ಮಂಡ್ಯ : ತಾಲೂಕಿನ ಕೆರಗೋಡು ಹನುಮ ಧ್ವಜ ತೆರವು ಖಂಡಿಸಿ ನಾಳೆ ಬಜರಂಗದಳ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳು ಮಂಡ್ಯ ನಗರ, ಕೆರಗೋಡು ಗ್ರಾಮ ಬಂದ್ಗೆ ಕರೆ ಕೊಟ್ಟಿದೆ. ಬಜರಂಗದಳ ವಿಶ್ವ ಹಿಂದೂ ಪರಿಷತ್, ಶ್ರೀರಾಮಭಜನಾ ಮಂಡಳಿ ನೀಡಿದ ಬಂದ್ ಕರೆಗೆ ಇಂದು ನಡೆಯುವ ಸಭೆಯ ನಂತರ ಬಿಜೆಪಿ ಬೆಂಬಲ ಸೂಚಿಸುವ ಸಾಧ್ಯತೆ ಇದೆ. ಜಿಲ್ಲಾಡಳಿತ ಬಂದ್ ಕೈಬಿಡುವಂತೆ ಮನವಿ ಮಾಡಿದರೂ ಖ್ಯಾರೆ ಎನ್ನದ ಹಿಂದೂಪರ ಸಂಘಟನೆಗಳು ನಾಳೆ ಬಂದ್ ನಡೆಸಲು ಮುಂದಾಗಿವೆ. ಈ ಹಿನ್ನೆಲೆ, ಇಂದು ಮಧ್ಯಾಹ್ನ ಜಿಲ್ಲಾ ಬಿಜೆಪಿ ಸಭೆ ಕರೆದಿದ್ದು, ಚರ್ಚೆ ನಡೆಸಿ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ. ಆದರೆ, ಪ್ರತಿಭಟನೆಯಲ್ಲಿ ಕೈಜೋಡಿಸಿದ್ದ ಮೈತ್ರಿ ಪಕ್ಷ ಜೆಡಿಎಸ್ ಮಂಡ್ಯ ಬಂದ್ನಿಂದ ಅಂತರ ಕಾಯ್ದುಕೊಂಡಿದೆ.