ಮೈಸೂರು : ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ಪಕ್ಷದ ಕೆಲ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ಶಮನೂರು ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕಾಂಗ್ರೆಸ್ ಕೆಲ ಹಿರಿಯ ನಾಯಕರು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಹೆಚ್ ವಿಶ್ವನಾಥ್, ಹಣವಿದೆ ಎಲ್ಲರನ್ನೂ ಕೊಂಡುಕೊಳ್ಳಬಹುದು ಅಂದುಕೊಂಡಿದ್ದಾರೆ. ನಮ್ಮವರೇ ಸರಿ ಇಲ್ಲ, ಸಿಎಂ, ಮಂತ್ರಿಗಳು ಅವರ ಮೇಲೆ ಡಿಪೆಂಡ್ ಆಗಿದ್ದಾರೆ. ಅಲ್ಲಿಗೆ ಹೋದಾಗ ಶಾಮನೂರು ಗೆಸ್ಟ್ ಹೌಸ್ ನಲ್ಲೇ ಮಲಗುತ್ತಾರೆ. ಕಾಂಗ್ರೆಸ್ ಜೀವಂತವಾಗಿದ್ದರೆ ಶಾಮನೂರುರನ್ನು ಅಮಾನತು ಮಾಡಿ ಎಂದು ಆಗ್ರಹಿಸಿದರು.