ಮೈಸೂರು: ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿ ಚುನಾವಣೆ ಮಾಡುತ್ತೇವೆ ಎಂದು ಕಾಂಗ್ರೆಸ್ ಒಕ್ಕಲಿಗ ಅಸ್ತ್ರಕ್ಕೆ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ತಿರುಗೇಟು ಕೊಟ್ಟಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ನಾವು ಸಮಾಜವನ್ನು ಒಗ್ಗೂಡಿಸಿ ದೇಶದ ಒಳಿತಿಗೆ ಕೆಲಸ ಮಾಡುತ್ತೇವೆ. ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲರು ಪ್ರೀತಿಯಿಂದ ಮಾತನಾಡಿಸುತ್ತಿದ್ದಾರೆ. ಮುಂದಿನ ಹಂತದ ಪ್ರಚಾರದಲ್ಲಿ ಜೆಡಿಎಸ್ ನವರು ನಮ್ಮೊಟ್ಟಿಗೆ ಬರಲಿದ್ದಾರೆ. ಪ್ರಚಾರದ ಬಗ್ಗೆ ಎಲ್ಲಾ ತೀರ್ಮಾನವನ್ನು ಪಕ್ಷದ ನಿರ್ಧರಿಸಲಿದೆ ಎಂದು ಹೇಳಿದರು.