ಮೈಸೂರು : ಅಮಿತ್ ಶಾಗೆ ಕನ್ನಡಿಗರ ಮತ ಕೇಳಲು ಯಾವ ನೈತಿಕತೆ ಇದೆ ಎಂದು ಅಮಿತ್ ಶಾ ರಾಜ್ಯ ಭೇಟಿ ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ನಗರದಲ್ಲಿ ಮಾತನಾಡಿದ ಸಿದ್ದರಾಮಯ್ಯ , ನಮಗೆ ಬರಗಾಲದ ಪರಿಹಾರ ಐದು ಪೈಸೆಯೂ ಬಂದಿಲ್ಲ.ಪರಿಹಾರ ಕೊಡದೆ ಹೇಗೆ ಬಂದು ಇಲ್ಲಿ ಮತ ಕೇಳುತ್ತಾರೆ. ಅಮಿತ್ ಶಾ ತಮ್ಮ ಮನೆಯಿಂದ ಏನು ಬರ ಪರಿಹಾರದ ಹಣ ಕೊಡುತ್ತಾರಾ. ಅದು ನಮಗೆ ಭಿಕ್ಷೆನಾ. ಎಚ್.ಡಿ ಕುಮಾರಸ್ವಾಮಿ ರಾಜ್ಯಕ್ಕೆ ಪರಿಹಾರ ಕೊಡಿಸಿ ನಂತರ ಕರೆದುಕೊಂಡು ಬರಬೇಕಿತ್ತು. ಕನ್ನಡಿಗರು ಈ ಚುನಾವಣೆಯಲ್ಲಿ ಅವರಿಗೆ ಸರಿಯಾದ ಪಾಠ ಕಲಿಸುತ್ತಾರೆ. ಕುಮಾರಸ್ವಾಮಿ ಸ್ವಾಮಿ ಬಿಜೆಪಿ ದೊಡ್ಡ ವಕ್ತಾರ ರೀತಿ ಇದ್ದಾರೆ. ಅವರಿಗೆ ಇದನ್ನೆಲ್ಲಾ ಕೇಳಬೇಕು. ಪರಿಹಾರ ಕೊಡದನ್ನ ಕುಮಾರಸ್ವಾಮಿ ಸಮರ್ಥಿಸಿಕೊಳ್ಳುತ್ತಾರಾ ಎಂದು ಎಚ್.ಡಿ. ಕುಮಾರಸ್ವಾಮಿಗೆ ಪ್ರಶ್ನೆ ಕೇಳಿದರು.
ಇನ್ನು ಇದೇ ವೇಳೆ ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ನನ್ನ ಮಗನಿಗೆ ಚುನಾವಣಾ ಆಯೋಗದಿಂದ ನೋಟಿಸ್ ಬಂದಿದೆ. ಅದಕ್ಕೆ ಉತ್ತರವನ್ನು ಕೊಟ್ಟಿದ್ದೇವೆ. ನಾನು ಆ ಬಗ್ಗೆ ಮತ್ತೇನು ಪ್ರತಿಕ್ರಿಯೆ ಕೊಡುವುದಿಲ್ಲ. ನೋಟಿಸ್ ನಲ್ಲಿ ಏನಿದೆ ಎಂಬ ಬಗ್ಗೆ ನನ್ನ ಮಗನಿಗೆ ಗೊತ್ತು ಎಂದು ಹೇಳಿದರು.