ಹಾಸನ : ಕ್ಷುಲ್ಲಕ ಕಾರಣಕ್ಕೆಕಂಡಕ್ಟರ್ ಮೇಲೆ ಅನ್ಯಕೋಮಿನ ಮಹಿಳೆಯರು ಹಲ್ಲೆ ಮಾಡಿ ಮೊಬೈಲ್ ಹೊಡೆದು ಹಾಕಿರುವ ಘಟನೆ ಹಾಸನದ ಸಾರಿಗೆ ಬಸ್ ನಿಲ್ದಾಣದಲ್ಲಿ ನಿನ್ನೆ ರಾತ್ರಿ ನಡೆದಿದೆ. ಹಾಸನದಿಂದ ಸುಬ್ರಮಣ್ಯಕ್ಕೆ ತೆರಳುತ್ತಿದ್ದ ಬಸ್ ಪ್ರಯಾಣಿಕರಿಂದ ಸಂಪೂರ್ಣ ಭರ್ತಿಯಾಗಿದ್ದರು ಮೂವರು ಮಹಿಳೆಯರು ಬಸ್ ಹತ್ತಿದ್ದಾರೆ. ಈ ವೇಳೆ ನಿರ್ವಾಹಕ ಸೀಟ್ ಇಲ್ಲ, ಯಾರಾದರೂ ಇಳಿಯುವವರಿದ್ದರೆ ಬಸ್ ನಿಲ್ದಾಣದಲ್ಲಿ ಇಳಿಯಿರಿ ಎಂದಿದ್ದಾರೆ. ಬಸ್ ಹೊರಟ ನಂತರ ಮೂವರು ಅನ್ಯಕೋಮಿನ ಮಹಿಳೆಯರು ಬಸ್ ನಿಲ್ಲಿಸಿ ಇಳಿಯುತ್ತೇವೆ ಎಂದಿದ್ದಾರೆ. ನಾನು ಅಲ್ಲಿಯೇ ಹೇಳಿದೆ ಹೀಗೇಕೆ ಮಾಡುತ್ತೀರಿ ಮುಂದೆ ನಿಲ್ಲಿಸುತ್ತೇನೆ ಅಲ್ಲಿ ಇಳಿಯಿರಿ ಎಂದು ನಿರ್ವಾಹಕ ಹೇಳಿದ್ದಾರೆ. ಚಲಿಸುತ್ತಿದ್ದ ಬಸ್ನಿಂದಲೇ ಮಹಿಳೆಯರು ಇಳಿಯುವ ಯತ್ನ ಮಾಡಿದಾಗ ಬಸ್ ನಿಲ್ಲಿಸಿದ್ದಾರೆ. ಇದರಿಂದ ಕೆರಳಿದ ಮಹಿಳೆಯರು ಕಂಡಕ್ಟರ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ. ಇದನ್ನು ತನ್ನ ಮೊಬೈಲ್ನಲ್ಲಿ ನಿರ್ವಾಹಕ ವಿಡಿಯೋ ಮಾಡುತ್ತಿದ್ದು, ಮೊಬೈಲ್ ಕಸಿದುಕೊಂಡು ಹೊಡೆದುಹಾಕಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇನ್ನು ತಮ್ಮ ತಪ್ಪಿನ ಅರಿವಾಗುತ್ತಿದ್ದಂತೆ ನಿರ್ವಾಹಕರ ಬಳಿ ಕ್ಷಮೆ ಕೇಳಿ ಹೊಸ ಮೊಬೈಲ್ ಕೊಡಿಸಿ ಪೊಲೀಸ್ ಠಾಣೆಗೆ ದೂರು ನೀಡದಂತೆ ಮಹಿಳಮನವಿ ಮಾಡಿದ್ದಾರೆ. ನಂತರ ಕಂಡಕ್ಟರ್ ಪೊಲೀಸ್ ಠಾಣೆಗೆ ದೂರು ನೀಡದೆ ಪ್ರಕರಣ ಇತ್ಯಾರ್ಥ ಮಾಡಿಕೊಂಡು ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ.