ಪ್ರತಿನಿಧಿ ವರದಿ ಚಾಮರಾಜನಗರ
ದೇಶದ ಸುಭದ್ರತೆಗಾಗಿ ಮತ್ತೆ ನರೇಂದ್ರಮೋದಿ ಅವರು ಪ್ರಧಾನಿಯಾಗುವುದು ಅನಿವಾರ್ಯವಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಂಗಲ ಶಿವಕುಮಾರ್ ಹೇಳಿದರು.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಕುಂತೂರುಮೋಳೆ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಅವರ ಪರ ಪ್ರಚಾರ ತೊಡಗಿ ಮಾತನಾಡಿ, ಅನೇಕ ವರ್ಷಗಳಿಂದ ಹಿಂದುಗಳ ಭಾವನೆಯಂತೆ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ಅಯೋಧ್ಯೆಯಲ್ಲಿ ಭಗೀರಥನ ವಂಶಸ್ಥರಾದ ರಾಮ ಮಂದಿರ ನಿರ್ಮಾಣ ಮೂಲಕ ಉಪ್ಪಾರರ ಘನತೆಯನ್ನು ಹೆಚ್ಚಿಸಿದೆ ಎಂದರು.
ಅಭ್ಯರ್ಥಿ ಎಸ್.ಬಾಲರಾಜು ಸರಳ, ಸಜ್ಜನಿಕೆ ವ್ಯಕ್ತಿಯಾಗಿದ್ದು ಅವರನ್ನು ಗೆಲ್ಲಿಸುವ ಮೂಲಕ ಮೋದಿಯವರ ಕೈ ಬಲಪಡಿಸಬೇಕು. ಅ ಮೂಲಕ ದೇಶವನ್ನು ಬಲಪಡಿಸಿ ಎಂದರು.
ಬಿಜೆಪಿ ಒ.ಬಿ.ಸಿ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಸೋಮಣ್ಣ ಉಪ್ಪಾರ, ರೈಲ್ವೆ ಸಲಹಾ ಸಮಿತಿಯ ಸದಸ್ಯ ನಟರಾಜೇಗೌಡ, ಜಿಲ್ಲಾ ಉಪಾಧ್ಯಕ್ಷ ಟಗರಪುರ ರೇವಣ್ಣ, ತಾ.ಪಂ. ಮಾಜಿ ಸದಸ್ಯ ಮರಿಸ್ವಾಮಿ, ಕುಣಗಳ್ಳಿ ರಘು, ಸೋಮಣ್ಣ ಇತರರಿದ್ದರು.
6ಸಿಎಚ್ಎನ್.2:ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಕುಂತೂರುಮೋಳೆ ಗ್ರಾಮದಲ್ಲಿ ಬಿಜೆಪಿ ಮುಖಂಡರು ಪಕ್ಷದ ಅಭ್ಯರ್ಥಿ ಎಸ್.ಬಾಲರಾಜ್ ಪರ ಪ್ರಚಾರ ಮಾಡಿದರು.