ಚಿಕ್ಕಮಗಳೂರು : ಚಿಕ್ಕಮಗಳೂರು ಕೂಗಳತೆ ದೂರದಲ್ಲಿರುವ ಪ್ರತಿಷ್ಠಿತ ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆ ಆವರಣದಲ್ಲಿ 30 ಕಾಡಾನೆಗಳು ಬೀಡು ಬಿಟ್ಟಿದ್ದವು. ನಿನ್ನೆಯಷ್ಟೇ ಈ ಆನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಶಾಲಾ ಆವರಣದಿಂದ ಓಡಿಸಲಾಗಿದೆ. ಅದಾಗ್ಯೂ, ಈ ಬೀಟಮ್ಮ ಗ್ಯಾಂಗ್ ಉಪಟಳಕ್ಕೆ ಬ್ರೇಕ್ ಹಾಕಲು ಸಾಕಾನೆ ಅಭಿಮನ್ಯು ನೇತೃತ್ವದ ತಂಡ ಅಖಾಡಕ್ಕಿಳಿದಿದೆ. ಅಭಿಮನ್ಯು ನೇತೃತ್ವದಲ್ಲಿ ಬೀಟಮ್ಮ ಗ್ಯಾಂಗ್ ಕಾರ್ಯಚರಣೆ ನಡೆಯಲಿದೆ. ಅಭಿಮನ್ಯುಗೆ ಮಹೇಂದ್ರ ಸುಗ್ರೀವ, ಭೀಮ, ದುಬಾರೆ ಹಾಗೂ ನಾಗರಹೊಳೆಯಿಂದ ಆಗಮಿಸಿರುವ 8 ಕುಮ್ಕಿ ಆನೆಗಳು ಸಾಥ್ ನೀಡಲಿವೆ. ಸದ್ಯ ಅಭಿಮನ್ಯು ಮತ್ತು ತಂಡ ಮತ್ತಾವರ ಅರಣ್ಯ ಇಲಾಖೆಯ ವಸತಿ ಗೃಹದ ಆವರಣಕ್ಕೆ ಬಂದಿಳಿದಿದೆ. ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆ ಬಳಿಕ ಕಾರ್ಯಚರಣೆ ಆರಂಭಗೊಳ್ಳಲಿದ್ದು, ಮಧ್ಯಾಹ್ನದ ಬಳಿಕ ಕಾರ್ಯಚರಣೆ ಆರಂಭಿಸುವ ಸಾಧ್ಯತೆ ಇದೆ.