ಮೈಸೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಮೈಸೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಮುಡಾ ಎಇಇ ಯಜ್ಞೇಂದ್ರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಅನೇಕ ದೂರುಗಳು ಬಂದ ಹಿನ್ನೆಲೆ ಬೆಳ್ಳಂಬೆಳಗ್ಗೆ ಯಜ್ಞೇಂದ್ರ ಅವರ ಜೆಪಿ ನಗರದ ಮನೆ ಹಾಗೂ ವಿಜಯ ನಗರದ ಫ್ಲಾಟ್ ಹಾಗೂ ಕೆ.ಆರ್.ನಗರದ ಅಣ್ಣನ ಮನೆಯಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.