ಮೈಸೂರು: ಒಂದೇ ದಿನ ಎರಡು ಕಡೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಎರಡು ಚಿರತೆಗಳು ಬಿದ್ದಿವೆ.ತಿ.ನರಸೀಪುರ ತಾಲ್ಲೂಕಿನ ಕುರುಬಾಳಹುಂಡಿ ಗ್ರಾಮದಲ್ಲಿ 4 ವರ್ಷದ ಗಂಡು ಚಿರತೆ ಹಾಗೂ ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿ 5 ವರ್ಷದ ಗಂಡು ಚಿರತೆ ಸೆರೆಯಾಗಿದೆ. ಕಳೆದ ಹಲವು ತಿಂಗಳಿನಿಂದ ಚಿರತೆ ಹಾವಳಿ ಹೆಚ್ಚಾಗಿ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದವು. ಅಲ್ಲದೆ ಜಮೀನಿಗೆ ಹೋಗಲು ಗ್ರಾಮಸ್ಥರು ಹೆದರುವ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಚಿರತೆಗಳ ಓಡಾಟ ಗಮನಿಸಿ ಬೋನು ಇರಿಸಲಾಗಿತ್ತು. ಇದೀಗ ಎರಡು ಚಿರತೆಗಳು ಬೋನಿಗೆ ಬಿದ್ದಿದ್ದು, ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ ಸುರಕ್ಷಿತ ಸ್ಥಳಕ್ಕೆ ಚಿರತೆಗಳನ್ನು ರವಾನಿಸಿದ್ದಾರೆ.