ಮೈಸೂರು: ನನ್ನ ತೆರಿಗೆ ನನ್ನ ಹಕ್ಕು ಅಲ್ಲ. ಅದು ಸರಕಾರದ ವೈಫಲ್ಯ ಮುಚ್ಚಿಕೊಳ್ಳುವ ಹೋರಾಟ ಅಷ್ಟೆ ಎಂದು ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಳಗ್ಗೆ 2.45 ಕ್ಕೆ ಅಮಿತ್ ಶಾ ಬಂದರು. ಹೀಗಾಗಿ ಸಭೆಯ ಕಾರ್ಯಕ್ರಮದಲ್ಲಿ ಬದಲಾವಣೆ ಆಗಿದೆ.ಮೊದಲು ಸುತ್ತೂರು ಮಠಕ್ಕೆ ಭೇಟಿ, ನಂತರ ಸಭೆ ನಡೆಸುತ್ತಾರೆ. ನಾಲ್ಕು ಲೋಕಸಭಾ ಕ್ಷೇತ್ರದಿಂದ ಕಾರ್ಯ ತಂತ್ರ ಹೇಗಿರಬೇಕು ಎಂದು ಚರ್ಚೆ ಮಾಡುತ್ತೇವೆ. ಜೆಡಿಎಸ್ – ಬಿಜೆಪಿ ಹೊಂದಾಣಿಕೆ ಇರುವ ಕಾರಣ ಒಟ್ಟಾಗಿ ಚುನಾವಣೆ ಎದುರಿಸಬೇಕು. ಸಿಎಂ ತವರೂರಿಂದ ಆರಂಭವಾಗಿದ್ದು ವಿಶೇಷ ಅಲ್ಲ. ಚಾಮರಾಜನಗರ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿ ಹುಡುಕಬೇಕು. ಮಂಡ್ಯದಲ್ಲಿ ಬದಲಾದ ರಾಜಕೀಯ ಸ್ಥಿತಿಯಲ್ಲಿ ಜೆಡಿಎಸ್ ಆ ಸ್ಥಾನ ಕೇಳ್ತಿದೆ ಅಂತ ಟಿವಿಯಲ್ಲಿ ನೋಡಿದ್ದೇವೆ. ನಮ್ಮಲ್ಲಿ ಈ ಬಗ್ಗೆ ಚರ್ಚೆ ಆಗಿಲ್ಲ. ಇವತ್ತು ಆ ಬಗ್ಗೆ ಚರ್ಚೆ ಆದರೂ ಆಗಬಹುದು ಎಂದು ತಿಳಿಸಿದರು. ಇದೇ ವೇಳೆ ಕಾಂಗ್ರೆಸ್ ಹೋರಾಟ ವಿಚಾರಕ್ಕೆ ಮಾತನಾಡಿ ನನ್ನ ತೆರಿಗೆ ನನ್ನ ಹಕ್ಕು ಅಲ್ಲ. ಅದು ಸರಕಾರದ ವೈಫಲ್ಯ ಮುಚ್ಚಿಕೊಳ್ಳುವ ಹೋರಾಟ ಅಷ್ಟೆ. ನಿಮ್ಮ ಸರಕಾರ ಬಂದು ಎಂಟು ತಿಂಗಳಲ್ಲಿ ಘೋಷಿಸಿದ ಒಂದು ಅಭಿವೃದ್ಧಿ ಕಾರ್ಯ ತಿಳಿಸಿ? ಯಾವ ಯೋಜನೆ ಘೋಷಣೆ ಮಾಡಿಲ್ಲ. ಹೊಸ ನಾಟಕ ಸಿಎಂ ನೇತೃತ್ವದಲ್ಲಿ ನಡೆಯುತ್ತಿದೆ. ಒಂದು ಸುಳ್ಳು ನೂರು ಬಾರಿ ಹೇಳಿ ಜನರಿಗೆ ಮಂಕು ಎರಚುವ ಕೆಲಸ ಸಿಎಂ ಮಾಡ್ತಿದ್ದಾರೆ.ಚುನಾವಣೆಯಲ್ಲಿ ಇದು ಕಾಂಗ್ರೆಸ್ ಗೆ ದುಷ್ಪರಿಣಾಮ ಬೀರುವುದು ನಿಶ್ಚಿತ ಎಂದರು.