
ಪ್ರತಿನಿಧಿ ವರದಿ ಚಾಮರಾಜನಗರ
ತಾಲೂಕಿನ ಮಂಗಲ ಹಾಗೂ ಭೋಗಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚಿಸಿದರು.
ಮಂಗಲ, ಮಂಗಲ ಹೊಸೂರು, ಹುಲ್ಲೇಪುರ, ಮಹಾಂತಾಳಪುರ,ಕರಡಿಮೋಳೆ, ಯಡಿಯೂರು, ಸಪ್ಪಯ್ಯನಪುರ, ಭೋಗಾಪುರ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ಗೆ ಮತ ನೀಡುವಂತೆ ಮನವಿ ಮಾಡಿದರು.
ನಂತರ ಮಾತನಾಡಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ಮೊದಲ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದರು. ನುಡಿದಂತೆ ನಡೆದ ಪಕ್ಷ ನಮ್ಮ ಕಾಂಗ್ರೆಸ್ ಎಂದರು.
ಅನ್ನಭಾಗ್ಯ, ಶಕ್ತಿ ಯೋಜನೆ, ಯುವನಿಧಿ, ಗೃಹ ಜ್ಯೋತಿ, ಗೃಹಲಕ್ಷ್ಮಿ ಈ ಐದು ಗ್ಯಾರೆಂಟಿ ಗಳನ್ನು ಸಮರ್ಪಕವಾಗಿ ಜಾರಿ ಮಾಡಿರುವಂತಹ ಏಕೈಕ ಪಕ್ಷ ಎಂದರೆ ಅದು ಕಾಂಗ್ರೆಸ್. ಯಾವಾಗಲೂ ಸಾಮಾನ್ಯ ಜನರು, ಬಡವರ ಪರವಾಗಿರುವ ಪಕ್ಷವಾಗಿದೆ. ಆದ್ದರಿಂದ ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಅವರು ಸ್ಪರ್ಧಿಸಿದ್ದಾರೆ. ನಿಮ್ಮ ಎಲ್ಲರ ಸಹಕಾರ ನೀಡಿ ಅವರನ್ನು ಅತ್ಯಧಿಕ ಮತಗಳನ್ನು ನೀಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಸ್.ಗುರುಸ್ವಾಮಿ, ಮಹಮದ್ಅಸ್ಗರ್, ಒಬಿಸಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎ.ಮಹದೇವಶೆಟ್ಟಿ, ಕೋಡಿಮೋಳೆ ಪ್ರಕಾಶ್, ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಂದ್ರ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ನಾಗಯ್ಯ, ಕಾರ್ಮಿಕ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷ ಮೂರ್ತಿ, ಮಂಗಲ ಗ್ರಾ.ಪಂ. ಅಧ್ಯಕ್ಷ ಅಣ್ಣಪ್ಪಸ್ವಾಮಿ, ಮಾಜಿ ಅಧ್ಯಕ್ಷ ಶಿವಣ್ಣ, ನಂಜುಂಡಶೆಟ್ಟಿ, ಶಿವಣ್ಣ ಸೇರಿದಂತೆ ಇತರರು ಇದ್ದರು.
7ಸಿಎಚ್ಎನ್.1: ಚಾಮರಾಜನಗರ ತಾಲೂಕಿನ ಮಂಗಲ ಹಾಗೂ ಭೋಗಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚಿಸಿದರು.
