ಬೆಳಗಾವಿ : ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಆಹ್ವಾನ ಮತ್ತು ದೇವಸ್ಥಾನಕ್ಕೆ ದೇಣಿಗೆ ನೀಡಿರುವ ವಿಚಾರವಾಗಿ ಬೆಳಗಾವಿಯ ಘಟಾನು ಘಟಿ ನಾಯಕರ ನಡುವೆ ವಾಗ್ಯುದ್ದ ಶರುವಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿರುವ ವಿಚಾರವಾಗಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ನಡುವೆ ಮಾತಿನ ಜಟಾಪಟಿ ನಡೆದಿದೆ. ಪ್ರತಿಯೊಬ್ಬರು ಅಲ್ಪಮತಿಗೆ ಹೊಳೆದಷ್ಟು ಮಾತನಾಡುತ್ತಾರೆ. ಅಲ್ಪಮತಿಗಳ ಬಗ್ಗೆ ನಾನು ಹೆಚ್ಚು ಒತ್ತುಕೊಡುವುದಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಅಲ್ಪಮತಿ ಎಂದು ಜರಿದರು.