ಬೆಂಗಳೂರು, ಜನವರಿ 18: ಅತೃಪ್ತಿ ಶಮನಕ್ಕೆ 25 ಕೋಟಿ ರೂಪಾಯಿ ಅನುದಾನ ಕೊಡುವುದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಹೇಳಿತ್ತು. ಆದರೆ, ಈವರೆಗೂ ಅನುದಾನ ಕೊಟ್ಟಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಿಗೆ ಅನುದಾನ ಕೊಟ್ಟರೆ, ನಮ್ಮ ಶಾಸಕರಿಗೂ ಕೊಡಬೇಕು. ನಾನು ಸಿಎಂ ಆಗಿದ್ದಾಗ 25 ಕೋಟಿ ರೂ. ಅನುದಾನವನ್ನು ಕೊಟ್ಟಿದ್ದೇನೆ. ಹಾಗಾದರೆ ಇವರು ಈಗ ಎಷ್ಟು ಕೊಡಬೇಕು ಕಾಂಗ್ರೆಸ್ ಶಾಸಕರಿಗೆ? ಇವರ ಯೋಗ್ಯತೆಗೆ ಸಣ್ಣ ಬೋರ್ವೆಲ್ ಹಾಕಿಲ್ಲ ಎಂದು ಟೀಕಿಸಿದರು.