ಶಾಸಕ ಕೊತ್ತೂರು ಡಾ.ಜಿ.ಮಂಜುನಾಥ್ ಅವರ ಅಭಿಮಾನಿ ತಾಲೂಕಿನ ಪಾಡಿಗಾನಹಳ್ಳಿ ಗ್ರಾಮದ ನವೀನ್ ಎಂಬುವವರು ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಅವರು ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದರಾಗಿ ಆಯ್ಕೆಯಾಗಲಿ ಎಂದು ತಿರುಪತಿ ಬೆಟ್ಟಕ್ಕೆ ಹರಕೆ ಹೊತ್ತು, ಮೊಣಕಾಲಿನಲ್ಲಿ ಮೆಟ್ಟಿಲು ಏರಿ, ತಿರುಮಲ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದರು.