವಣಾ ಪ್ರಚಾರ ಕೈಗೊಂಡು ಅವರು ಮಾತನಾಡಿದರು.

- ಜಾಹೀರಾತು -

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರ ಪರ ಕ್ಷೇತ್ರದಾದ್ಯಂತ ಉತ್ತಮ ವಾತಾವರಣವಿದ್ದು,  ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ಪ್ರತಾಪ್ ಸಿಂಹ ಅವರ ಜನಪರ ಕೆಲಸಗಳು ಮತ್ತು ರಾಜ ಮನೆತನದ ಸಾರ್ವಜನಿಕ ಒಡನಾಟ ಗೆಲುವಿಗೆ ಸಹಕಾರಿಯಾಗಲಿದೆ. ಪಿರಿಯಾಪಟ್ಟಣ ತಾಲೂಕಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರು ಮಾಜಿ ಶಾಸಕ ಕೆ.ಮಹದೇವ್ ಹಾಗೂ ಎಚ್.ಸಿ ಬಸವರಾಜು ಅವರ ಮಾರ್ಗದರ್ಶನದಲ್ಲಿ ಪ್ರಚಾರ ಕೈಗೊಂಡಿದ್ದು ಈ ಬಾರಿ ತಾಲೂಕಿನಲ್ಲಿಯೂ ಮೈತ್ರಿ ಅಭ್ಯರ್ಥಿ ಪರ ಹೆಚ್ಚು ಮತ ಬರುವ ನಿರೀಕ್ಷೆ ಇದೆ ಎಂದರು.

ಮಾಜಿ ಶಾಸಕ ಎಚ್.ಸಿ ಬಸವರಾಜು  ಮಾತನಾಡಿ,  ಕಳೆದ ಎರಡು ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಮೂಲಕ ಇಡೀ ವಿಶ್ವವೇ ದೇಶದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಎನ್ ಡಿಎ ಸದೃಢ ಸರ್ಕಾರ ರಚಿಸಬೇಕೆಂಬ ಆಸೆ ಪ್ರತಿಯೊಬ್ಬ ಮತದಾರರ ಮನದಾಳದಲ್ಲಿದ್ದು ಜನಪರ ಕೆಲಸ ಮಾಡಬೇಕೆಂಬ ನಿಟ್ಟಿನಲ್ಲಿ ರಾಜಕೀಯಕ್ಕೆ ಪದಾರ್ಪಣೆ ಮಾಡಿರುವ ಯದುವೀರ್ ಒಡೆಯರ್ ಅವರ ಗೆಲುವಿಗೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಬೂತ್ ಮಟ್ಟದಿಂದ ಸಂಘಟಿತರಾಗಿ ಅತಿ ಹೆಚ್ಚು ಅಂತರದಿಂದ ಗೆಲ್ಲಿಸಲು ಕೋರಿದರು.

ತಾಲೂಕು ಪ್ರಧಾನ ಕಾರ್ಯದರ್ಶಿ ರವಿ, ಆಲನಹಳ್ಳಿ ಗಣೇಶ್, ಕಾರ್ಯದರ್ಶಿ ನಾಗೇಶ್, ಜಿಲ್ಲಾ ರೈತ ಮೋರ್ಚ ಕಾರ್ಯದರ್ಶಿ ಕಿರಂಗೂರು ಮೋಹನ್, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಮಾಗಳಿ ಸ್ವಾಮಿ, ಮುಖಂಡರಾದ ವಿಶ್ವನಾಥ್, ಮನು, ಸುಬ್ಬಣ್ಣ, ಮಂಜು, ನಾಗರಾಜ್, ಬಸವರಾಜ್, ಕುಮಾರ್, ರವಿ, ಷಣ್ಮುಗ ಸುಬ್ರಹ್ಮಣ್ಯ ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಇದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ಮೈಸೂರು : ಬೇಲಿಯೇ ಎದ್ದು ಹೊಲ ಮೇದಂತೆ, ಪೊಲೀಸ್‌ ಪೇದೆಯಿಂದಲೇ ಹನಿಟ್ರ್ಯಾಪ್‌ ನಡೆಸಿ 10 ಲಕ್ಷ ಸುಲಿಗೆಗೆ ಯತ್ನ..!

June 17, 2025
ಮುಖಪುಟಮೈಸೂರು ಗ್ರಾಮಾಂತರ

ಯಾವ ಕಾರಣಕ್ಕೆ ಇನ್ನೂ ಕಾರ್ತಿಕ್ ಬಂಧನ ತೋರಿಸಿಲ್ಲ? ಕೋರ್ಟ್‌ ಗೆ ಹಾಜರುಪಡಿಸಿಲ್ಲ?; ಸಿಎಂ ಗೆ ಹೆಚ್ಡಿಕೆ ಪ್ರಶ್ನೆ

May 22, 2024
ಮೈಸೂರು ಗ್ರಾಮಾಂತರ

ಸಂವಿಧಾನದಿಂದ ಬದುಕು ಹಸನು

June 26, 2024
ಮೈಸೂರು ಗ್ರಾಮಾಂತರ

ದಕ್ಷಿಣಕಾಶಿಯಲ್ಲಿ ಪಂಚಮಹಾರಥೋತ್ಸವದ ಸಂಭ್ರಮ

March 22, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?