ಬೆಂಗಳೂರು: ಚೆಕ್-ಇನ್ ಬ್ಯಾಗ್ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ ಸೃಷ್ಟಿಸಿದ್ದಕ್ಕಾಗಿ ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಪ್ರಯಾಣಿಕರೊಬ್ಬರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಭದ್ರತಾ ತಪಾಸಣೆ ವೇಳೆ ವ್ಯಕ್ತಿಯು ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ಹೇಳಿ ಆತಂಕ ಸೃಷ್ಟಿಸಿದ್ದ. ಈ ವಿಚಾರವಾಗಿ ಪ್ರಯಾಣಿಕ ರಾಜೇಶ್ಕುಮಾರ್ ಬೇನಿವಾಲ್ ವಿರುದ್ಧ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಯಾನ ಸಂಸ್ಥೆಯ ಸಿಬ್ಬಂದಿ ವಿಮಾನ ನಿಲ್ದಾಣ ಪೊಲೀಸರಿಗೆ ದೂರು ನೀಡಿದ್ದರು. ನಂತರ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ವಿರುದ್ಧ ನಾನ್ ಕಾಗ್ನಿಸಿಬಲ್ ರಿಪೋರ್ಟ್ (NCR) ದಾಖಲಿಸಲಾಗಿದೆ.
ನಾನ್ ಕಾಗ್ನಿಸಿಬಲ್ ರಿಪೋರ್ಟ್ ಎಂದರೆ, ನ್ಯಾಯಾಲಯವು ನೀಡಿದ ವಾರಂಟ್ ಇಲ್ಲದೆ ಪೊಲೀಸರು ಆರೋಪಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗುವುದಿಲ್ಲ.