ಚಾಮರಾಜನಗರ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತಸಂಘದ ಕಾರ್ಯಕರ್ತರು ಚಾಮರಾಜನಗರದ ಹೊರ ವಲಯದ ಜಾಲಹಳ್ಳಿಹುಂಡಿ ಬಳಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ನಗರದ ಹೊರ ವಲಯದ ಜಾಲಹಳ್ಳಿಹುಂಡಿ ಬಳಿ ಜಮಾಯಿಸಿದ ಪ್ರತಿಭಟನಾಕಾರರಿಗೆ ರೈತ ಸಂಘದ ಮುಖಂಡ ಹೊನ್ನೂರು ಪ್ರಕಾಶ್ ಸಂವಿಧಾನದ ಪೀಠಿಕೆಯನ್ನು ಭೋದಿಸಿದರು. ಬಳಿಕ ಪ್ರತಿಭಟನಾಕಾರರು ಹಸಿರು ಟವಲ್ ತಿರುಗಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.