ಮೈಸೂರು: ಮೈಸೂರು- ಕೊಡಗು, ಚಾಮರಾಜನಗರ ಲೋಕಸಭಾ ಚುನಾವಣಾ ಅಖಾಡಕ್ಕೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎಂಟ್ರಿ ಕೊಟ್ಟಿದ್ದು, ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆ ಗರಿಗೇದರಿದೆ. ಮೈಸೂರಿನ ನಾಗರಹೊಳೆಯ ರೆಸಾರ್ಟ್ ವೊಂದರಲ್ಲಿ ಮಧ್ಯರಾತ್ರಿ 2 ಗಂಟೆವರೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿಚುನಾವಣೆಯ ಸಾಧಕಬಾಧಕಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಯದುವೀರ್ ಬಗೆಗಿನ ಚುನಾವಣೆ ಸೂಕ್ಷ್ಮತೆಗಳ ಬಗ್ಗೆ ತಿಳಿ ಹೇಳಿರುವ ಸಿದ್ದರಾಮಯ್ಯ, ಬೂತ್ ಮಟ್ಟದಲ್ಲಿ ಸಂಘಟನಾತ್ಮಕವಾಗಿ ಚುನಾವಣೆ ನಡೆಸಲು ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಹಾಲಿ ಸಚಿವರುಗಳು, ಶಾಸಕರು, ಪರಾಜಿತ ಅಭ್ಯರ್ಥಿಗಳು ಸೇರಿ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದರು. ಇನ್ನು ಎರಡು ದಿನಗಳ ಕಾಲ ರೆಸಾರ್ಟ್ನಲ್ಲೇ ಸಿದ್ದರಾಮಯ್ಯ ತಂಗಲಿದ್ದು, ವಿಶ್ರಾಂತಿ ನೆಪದಲ್ಲಿ ಚುನಾವಣಾ ತಂತ್ರಗಾರಿಕೆ ಮಾಡಲಿದ್ದಾರೆ.